ಶಾರೂಕ್ ಖಾನ್ ತಿರುಪತಿ ದೇವಸ್ಥಾನದಲ್ಲಿ 
ಬಾಲಿವುಡ್

'ಜವಾನ್' ಬಿಡುಗಡೆ ಮುನ್ನ ತಿರುಪತಿ ಬಾಲಾಜಿ ಮೊರೆ ಹೋದ ಬಾಲಿವುಡ್ ನಟ ಶಾರೂಕ್ ಖಾನ್, ವಿಡಿಯೊ ನೋಡಿ

ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಚಿತ್ರ ಜವಾನ್ ತೆರೆಗೆ ಬರಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಸಿನಿಮಾದ ಸಕ್ಸಸ್ ಗಾಗಿ ಅವರು ಇಂದು ಮಂಗಳವಾರ ಆಂಧ್ರ ಪ್ರದೇಶದ ತಿರುಪತಿ ಬಾಲಾಜಿ ದೇವರ ಮೊರೆ ಹೋಗಿದ್ದಾರೆ. 

ತಿರುಪತಿ: ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಚಿತ್ರ ಜವಾನ್ ತೆರೆಗೆ ಬರಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಸಿನಿಮಾದ ಸಕ್ಸಸ್ ಗಾಗಿ ಅವರು ಇಂದು ಮಂಗಳವಾರ ಆಂಧ್ರ ಪ್ರದೇಶದ ತಿರುಪತಿ ಬಾಲಾಜಿ ದೇವರ ಮೊರೆ ಹೋಗಿದ್ದಾರೆ. 

ಇದೇ ಸೆಪ್ಟೆಂಬರ್ 7ರಂದು ಜವಾನ್ ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಜವಾನ್ ರಿಲೀಸ್‌ಗೂ ಮುನ್ನ ಪ್ರಮೋಷನ್‌ ಬ್ಯುಸಿಯಲ್ಲಿರುವ ನಟ ಇಂದು ನಸುಕಿನ ಜಾವ ಬಿಡುವು ಮಾಡಿಕೊಂಡು ತಮ್ಮ ಪುತ್ರಿ ಸುಹಾನ ಖಾನ್, ಚಿತ್ರದ ನಾಯಕಿ ಬಹುಭಾಷಾ ತಾರೆ ನಯನತಾರಾ ಮತ್ತು ತಮ್ಮ ಪರ್ಸನಲ್ ಮ್ಯಾನೇಜರ್ ಪೂಜಾ ದದ್ಲಾನಿ ಜೊತೆ ತಿರುಪತಿ ಸನ್ನಿಧಾನಕ್ಕೆ ಬಂದಿದ್ದರು. 

ತಿಮ್ಮಪ್ಪನ ದರ್ಶನ ಪಡೆದು ಬಂದ ಶಾರುಖ್ ಖಾನ್ ಅಭಿಮಾನಿಗಳತ್ತ ಕೈ ಬೀಸಿ ತೆರಳಿದರು. ಶಾರೂಕ್ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದ ಒಳ-ಹೊರಗೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ದೇವಸ್ಥಾನ ಭೇಟಿ ವೇಳೆ ಶಾರೂಕ್ ಖಾನ್ ಬಿಳಿ ಶರ್ಟ್ ಮತ್ತು ಪಂಚೆ ಸಾಂಪ್ರದಾಯಿಕ ದಿರಿಸಿನಲ್ಲಿದ್ದರು. ಮೊದಲಿಗೆ ಧ್ವಜಸ್ತಂಭಕ್ಕೆ ಪೂಜೆ ಸಲ್ಲಿಸಿ ನಂತರ ವೆಂಕಟೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ತಮಿಳಿನ ನಿರ್ದೇಶಕ ಅಟ್ಲಿ ಜವಾನ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ವಿಜಯ್ ಸೇತುಪತಿ, ಪ್ರಿಯಾಮಣಿ ಮತ್ತು ಸನ್ಯಾ ಮಲ್ಹೋತ್ರಾ ಸಹ ನಟಿಸಿದ್ದಾರೆ. ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT