ಸಂಗ್ರಹ ಚಿತ್ರ 
ಬಾಲಿವುಡ್

ಪಶ್ಚಿಮ ಬಂಗಾಳದಲ್ಲಿ 'ದಿ ಕೇರಳ ಸ್ಟೋರಿ'ಗೆ ನಿಷೇಧ: ಮೇ 12ರಂದು ನಿರ್ಮಾಪಕರ ಅರ್ಜಿ ಆಲಿಸಲು 'ಸುಪ್ರೀಂ' ಸಮ್ಮತಿ

ವಿವಾದಾತ್ಮಕ ಬಹುಭಾಷಾ ಚಿತ್ರ 'ದಿ ಕೇರಳ ಸ್ಟೋರಿ' ಚಿತ್ರದ ಪ್ರದರ್ಶನವನ್ನು ನಿಷೇಧಿಸಿರುವ ಮಮತಾ ಬ್ಯಾನರ್ಜಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ನವದೆಹಲಿ: ವಿವಾದಾತ್ಮಕ ಬಹುಭಾಷಾ ಚಿತ್ರ 'ದಿ ಕೇರಳ ಸ್ಟೋರಿ' ಚಿತ್ರದ ಪ್ರದರ್ಶನವನ್ನು ನಿಷೇಧಿಸಿರುವ ಮಮತಾ ಬ್ಯಾನರ್ಜಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. 

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠದ ಮುಂದೆ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ತುರ್ತು ಪಟ್ಟಿಗಾಗಿ ವಿಷಯವನ್ನು ಪ್ರಸ್ತಾಪಿಸಿದರು.

ಮೇ 15ರಂದು ಚಲನಚಿತ್ರವನ್ನು ನಿಷೇಧಿಸಲು ನಿರಾಕರಿಸಿದ ಕೇರಳ ಹೈಕೋರ್ಟ್‌ಗಳ ಆದೇಶವನ್ನು ಪ್ರಶ್ನಿಸುವ ಅರ್ಜಿಯನ್ನು ಪೀಠವು ಪಟ್ಟಿ ಮಾಡಿದೆ ಎಂಬ ಅಂಶವನ್ನು ಉಲ್ಲೇಖಿಸಿ, ಸಿಜೆಐ ಆರಂಭದಲ್ಲಿ ಮೇ 15ರಂದು ಈ ಮನವಿಯನ್ನು ಪಟ್ಟಿ ಮಾಡಲು ಪ್ರಸ್ತಾಪಿಸಿದರು. ಆದರೆ ಇದಕ್ಕೆ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ತಡವಾದಷ್ಟು ನಿರ್ಮಾಪಕರು ಪ್ರತಿದಿನ ಹಣ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರಿಂದ ಸಿಜೆಐ ಮೇ 12ರಂದು ಮನವಿಯನ್ನು ಆಲಿಸಲು ಒಪ್ಪಿಕೊಂಡರು.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಸಾರ್ವಜನಿಕ ವೀಕ್ಷಣೆಗೆ ಪ್ರಮಾಣೀಕರಿಸಿದ ಚಲನಚಿತ್ರವನ್ನು ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಚಲನಚಿತ್ರ ಪ್ರದರ್ಶನವನ್ನು ನಿಲ್ಲಿಸಲು ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಉಲ್ಲೇಖಿಸಲು ಸಾಧ್ಯವಿಲ್ಲ ಎಂದು ಚಲನಚಿತ್ರ ನಿರ್ಮಾಪಕರು ಮನವಿಯಲ್ಲಿ ತಿಳಿಸಿದ್ದಾರೆ. 

ಇನ್ನು ನಿರ್ದಿಷ್ಟವಾಗಿ ತಮಿಳುನಾಡಿಗೆ ಸಂಬಂಧಿಸಿದಂತೆ, ರಾಜ್ಯದ ಅಧಿಕಾರಿಗಳು ಅನೌಪಚಾರಿಕ ಸಂದೇಶ ಕಳುಹಿಸಿದ ನಂತರ ರಾಜ್ಯದ ಪ್ರದರ್ಶಕರು ಚಲನಚಿತ್ರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.

'ಅಂತಹ ಯಾವುದೇ ನಿಷೇಧವು ವಾಕ್ ಸ್ವಾತಂತ್ರ್ಯದಲ್ಲಿ ತೊಡಗಿಸಿಕೊಳ್ಳಲು ಭಾರತದ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕಿನ ಮೇಲೆ ಅಸಮಂಜಸವಾದ ನಿರ್ಬಂಧವನ್ನು ರೂಪಿಸುತ್ತದೆ. ಅರ್ಜಿದಾರರ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಹತ್ತಿಕ್ಕುವುದು, ಅದೂ ಕೂಡ ಕಾನೂನು ಮತ್ತು ಸುವ್ಯವಸ್ಥೆಯ ಆಧಾರರಹಿತ ಪರಿಗಣನೆಗಳ ಭಯದಿಂದ ಸಾಂವಿಧಾನಿಕ ಯೋಜನೆಯಡಿ ಪರಿಶೀಲನೆಯನ್ನು ತಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT