ದಿ ಕೇರಳ ಸ್ಟೋರಿ ಚಿತ್ರದ ಪೋಸ್ಟರ್ 
ಬಾಲಿವುಡ್

The Kerala Story: ಮಾಜಿ ಸಿಎಂ ಸೀನ್ ಸೇರಿ 10 ದೃಶ್ಯಕ್ಕೆ ಕತ್ತರಿ, ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಎ ಸರ್ಟಿಫಿಕೇಟ್‌; ಸೆನ್ಸಾರ್‌ ಮಂಡಳಿ ಅಸ್ತು

ತೀವ್ರ ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಬಿಡುಗಡೆಗೆ ಅಸ್ತು ಎಂದಿದ್ದು, ಚಿತ್ರಕ್ಕೆ ಎ ಸರ್ಟಿಫಿಕೇಟ್‌ ನೀಡಿದೆ.

ಮುಂಬೈ: ತೀವ್ರ ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಬಿಡುಗಡೆಗೆ ಅಸ್ತು ಎಂದಿದ್ದು, ಚಿತ್ರಕ್ಕೆ ಎ ಸರ್ಟಿಫಿಕೇಟ್‌ ನೀಡಿದೆ.

ಹೌದು.. ಕೇವಲ ಟ್ರೇಲರ್‌ನಿಂದಲೇ ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ‘ಲವ್‌ ಜಿಹಾದ್‌’ ಕಥೆ ಆಧಾರಿತ ಹಿಂದಿ ಸಿನಿಮಾ ‘ದಿ ಕೇರಳ ಸ್ಟೋರಿ’ಗೆ ಕೇಂದ್ರ ಚಲನಚಿತ್ರ ಸೆನ್ಸಾರ್‌ ಮಂಡಳಿ (ಸಿಬಿಎಫ್‌ಸಿ) ಕೆಲವೊಂದು ಷರತ್ತುಗಳೊಂದಿಗೆ ಮಂಗಳವಾರ ‘ಎ’ ಪ್ರಮಾಣಪತ್ರ ನೀಡಿದೆ. ಮೇ 5 ರಂದು ಬಿಡುಗಡೆ ಕಾಣಲಿರುವ ಸಿನಿಮಾದ ವೀಕ್ಷಿಸಿದ ಸೆನ್ಸಾರ್‌ ಮಂಡಳಿ, ಚಿತ್ರದಲ್ಲಿನ ಮಾಜಿ ಸಿಎಂ ದೃಶ್ಯ ಸೇರಿದಂತೆ 10 ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಿದೆ. ಕೆಲವೊಂದು ಸಂಭಾಷಣೆಗಳಿಗೆ ಕತ್ತರಿ ಪ್ರಯೋಗ ಮಾಡುವಂತೆ ಚಿತ್ರ ತಂಡಕ್ಕೆ ತಿಳಿಸಿದೆ ಎನ್ನಲಾಗಿದೆ.

ವಿವಾದ ಏಕೆ?
'ದಿ ಕೇರಳ ಸ್ಟೋರಿ' ಸಿನಿಮಾದಲ್ಲಿ 32 ಸಾವಿರ ಹಿಂದೂ ಹೆಣ್ಣು ಮಕ್ಕಳನ್ನು ಇಸ್ಲಾಂಗೆ ಮತಾಂತರ ಮಾಡಿ ಮದುವೆ ಮಾಡಿರೋದು, ಅಂಥ ಹೆಣ್ಣು ಮಕ್ಕಳನ್ನು ಐಸಿಸ್‌ ಉಗ್ರ ಸಂಘಟನೆಗೆ ಸೇರಿಸಲಾಗಿದೆ ಎನ್ನೋದನ್ನು ತೋರಿಸಲಾಗಿತ್ತು. ಇದರಿಂದಲೇ ವಿವಾದ ಸೃಷ್ಟಿ ಆಗಿದೆ.

ವಿಫುಲ್‌ ಶಾ ನಿರ್ಮಾಣ ಮಾಡಿರುವ ಈ ಸಿನಿಮಾಕ್ಕೆ ಸುದೀಪ್ತೋ ಸೇನ್‌ ನಿರ್ದೇಶನ ಮಾಡಿದ್ದಾರೆ. ಸಂಘ ಪರಿವಾರದ ಅಜೆಂಡಾವನ್ನು ಈ ಸಿನಿಮಾ ಪ್ರತಿಪಾದಿಸುತ್ತಿದೆ ಎಂದು ಕೂಡ ಹೇಳಲಾಗುತ್ತಿದೆ. ಅದಾ ಶರ್ಮಾ, ಯೋಗಿತಾ ಬಹಾನಿ, ಸೋನಿಯಾ ಬಲಾನಿ, ಸಿದ್ಧಿ ಇದ್ನಾನಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮೇ 5ರಂದು ಈ ಚಿತ್ರ ರಿಲೀಸ್ ಆಗಲಿದೆಯಂತೆ. 

ಜೆಎನ್‌ಯು ವಿಶೇಷ ಪ್ರದರ್ಶನ
ಈ ನಡುವೆ ಸಿನಿಮಾವನ್ನು ದಿಲ್ಲಿಯ ಜವಹರ್‌ಲಾಲ್‌ ವಿವಿಯಲ್ಲಿ(ಜೆಎನ್‌ಯು) ಮಂಗಳವಾರ ಪ್ರದರ್ಶನ ಮಾಡಲಾಗಿದೆ. ಎಬಿವಿಪಿ ಸಂಘಟನೆ ಚಿತ್ರ ಪ್ರದರ್ಶನ ಆಯೋಜನೆ ಮಾಡಿತ್ತು. ವಿವಿಯಲ್ಲಿ ವಿವಾದಿತ ಚಿತ್ರ ಪ್ರದರ್ಶನ ಮಾಡಿದ ಕ್ರಮ ಖಂಡಿಸಿ ಎಡಪಕ್ಷ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT