ದಿ ಕೇರಳ ಸ್ಟೋರಿ ಚಿತ್ರದ ಪೋಸ್ಟರ್ 
ಬಾಲಿವುಡ್

The Kerala Story: ಮಾಜಿ ಸಿಎಂ ಸೀನ್ ಸೇರಿ 10 ದೃಶ್ಯಕ್ಕೆ ಕತ್ತರಿ, ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಎ ಸರ್ಟಿಫಿಕೇಟ್‌; ಸೆನ್ಸಾರ್‌ ಮಂಡಳಿ ಅಸ್ತು

ತೀವ್ರ ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಬಿಡುಗಡೆಗೆ ಅಸ್ತು ಎಂದಿದ್ದು, ಚಿತ್ರಕ್ಕೆ ಎ ಸರ್ಟಿಫಿಕೇಟ್‌ ನೀಡಿದೆ.

ಮುಂಬೈ: ತೀವ್ರ ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಬಿಡುಗಡೆಗೆ ಅಸ್ತು ಎಂದಿದ್ದು, ಚಿತ್ರಕ್ಕೆ ಎ ಸರ್ಟಿಫಿಕೇಟ್‌ ನೀಡಿದೆ.

ಹೌದು.. ಕೇವಲ ಟ್ರೇಲರ್‌ನಿಂದಲೇ ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ‘ಲವ್‌ ಜಿಹಾದ್‌’ ಕಥೆ ಆಧಾರಿತ ಹಿಂದಿ ಸಿನಿಮಾ ‘ದಿ ಕೇರಳ ಸ್ಟೋರಿ’ಗೆ ಕೇಂದ್ರ ಚಲನಚಿತ್ರ ಸೆನ್ಸಾರ್‌ ಮಂಡಳಿ (ಸಿಬಿಎಫ್‌ಸಿ) ಕೆಲವೊಂದು ಷರತ್ತುಗಳೊಂದಿಗೆ ಮಂಗಳವಾರ ‘ಎ’ ಪ್ರಮಾಣಪತ್ರ ನೀಡಿದೆ. ಮೇ 5 ರಂದು ಬಿಡುಗಡೆ ಕಾಣಲಿರುವ ಸಿನಿಮಾದ ವೀಕ್ಷಿಸಿದ ಸೆನ್ಸಾರ್‌ ಮಂಡಳಿ, ಚಿತ್ರದಲ್ಲಿನ ಮಾಜಿ ಸಿಎಂ ದೃಶ್ಯ ಸೇರಿದಂತೆ 10 ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಿದೆ. ಕೆಲವೊಂದು ಸಂಭಾಷಣೆಗಳಿಗೆ ಕತ್ತರಿ ಪ್ರಯೋಗ ಮಾಡುವಂತೆ ಚಿತ್ರ ತಂಡಕ್ಕೆ ತಿಳಿಸಿದೆ ಎನ್ನಲಾಗಿದೆ.

ವಿವಾದ ಏಕೆ?
'ದಿ ಕೇರಳ ಸ್ಟೋರಿ' ಸಿನಿಮಾದಲ್ಲಿ 32 ಸಾವಿರ ಹಿಂದೂ ಹೆಣ್ಣು ಮಕ್ಕಳನ್ನು ಇಸ್ಲಾಂಗೆ ಮತಾಂತರ ಮಾಡಿ ಮದುವೆ ಮಾಡಿರೋದು, ಅಂಥ ಹೆಣ್ಣು ಮಕ್ಕಳನ್ನು ಐಸಿಸ್‌ ಉಗ್ರ ಸಂಘಟನೆಗೆ ಸೇರಿಸಲಾಗಿದೆ ಎನ್ನೋದನ್ನು ತೋರಿಸಲಾಗಿತ್ತು. ಇದರಿಂದಲೇ ವಿವಾದ ಸೃಷ್ಟಿ ಆಗಿದೆ.

ವಿಫುಲ್‌ ಶಾ ನಿರ್ಮಾಣ ಮಾಡಿರುವ ಈ ಸಿನಿಮಾಕ್ಕೆ ಸುದೀಪ್ತೋ ಸೇನ್‌ ನಿರ್ದೇಶನ ಮಾಡಿದ್ದಾರೆ. ಸಂಘ ಪರಿವಾರದ ಅಜೆಂಡಾವನ್ನು ಈ ಸಿನಿಮಾ ಪ್ರತಿಪಾದಿಸುತ್ತಿದೆ ಎಂದು ಕೂಡ ಹೇಳಲಾಗುತ್ತಿದೆ. ಅದಾ ಶರ್ಮಾ, ಯೋಗಿತಾ ಬಹಾನಿ, ಸೋನಿಯಾ ಬಲಾನಿ, ಸಿದ್ಧಿ ಇದ್ನಾನಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮೇ 5ರಂದು ಈ ಚಿತ್ರ ರಿಲೀಸ್ ಆಗಲಿದೆಯಂತೆ. 

ಜೆಎನ್‌ಯು ವಿಶೇಷ ಪ್ರದರ್ಶನ
ಈ ನಡುವೆ ಸಿನಿಮಾವನ್ನು ದಿಲ್ಲಿಯ ಜವಹರ್‌ಲಾಲ್‌ ವಿವಿಯಲ್ಲಿ(ಜೆಎನ್‌ಯು) ಮಂಗಳವಾರ ಪ್ರದರ್ಶನ ಮಾಡಲಾಗಿದೆ. ಎಬಿವಿಪಿ ಸಂಘಟನೆ ಚಿತ್ರ ಪ್ರದರ್ಶನ ಆಯೋಜನೆ ಮಾಡಿತ್ತು. ವಿವಿಯಲ್ಲಿ ವಿವಾದಿತ ಚಿತ್ರ ಪ್ರದರ್ಶನ ಮಾಡಿದ ಕ್ರಮ ಖಂಡಿಸಿ ಎಡಪಕ್ಷ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT