ಹಿಮಂತ್ ಬಿಸ್ವಾ ಶರ್ಮಾ-ಶಾರುಖ್ ಖಾನ್ 
ಬಾಲಿವುಡ್

ಪಠಾಣ್ ವಿರುದ್ಧದ ಪ್ರತಿಭಟನೆ, 'ಶಾರುಖ್ ಖಾನ್ ಯಾರು...': ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಬಾಲಿವುಡ್ ನಟ ಶಾರುಖ್ ಖಾನ್ ಯಾರು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೇಳಿದ್ದಾರೆ.

ಗುವಾಹಟಿ: ಬಾಲಿವುಡ್ ನಟ ಶಾರುಖ್ ಖಾನ್ ಯಾರು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೇಳಿದ್ದಾರೆ. 

ಶುಕ್ರವಾರ ನಗರದ ನರೇಂಗಿಯಲ್ಲಿನ ಚಿತ್ರಮಂದಿರದಲ್ಲಿ ಭಜರಂಗದಳದ ಕಾರ್ಯಕರ್ತರು ಗಲಾಟೆ ಮಾಡಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಬಗ್ಗೆ ಇಂದು ಗುವಾಹಟಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಸ್ಸಾಂ ಮುಖ್ಯಮಂತ್ರಿ, 'ಶಾರುಖ್ ಯಾರು? ಅವರ ಬಗ್ಗೆ ಮತ್ತು ಅವರ ಚಿತ್ರದ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಹೇಳಿದರು.

ಇನ್ನು ಶಾರುಖ್ ಖಾನ್ ಬಾಲಿವುಡ್ ಸೂಪರ್‌ಸ್ಟಾರ್ ಎಂದು ವರದಿಗಾರರು ಮುಖ್ಯಮಂತ್ರಿಗೆ ಹೇಳಿದಾಗ, ಹಿಮಾಂತ ಬಿಸ್ವಾ ಶರ್ಮಾ, ರಾಜ್ಯದ ಜನರು ಹಿಂದಿಯ ಬದಲು ಅಸ್ಸಾಮಿ ಚಿತ್ರಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಈ ಥಿಯೇಟರ್ ನಲ್ಲಿ ನಟ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರ ಜನವರಿ 26ರಂದು ಪ್ರದರ್ಶನಗೊಳ್ಳಲಿದೆ. ಆದರೆ ಅದಕ್ಕೆ ವಿರೋಧ ವ್ಯಕ್ತಪಡಿಸಿ ಸಂಘಟನೆಯ ಸ್ವಯಂಸೇವಕರು ಚಿತ್ರದ ಪೋಸ್ಟರ್ ಗಳನ್ನು ಹರಿದು ಸುಟ್ಟು ಹಾಕಿದ್ದರು. ಈ ಬಗ್ಗೆ ಸಿಎಂ ಬಿಸ್ವಾ ಶರ್ಮಾ ಅವರು, 'ಶಾರುಖ್ ಖಾನ್ ಈ ಸಮಸ್ಯೆಯ ಬಗ್ಗೆ ನನ್ನೊಂದಿಗೆ ಮಾತನಾಡಿಲ್ಲ, ಆದರೆ ಬಾಲಿವುಡ್‌ನ ಅನೇಕ ಜನರು ನನ್ನೊಂದಿಗೆ ಮಾತನಾಡುತ್ತಾರೆ. ಅವರು ಮಾತನಾಡಿದರೆ, ನಾನು ವಿಷಯವನ್ನು ಪರಿಶೀಲಿಸುತ್ತೇನೆ. ಕಾನೂನು ಸುವ್ಯವಸ್ಥೆ ಉಲ್ಲಂಘನೆಯಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದರು. 

'ಪಠಾಣ್' ಚಿತ್ರದ 'ಬೇಷರಂ ರಂಗ್...' ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿಯಲ್ಲಿ ಕಾಣಿಸಿಕೊಂಡ ನಂತರ ಚಿತ್ರದ ಕುರಿತಂತೆ ವಿವಾದ ಭುಗಿಲೇದಿತ್ತು. ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಮುಖಂಡರು ಚಿತ್ರವನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT