ಆಲಿಯಾ-ನವಾಜುದ್ದೀನ್ ಸಿದ್ದಿಕಿ 
ಬಾಲಿವುಡ್

ಬ್ಲಾಕ್‌ಮೇಲ್ ಮಾಡಲು ಮಕ್ಕಳನ್ನು ಎಳೆದು ತರುತ್ತಿದ್ದಾಳೆ: ಮಾಜಿ ಪತ್ನಿ ಆಲಿಯಾ ವಿರುದ್ಧ ನವಾಜುದ್ದೀನ್ ಸಿದ್ದಿಕಿ ಕಿಡಿ

ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿ ಆಲಿಯಾ ಸಿದ್ದಿಕಿ ಅವರು ತನ್ನನ್ನು ಮತ್ತು ಅವರ ಮಕ್ಕಳನ್ನು ತಮ್ಮ ಮನೆಯಿಂದ ಹೊರಹಾಕಿದ್ದಾರೆ ಎಂದು ಹೇಳಿಕೊಂಡ ಕೆಲವು ದಿನಗಳ ನಟ ಕೆಲ ವೈಯಕ್ತಿಕ ಭಾವನೆಗಳನ್ನು ಹೇಳಿಕೊಂಡಿದ್ದಾರೆ.

ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿ ಆಲಿಯಾ ಸಿದ್ದಿಕಿ ಅವರು ತನ್ನನ್ನು ಮತ್ತು ಅವರ ಮಕ್ಕಳನ್ನು ತಮ್ಮ ಮನೆಯಿಂದ ಹೊರಹಾಕಿದ್ದಾರೆ ಎಂದು ಹೇಳಿಕೊಂಡ ಕೆಲವು ದಿನಗಳ ನಟ ಕೆಲ ವೈಯಕ್ತಿಕ ಭಾವನೆಗಳನ್ನು ಹೇಳಿಕೊಂಡಿದ್ದಾರೆ. 

ಇದು ಆರೋಪವಲ್ಲ, ನನ್ನ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದೇನೆ. ತನ್ನ ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ. ಇದರಿಂದಾಗಿ ಅವರು ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ನಟ ತನ್ನ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ನನ್ನ ಮೌನದಿಂದಾಗಿ ನನ್ನನ್ನು ಎಲ್ಲೆಡೆ ಕೆಟ್ಟ ಮನುಷ್ಯ ಎಂದು ಬಿಂಬಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದ ಕೆಲವರು, ಮಾಧ್ಯಮ ಹಾಗೂ ಕೆಲವು ಮಂದಿ ನನ್ನ ವೈಯಕ್ತಿಕ ವಧೆಯನ್ನು ಬಹಳ ಸಂಭ್ರಮಿಸುತ್ತಿದ್ದಾರೆ ಎಂದರು. 

ಮೊದಲನೆಯದಾಗಿ ನಾನು ಮತ್ತು ಆಲಿಯಾ ಹಲವು ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿಲ್ಲ. ನಾವು ಈಗಾಗಲೇ ವಿಚ್ಛೇದನ ಪಡೆದಿದ್ದೇವೆ. ಆದರೆ ಮಕ್ಕಳಿಗಾಗಿ ಕೆಲವು ಒಪ್ಪಂದಗಳನ್ನು ಮಾಡಿಕೊಂಡಿದ್ದೇವೆ. ನನ್ನ ಮಕ್ಕಳು ಭಾರತದಲ್ಲಿ ಏಕೆ ಇದ್ದಾರೆ. 45 ದಿನಗಳಿಂದ ಶಾಲೆಗೆ ಹೋಗುತ್ತಿಲ್ಲ ಎಂದು ಯಾರಿಗಾದರೂ ತಿಳಿದಿದೆಯೇ, ದುಬೈನಲ್ಲಿ ಮಕ್ಕಳು ಓದುತ್ತಿದ್ದು ಅವರನ್ನು ಶಾಲೆಗೆ ಕಳಿಸಿ ಎಂದು ಪ್ರತಿದಿನ ನನಗೆ ಸಂದೇಶಗಳು ಬರುತ್ತಿವೆ ಎಂದರು.

ವಿಚ್ಛೇದನ ಪಡೆದ ನಂತರ ಕಳೆದ ಎರಡು ವರ್ಷಗಳಿಂದ ಆಲಿಯಾಗೆ ಪ್ರತಿತಿಂಗಳೂ 10 ಲಕ್ಷ ರುಪಾಯಿ ಹಣ ನೀಡುತ್ತಾ ಬಂದಿದ್ದೇನೆ. ಆಕೆ ದುಬೈಗೆ ಹೋಗುವ ಮುನ್ನ ತಿಂಗಳಿಗೆ 5 ರಿಂದ 7 ಲಕ್ಷ ಹಣ ನೀಡುತ್ತಿದ್ದೇ. ಮಕ್ಕಳ ಫೀಸು, ಮೆಡಿಕಲ್ ಬಿಲ್​ಗಳು, ಪ್ರಯಾಣ ವೆಚ್ಚ ಇನ್ನೂ ಹಲವು ವೆಚ್ಚಗಳನ್ನು ಪ್ರತ್ಯೇಕವಾಗಿ ಭರಿಸುತ್ತಿದ್ದೇನೆ. ಇದು ಮಾತ್ರವೇ ಅಲ್ಲದೆ, ಆಕೆಯೂ ಸಂಪಾದನೆಗೆ ದಾರಿ ಕಂಡುಕೊಳ್ಳಲಿ ಎಂಬ ಕಾರಣಕ್ಕೆ ಆಕೆಯ ಮೂರು ಸಿನಿಮಾಗಳಿಗೆ ನಾನೇ ಬಂಡವಾಳ ಹೂಡಿದೆ. ಇದರಿಂದ ಕೋಟ್ಯಂತರ ರುಪಾಯಿ ಹಣವನ್ನು ನಾನು ಕಳೆದುಕೊಂಡೆ ಎಂದು ನವಾಜುದ್ದೀನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

SCROLL FOR NEXT