ಸಂಗ್ರಹ ಚಿತ್ರ 
ಬಾಲಿವುಡ್

ಪಶ್ಚಿಮ ಬಂಗಾಳದಲ್ಲಿ 'ದಿ ಕೇರಳ ಸ್ಟೋರಿ'ಗೆ ನಿಷೇಧ: ಮೇ 12ರಂದು ನಿರ್ಮಾಪಕರ ಅರ್ಜಿ ಆಲಿಸಲು 'ಸುಪ್ರೀಂ' ಸಮ್ಮತಿ

ವಿವಾದಾತ್ಮಕ ಬಹುಭಾಷಾ ಚಿತ್ರ 'ದಿ ಕೇರಳ ಸ್ಟೋರಿ' ಚಿತ್ರದ ಪ್ರದರ್ಶನವನ್ನು ನಿಷೇಧಿಸಿರುವ ಮಮತಾ ಬ್ಯಾನರ್ಜಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ನವದೆಹಲಿ: ವಿವಾದಾತ್ಮಕ ಬಹುಭಾಷಾ ಚಿತ್ರ 'ದಿ ಕೇರಳ ಸ್ಟೋರಿ' ಚಿತ್ರದ ಪ್ರದರ್ಶನವನ್ನು ನಿಷೇಧಿಸಿರುವ ಮಮತಾ ಬ್ಯಾನರ್ಜಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. 

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠದ ಮುಂದೆ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ತುರ್ತು ಪಟ್ಟಿಗಾಗಿ ವಿಷಯವನ್ನು ಪ್ರಸ್ತಾಪಿಸಿದರು.

ಮೇ 15ರಂದು ಚಲನಚಿತ್ರವನ್ನು ನಿಷೇಧಿಸಲು ನಿರಾಕರಿಸಿದ ಕೇರಳ ಹೈಕೋರ್ಟ್‌ಗಳ ಆದೇಶವನ್ನು ಪ್ರಶ್ನಿಸುವ ಅರ್ಜಿಯನ್ನು ಪೀಠವು ಪಟ್ಟಿ ಮಾಡಿದೆ ಎಂಬ ಅಂಶವನ್ನು ಉಲ್ಲೇಖಿಸಿ, ಸಿಜೆಐ ಆರಂಭದಲ್ಲಿ ಮೇ 15ರಂದು ಈ ಮನವಿಯನ್ನು ಪಟ್ಟಿ ಮಾಡಲು ಪ್ರಸ್ತಾಪಿಸಿದರು. ಆದರೆ ಇದಕ್ಕೆ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ತಡವಾದಷ್ಟು ನಿರ್ಮಾಪಕರು ಪ್ರತಿದಿನ ಹಣ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರಿಂದ ಸಿಜೆಐ ಮೇ 12ರಂದು ಮನವಿಯನ್ನು ಆಲಿಸಲು ಒಪ್ಪಿಕೊಂಡರು.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಸಾರ್ವಜನಿಕ ವೀಕ್ಷಣೆಗೆ ಪ್ರಮಾಣೀಕರಿಸಿದ ಚಲನಚಿತ್ರವನ್ನು ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಚಲನಚಿತ್ರ ಪ್ರದರ್ಶನವನ್ನು ನಿಲ್ಲಿಸಲು ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಉಲ್ಲೇಖಿಸಲು ಸಾಧ್ಯವಿಲ್ಲ ಎಂದು ಚಲನಚಿತ್ರ ನಿರ್ಮಾಪಕರು ಮನವಿಯಲ್ಲಿ ತಿಳಿಸಿದ್ದಾರೆ. 

ಇನ್ನು ನಿರ್ದಿಷ್ಟವಾಗಿ ತಮಿಳುನಾಡಿಗೆ ಸಂಬಂಧಿಸಿದಂತೆ, ರಾಜ್ಯದ ಅಧಿಕಾರಿಗಳು ಅನೌಪಚಾರಿಕ ಸಂದೇಶ ಕಳುಹಿಸಿದ ನಂತರ ರಾಜ್ಯದ ಪ್ರದರ್ಶಕರು ಚಲನಚಿತ್ರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.

'ಅಂತಹ ಯಾವುದೇ ನಿಷೇಧವು ವಾಕ್ ಸ್ವಾತಂತ್ರ್ಯದಲ್ಲಿ ತೊಡಗಿಸಿಕೊಳ್ಳಲು ಭಾರತದ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕಿನ ಮೇಲೆ ಅಸಮಂಜಸವಾದ ನಿರ್ಬಂಧವನ್ನು ರೂಪಿಸುತ್ತದೆ. ಅರ್ಜಿದಾರರ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಹತ್ತಿಕ್ಕುವುದು, ಅದೂ ಕೂಡ ಕಾನೂನು ಮತ್ತು ಸುವ್ಯವಸ್ಥೆಯ ಆಧಾರರಹಿತ ಪರಿಗಣನೆಗಳ ಭಯದಿಂದ ಸಾಂವಿಧಾನಿಕ ಯೋಜನೆಯಡಿ ಪರಿಶೀಲನೆಯನ್ನು ತಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel