ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ 
ಬಾಲಿವುಡ್

ನಿತೇಶ್ ತಿವಾರಿ ರಾಮಾಯಣದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ: ರಾವಣನ ಪಾತ್ರಕ್ಕೆ ಯಶ್ ಫಿಕ್ಸ್; ಶೂಟಿಂಗ್ ಗೆ 15 ದಿನ ಡೇಟ್ಸ್

ಬಾಲಿವುಡ್‌ನಲ್ಲಿ ರಾಮಾಯಣ ಎಂಬ ಸಿನಿಮಾ ನಿರ್ಮಾಣಗೊಳ್ಳಲಿದೆ ಎಂದು ಬಹು ಹಿಂದೆಯೇ ಸುದ್ದಿಯಾಗಿತ್ತು. ಇದನ್ನು ಭಾರತೀಯ ಸಿನಿಮಾರಂಗದ ಪ್ರಮುಖ ಪ್ರಾಜೆಕ್ಟ್‌ ಎಂದು ಬಿಂಬಿಸಲಾಗುತ್ತಿದೆ.

ಮುಂಬಯಿ: ಬಾಲಿವುಡ್‌ನಲ್ಲಿ ರಾಮಾಯಣ ಎಂಬ ಸಿನಿಮಾ ನಿರ್ಮಾಣಗೊಳ್ಳಲಿದೆ ಎಂದು ಬಹು ಹಿಂದೆಯೇ ಸುದ್ದಿಯಾಗಿತ್ತು. ಇದನ್ನು ಭಾರತೀಯ ಸಿನಿಮಾರಂಗದ ಪ್ರಮುಖ ಪ್ರಾಜೆಕ್ಟ್‌ ಎಂದು ಬಿಂಬಿಸಲಾಗುತ್ತಿದೆ.

ಭಾರತೀಯ ಪುರಾಣ ಕತೆಯಾದ ರಾಮಾಯಣದಲ್ಲಿ ಸ್ಯಾಂಡಲ್‌ವುಡ್‌ ನಟ ಯಶ್‌ ನಟಿಸಲಿದ್ದಾರೆ. ರಾಮಾಯಣದ ರಾವಣನಾಗಿ ಯಶ್‌ ಬಣ್ಣ ಹಚ್ಚಲಿದ್ದಾರೆ. ರಾಮಾಯಣದ ಚಿತ್ರೀಕರಣವು 2024ರ ಮೊದಲಲ್ಲಿ ಆರಂಭವಾಗುವ ಸೂಚನೆಯಿದೆ ಎಂದು ಪಿಂಕ್‌ವಿಲ್ಲಾ ವರದಿ ಮಾಡಿದೆ. ರಾಮಾಯಣದ ಪಾರ್ಟ್‌ 1ಗೆ ಹದಿನೈದು ದಿನದ ಕಾಲ್‌ ಶೀಟ್‌ ಅನ್ನು ಯಶ್‌ ನೀಡಿದ್ದಾರೆ ಎನ್ನಲಾಗಿದೆ.

ಈ ಸಿನಿಮಾದಲ್ಲಿ ರಣಬೀರ್‌ ಕಪೂರ್‌, ಸಾಯಿ ಪಲ್ಲವಿ ಮತ್ತು ಯಶ್‌ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ರಾಮನಾಗಿ ರಣಬೀರ್‌ ಕಪೂರ್‌ ನಟಿಸಲಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ನಟಿಸಲಿದ್ದಾರೆ. ಕನ್ನಡ ನಟ ಯಶ್‌ ಈ ಸಿನಿಮಾದಲ್ಲಿ ರಾವಣನಾಗಿ ಅಬ್ಬರಿಸಲಿದ್ದಾರೆ.

ನಿತೇಶ್‌ ತಿವಾರಿ ತಿವಾರಿ ಮತ್ತು ತಂಡವು ಫೆಬ್ರವರಿ 2024ರ ಬಳಿಕ ರಾಮಾಯಣದ ಶೂಟಿಂಗ್‌ ಆರಂಭಿಸುವ ನಿರೀಕ್ಷೆಯಿದೆ. "ವಲ್ಡ್‌ ಆಫ್‌ ರಾಮಾಯಣ ಸೃಷ್ಟಿಸಲು ನಿತೇಶ್‌ ತಿವಾರಿ ಮತ್ತು ತಂಡವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸಿನಿಮಾದ ಬ್ಲೂಪ್ರಿಂಟ್‌ ರೆಡಿಯಾಗಿದೆ. ವಿಎಫ್‌ಎಕ್ಸ್‌ ಪ್ಲೇಟ್‌ಗಳನ್ನು ಆಸ್ಕರ್‌ ವಿನ್ನಿಂಗ್‌ ಕಂಪನಿಯಾದ ಡಿಎನ್‌ಇಜಿ ಸಿದ್ಧಪಡಿಸುತ್ತಿದೆ. ಇದು ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ.

ಆದರೆ, ರಾಮಾಯಣ ಎನ್ನುವುದು ಕೇವಲ ವಿಶುಯಲ್‌ ದೃಶ್ಯವಲ್ಲ. ಸರಳವಾಗಿ ಪ್ರೇಕ್ಷಕರಿಗೆ ಕಥೆ ಹೇಳುವ ಪ್ರಯತ್ನವಾಗಲಿದೆ. ಸಿನಿಮಾದಲ್ಲಿ ಕಥೆಯ ಭಾವನೆಗೆ ಒತ್ತು ನೀಡಲಾಗುತ್ತದೆ" ಎಂದು ಮೂಲಗಳನ್ನು ಉದ್ದೇಶಿಸಿ ಪಿಂಕ್‌ವಿಲ್ಲಾ ವರದಿ ಮಾಡಿದೆ.

ರಣಬೀರ್‌ ಕಪೂರ್‌ ಮತ್ತು ಸಾಯಿ ಪಲ್ಲವಿ ಫೆಬ್ರವರಿ ತಿಂಗಳಿನಿಂದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಮೊದಲು ರಾಮ ಮತ್ತು ಸೀತೆಯ ಕುರಿತು ಹೆಚ್ಚಿನ ಗಮನ ನೀಡುತ್ತೇವೆ. ಸೀತಾ ಅಪಹರಣದ ಬಳಿಕ ಸಿನಿಮಾ ಮುಂದಿನ ಹಂತಕ್ಕೆ ತೆರೆದುಕೊಳ್ಳಲಿದೆ. ಫೆಬ್ರವರಿಯಿಂದ ಆಗಸ್ಟ್‌ವರೆಗೆ ಈ ಶೂಟಿಂಗ್‌ ನಡೆಯಬಹುದು. ರಾವಣನಾಗಿ ಯಶ್‌ ಶೂಟಿಂಗ್‌ ಮುಂದಿನ ವರ್ಷ ಜುಲೈ ತಿಂಗಳಲ್ಲಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT