ಗೌರಿ ಮತ್ತು ಶಾರೂಕ್ ಖಾನ್ 
ಬಾಲಿವುಡ್

ಲಕ್ನೋ: ಗೌರಿ ಖಾನ್ ವಿರುದ್ಧ ವಂಚನೆ ಕೇಸ್; ಶಾರುಖ್ ಪತ್ನಿ ಮೇಲೆ ಎಫ್ ಐ ಆರ್ ದಾಖಲು!

ಬಾಲಿವುಡ್​ ನಟ ಶಾರುಖ್ ಖಾನ್ ಅವ ಪತ್ನಿ ಗೌರಿ ಖಾನ್ ವಿರುದ್ಧ ಇಲ್ಲಿನ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೌರಿ ಖಾನ್​ ರಾಯಭಾರತ್ವ ವಹಿಸಿದ್ದ ತುಳಸಿಯಾನಿ ಕಂಪನಿಯು ವ್ಯಕ್ತಿಯೊಬ್ಬರಿಗೆ ನಿಗದಿತ ಸಮಯದಲ್ಲಿ ಫ್ಲ್ಯಾಟ್​ ನೀಡದ ಹಿನ್ನೆಲೆಯಲ್ಲಿ ಗ್ರಾಹಕರು ಗೌರಿ ಮತ್ತು ಕಂಪನಿಯ ನಿರ್ದೇಶಕರ ವಿರುದ್ಧ ದೂರು ನೀಡಿದ್ದಾರೆ.

ಬಾಲಿವುಡ್​ ನಟ ಶಾರುಖ್ ಖಾನ್ ಅವ ಪತ್ನಿ ಗೌರಿ ಖಾನ್ ವಿರುದ್ಧ ಇಲ್ಲಿನ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೌರಿ ಖಾನ್​ ರಾಯಭಾರತ್ವ ವಹಿಸಿದ್ದ ತುಳಸಿಯಾನಿ ಕಂಪನಿಯು ವ್ಯಕ್ತಿಯೊಬ್ಬರಿಗೆ ನಿಗದಿತ ಸಮಯದಲ್ಲಿ ಫ್ಲ್ಯಾಟ್​ ನೀಡದ ಹಿನ್ನೆಲೆಯಲ್ಲಿ ಗ್ರಾಹಕರು ಗೌರಿ ಮತ್ತು ಕಂಪನಿಯ ನಿರ್ದೇಶಕರ ವಿರುದ್ಧ ದೂರು ನೀಡಿದ್ದಾರೆ.

ಮುಂಬೈನ ಅಂಧೇರಿ ಪೂರ್ವ ಪ್ರದೇಶದ ನಿವಾಸಿ ಕಿರಿತ್ ಜಸ್ವಂತ್ ಸಾಹ್ ಎಂಬುವರು ತುಳಸಿಯಾನಿ ಕಂಪನಿಯ ನಿರ್ಮಾಣದ ಬಹುಮಹಡಿ ಕಟ್ಟಡದಲ್ಲಿ ಫ್ಲ್ಯಾಟ್​ ಖರೀದಿಸಿದ್ದರು. ಇದಕ್ಕಾಗಿ ಅವರು 86 ಲಕ್ಷ ರೂಪಾಯಿಗೆ ಒಪ್ಪಂದ ಮಾಡಿಕೊಂಡಿದ್ದರು. ಕಂಪನಿ ನಿರ್ಮಿಸುತ್ತಿರುವ ಟೌನ್​ಶಿಪ್​ಗೆ ಶಾರೂಖ್​ ಖಾನ್​ ಅವರ ಪತ್ನಿ ಗೌರಿ ಖಾನ್​ ರಾಯಭಾರಿಗಳಾಗಿದ್ದಾರೆ.

ಗ್ರಾಹಕ ಕಿರಿತ್ ಜಸ್ವಂತ್ ಸಾಹ್ ಪ್ರಕಾರ, 2015 ರಲ್ಲಿ ಗೌರಿ ಖಾನ್ ಅವರು ಲಖನೌದ ತುಳಸಿಯಾನಿ ಕಂಪನಿಯ ಪ್ರಚಾರ ಮಾಡುವುದನ್ನು ನೋಡಿದ್ದೆ. ಅದರಲ್ಲಿ ತುಳಸಿಯಾನಿ ಕಂಪನಿಯು ಸುಶಾಲ್ ಗಾಲ್ಫ್ ಸಿಟಿ ಪ್ರದೇಶದಲ್ಲಿ ಗಾಲ್ಫ್ ವ್ಯೂ ಎಂಬ ಹೆಸರಿನಲ್ಲಿ ಟೌನ್​ಶಿಪ್​ ನಿರ್ಮಾಣ ಮಾಡುತ್ತಿದೆ ಎಂದು ಪ್ರಚಾರ ಮಾಡಲಾಗಿತ್ತು. ಈ ಜಾಹೀರಾತು ನೋಡಿದ ನಂತರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಕುಮಾರ್ ತುಳಸಿಯಾನಿ ಮತ್ತು ನಿರ್ದೇಶಕ ಮಹೇಶ್ ತುಳಸಿಯಾನಿ ಅವರನ್ನು ಸಂಪರ್ಕಿಸಿ ಒಂದು ಫ್ಲ್ಯಾಟ್​ ಖರೀದಿಗೆ ಮಾತುಕತೆ ನಡೆಸಿದೆ. ಇದಕ್ಕೆ  86 ಲಕ್ಷ ಹಣವನ್ನು ಪಾವತಿ ಮಾಡಿದ್ದೇನೆ. ಆದರೆ ಕಂಪನಿಯವರು ನನಗೆ ನೀಡಬೇಕಾದ ಪ್ಲಾಟ್‌ ಅನ್ನು ಬೇರೆಯವರಿಗೆ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಗೌರಿ ಖಾನ್‌ ಮಾತ್ರವಲ್ಲದೇ ಕಂಪನಿ ಎಂಡಿ ಅನಿಲ್ ಕುಮಾರ್ ತುಳಸಿಯಾನಿ, ನಿರ್ದೇಶಕ ಮಹೇಶ್ ತುಳಸಿಯಾನಿ ವಿರುದ್ಧವೂ ಜಸ್ವಂತ್ ಶಾ ದೂರು ದಾಖಲಿಸಿದ್ದಾರೆ.  ಬ್ರಾಂಡ್ ಅಂಬಾಸಿಡರ್ ಗೌರಿ ಖಾನ್ ಅವರ ಪ್ರಭಾವದಿಂದಾಗಿಯೇ ನಾನು ಲಖನೌದಲ್ಲಿರುವ ಸುಶಾಂತ್ ಗಾಲ್ಫ್ ಸಿಟಿಯಲ್ಲಿ ಫ್ಲಾಟ್ ಮಾಡಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT