ದಲೀಪ್ ತಾಹಿಲ್ 
ಬಾಲಿವುಡ್

ಕುಡಿದು ವಾಹನ ಚಾಲನೆ ಪ್ರಕರಣ: ನಟ ದಲೀಪ್ ತಾಹಿಲ್‌ಗೆ ಎರಡು ತಿಂಗಳ ಜೈಲು ಶಿಕ್ಷೆ

2018ರಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಹಿರಿಯ ನಟ ದಲೀಪ್ ತಾಹಿಲ್ ಅವರಿಗೆ ಇತ್ತೀಚೆಗೆ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಂದು ನಟ ಕುಡಿದು ಕಾರು ಚಲಾಯಿಸಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದರು.

ಮುಂಬೈ: 2018ರಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಹಿರಿಯ ನಟ ದಲೀಪ್ ತಾಹಿಲ್ ಅವರಿಗೆ ಇತ್ತೀಚೆಗೆ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಂದು ನಟ ಕುಡಿದು ಕಾರು ಚಲಾಯಿಸಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದರು.

ಪ್ರಕರಣದಲ್ಲಿ ವೈದ್ಯಕೀಯ ತಜ್ಞರು ಸಾಕ್ಷ್ಯ ನೀಡಿದ ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಶಿಕ್ಷೆ ಪ್ರಕಟವಾಯಿತು. 2018ರಲ್ಲಿ ನಡೆದ ಈ ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಜೆನಿತಾ ಗಾಂಧಿ (21) ಮತ್ತು ಗೌರವ್ ಚುಗ್ (22) ಎಂಬ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದರು.

ಮಾಹಿತಿಯ ಪ್ರಕಾರ, ಖಾರ್ ಪೊಲೀಸ್ ಅಧಿಕಾರಿಯೊಬ್ಬರು, ಅಪಘಾತದಲ್ಲಿ ಜೆನಿತಾ ಗಾಂಧಿಯವರ ಬೆನ್ನು ಮತ್ತು ಕುತ್ತಿಗೆಗೆ ತೀವ್ರ ಗಾಯವಾಗಿತ್ತು. ವರದಿಯ ಪ್ರಕಾರ, ತಾಹಿಲ್ ಸ್ಥಳದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ, ಅವರನ್ನು ಅಂತಿಮವಾಗಿ ಸ್ಥಳಿಯರು ಹಿಡಿದುಕೊಂಡಿದ್ದರು. ಅಂತಿಮವಾಗಿ ಪೊಲೀಸರು ನಿರ್ಲಕ್ಷ್ಯದ ಚಾಲನೆಯಿಂದ ಗಾಯಗೊಂಡಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ತಾಹಿಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದಕ್ಕಾಗಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಖಾರ್ ಪೊಲೀಸ್ ಅಧಿಕಾರಿಯ ಪ್ರಕಾರ, ತಾಹಿಲ್ ಮತ್ತು ಇಬ್ಬರು ಆಟೋ ಪ್ರಯಾಣಿಕರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ತಾಹಿಲ್ ತಮ್ಮ ರಕ್ತದ ಮಾದರಿಯನ್ನು ನೀಡಲು ನಿರಾಕರಿಸಿದರು. ಆತನನ್ನು ವಶಕ್ಕೆ ಪಡೆದು ನಂತರ ಜಾಮೀನು ನೀಡಲಾಗಿತ್ತು.

ತಾಹಿಲ್ ತಮ್ಮ ವೃತ್ತಿ ಜೀವನದಲ್ಲಿ ಹಲವು ಹಿಂದಿ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ತಮ್ಮ ಪಾತ್ರಗಳಿಗೆ ಜನಪ್ರಿಯರಾಗಿದ್ದಾರೆ. ಬಾಜಿಗರ್‌ನಲ್ಲಿ ಶಾರುಖ್ ಖಾನ್, ಕಹೋ ನಾ ಪ್ಯಾರ್ ಹೈನಲ್ಲಿ ಹೃತಿಕ್ ರೋಷನ್ ಮತ್ತು ಇಷ್ಕ್‌ನಲ್ಲಿ ಅಮೀರ್ ಖಾನ್ ಮತ್ತು ಅಜಯ್ ದೇವಗನ್ ಅವರೊಂದಿಗೆ ಕೆಲಸ ಮಾಡಿದ್ದಾರೆ. ನಟ ರೇಸ್, ಅಜ್ಞಾತವಾಸ, ಡರ್ ಮತ್ತು ಇನ್ನೂ ಅನೇಕ ಜನಪ್ರಿಯ ಚಿತ್ರಗಳ ಭಾಗವಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT