ರಣಬೀರ್ ಕಪೂರ್ 
ಬಾಲಿವುಡ್

ಬೆಟ್ಟಿಂಗ್ ಆ್ಯಪ್‌ ಪ್ರಕರಣ: ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಇಡಿ ಸಮನ್ಸ್

ಛತ್ತೀಸ್‌ಗಢದ ಮಹದೇವ್ ಬೆಟ್ಟಿಂಗ್ ಆ್ಯಪ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು,  ಶುಕ್ರವಾರ ವಿಚಾರಣೆಗೆ ಕರೆಸಿದೆ ಎಂದು...

ನವದೆಹಲಿ: ಛತ್ತೀಸ್‌ಗಢದ ಮಹದೇವ್ ಬೆಟ್ಟಿಂಗ್ ಆ್ಯಪ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು,  ಶುಕ್ರವಾರ ವಿಚಾರಣೆಗೆ ಕರೆಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಳೆದ ತಿಂಗಳು ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧಪಟ್ಟಂತೆ 417 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಏಜೆನ್ಸಿಯೊಂದು ತನಿಖೆ ಮಾಡಿ ಹೇಳಿತ್ತು. ಈಗ ಈ ವಿಚಾರವಾಗಿ ನಟ ಬಾಲಿವುಡ್ ನಟ ರಣಬೀರ್ ಕಪೂರ್‌ಗೆ ಸಮನ್ಸ್ ಜಾರಿಗೊಳಿಸಲಾಗಿದೆ.

ಅಕ್ಟೋಬರ್ 6 ರಂದು ತನಿಖಾ ಸಂಸ್ಥೆಯ ರಾಯ್‌ಪುರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ರಣಬೀರ್ ಕಪೂರ್‌ಗೆ ಸೂಚಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಸುಮಾರು 14-15 ಸೆಲೆಬ್ರಿಟಿಗಳು ಮತ್ತು ನಟರನ್ನು ಸಹ ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ ಶೀಘ್ರದಲ್ಲೇ ಸಮನ್ಸ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಹೊಸ ಬಳಕೆದಾರರನ್ನು ನೋಂದಾಯಿಸಲು, ಐಡಿಗಳನ್ನು ರಚಿಸಲು ಮತ್ತು ಬೇನಾಮಿ ಬ್ಯಾಂಕ್ ಖಾತೆಗಳ ಲೇಯರ್ಡ್ ವೆಬ್ ಮೂಲಕ ಹಣ ವ್ಯವಹಾರ ನಡೆಸಲು ಈ ಆನ್‌ಲೈನ್ ಬುಕ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಬಳಸಲಾಗುತ್ತಿದೆ ಎಂದು ಏಜೆನ್ಸಿ ಆರೋಪಿಸಿದೆ.

ಈ ಆಪ್‌ನ ಅನೇಕ ಜಾಹೀರಾತುಗಳಲ್ಲಿ ರಣಬೀರ್ ಕಪೂರ್ ಅವರು ಕಾಣಿಸಿಕೊಂಡಿದ್ದು, ಈ ಸಂಬಂಧ ಅವರಿಗೆ ಸಿಕ್ಕಾಪಟ್ಟೆ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗಿದೆ. ಹಾಗಾಗಿ ರಣಬೀರ್ ಕಪೂರ್ ಅವರನ್ನು ಅಕ್ಟೋಬರ್ 6 ರಂದು ವಿಚಾರಣೆ ಮಾಡೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT