ಜೈಲಿನಿಂದ ಹೊರ ಬಂದ ನಟ ಶೀಜಾನ್ ಖಾನ್ 
ಬಾಲಿವುಡ್

ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಶೀಜಾನ್ ಖಾನ್‌ಗೆ ಜಾಮೀನು, 3 ತಿಂಗಳ ಬಳಿಕ ಜೈಲಿನಿಂದ ಹೊರಬಂದ ನಟ

ಬಾಲಿವುಡ್ ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ಶೀಜಾನ್ ಖಾನ್‌ಗೆ ಕೊನೆಗೂ ಜಾಮೀನು ದೊರೆತಿದ್ದು, ಬರೊಬ್ಬರಿ 3 ತಿಂಗಳ ಬಳಿಕ ನಟ ಜೈಲಿನಿಂದ ಹೊರಗ ಬಂದಿದ್ದಾರೆ.

ಮುಂಬೈ: ಬಾಲಿವುಡ್ ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ಶೀಜಾನ್ ಖಾನ್‌ಗೆ ಕೊನೆಗೂ ಜಾಮೀನು ದೊರೆತಿದ್ದು, ಬರೊಬ್ಬರಿ 3 ತಿಂಗಳ ಬಳಿಕ ನಟ ಜೈಲಿನಿಂದ ಹೊರಗ ಬಂದಿದ್ದಾರೆ.

ಅಲಿಬಾಬಾ ದಸ್ತಾನ್ ಏಕ್ ಕಾಬೂಲ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ನಟಿ ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸಹನಟ ಶೀಜಾನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಶೀಜಾನ್ ಖಾನ್ ಜೈಲಿನಲ್ಲಿದ್ದರು. ಇದೀಗ ಸುಮಾರು ಮೂರು ತಿಂಗಳ ನಂತರ ಶೀಜನ್ ಗೆ ರಿಲೀಫ್ ಸಿಕ್ಕಿದ್ದು, ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಶೀಜಾನ್ ಖಾನ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. 

ಹೊರಗೆ ಬಂದ ಕೂಡಲೇ ಶೀಜನ್ ಮೊದಲು ತಂಗಿಯರನ್ನು ತಬ್ಬಿಕೊಂಡ ನಟ  ಭಾವುಕರಾದರು. ನಟನ ಕುಟುಂಬ ಸದಸ್ಯರು ಅವರನ್ನು ಬಿಡುಗಡೆ ಮಾಡಲು ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದರು. ಅದರ ಫಲವಾಗಿ ಮಾರ್ಚ್ 4, 2023 ರಂದು ಕೋರ್ಟ್ ಜಾಮೀನು ನೀಡಿತು. ಶಿಜಾನ್ ನನ್ನು ಒಂದು ಲಕ್ಷ ರೂಪಾಯಿ ಬಾಂಡ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಮುಂಬೈನ ಥಾಣೆ ಕೇಂದ್ರ ಕಾರಾಗೃಹದಿಂದ ಶೀಜಾನ್ ಖಾನ್ ಹೊರಗೆ ಬಂದಿದ್ದಾರೆ.

ಈಗ ಶೀಜನ್ ಹೊರಗೆ ಬಂದಾಗ ನಟನ ಸಹೋದರಿ ಮತ್ತು ಅವರ ಕುಟುಂಬ ಸದಸ್ಯರು ತುಂಬಾ ಸಂತೋಷದಿಂದ ಸ್ವಾಗತಿಸಿದ್ದಾರೆ. ಶೀಜಾನ್ ಖಾನ್ ಅವರು ಮಾಸ್ಕ್ ಧರಿಸಿ ಜೈಲಿನಿಂದ ಹೊರಬಂದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT