ಅನಿಮಲ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ 
ಬಾಲಿವುಡ್

ರಣಬೀರ್ ಕಪೂರ್ ಹುಟ್ಟುಹಬ್ಬದಂದು ಬಹುನಿರೀಕ್ಷಿತ 'ಅನಿಮಲ್' ಚಿತ್ರದ ಟೀಸರ್ ಬಿಡುಗಡೆ, ರಶ್ಮಿಕಾ ಮಂದಣ್ಣ ಕ್ಯೂಟ್

ರಣಬೀರ್ ಕಪೂರ್ 41ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 'ಅನಿಮಲ್' ಚಿತ್ರತಂಡ ಚಿತ್ರದ ಟೀಸರ್ ಅನ್ನು ಗುರುವಾರ ಬಿಡುಗಡೆ ಮಾಡಿದೆ. 'ಅರ್ಜುನ್ ರೆಡ್ಡಿ' ಮತ್ತು 'ಕಬೀರ್ ಸಿಂಗ್' ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಪ್ಯಾನ್-ಇಂಡಿಯಾ ಸಿನಿಮಾದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದಾರೆ.

ಮುಂಬೈ: ರಣಬೀರ್ ಕಪೂರ್ 41ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 'ಅನಿಮಲ್' ಚಿತ್ರತಂಡ ಚಿತ್ರದ ಟೀಸರ್ ಅನ್ನು ಗುರುವಾರ ಬಿಡುಗಡೆ ಮಾಡಿದೆ.

'ಅರ್ಜುನ್ ರೆಡ್ಡಿ' ಮತ್ತು 'ಕಬೀರ್ ಸಿಂಗ್' ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಪ್ಯಾನ್-ಇಂಡಿಯಾ ಸಿನಿಮಾದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ 2.26 ನಿಮಿಷಗಳ ಟೀಸರ್‌ನಲ್ಲಿ, ತಂದೆ-ಮಗನ ಸಂಬಂಧದಲ್ಲಿ ರಣಬೀರ್ ಕಪೂರ್ ಮತ್ತು ಅನಿಲ್ ಕಪೂರ್ ಅವರ ಪಾತ್ರಗಳನ್ನು ತೋರಿಸುತ್ತದೆ. ರಣವೀರ್ ಕಪೂರ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ರಕ್ತ ಸಿಕ್ತ ಅಧ್ಯಾಯವನ್ನು ತೆಗೆದಿಟ್ಟಿದೆ.

'ಅನಿಮಲ್' ಒಂದು ಸಿನಿಮೀಯ ಕಾಳ್ಗಿಚ್ಚು ಆಗಿದ್ದು, ಥ್ರಿಲ್ ಮತ್ತು ಪ್ಯಾಶನ್ ಮೂಲಕ ಮೂಲಕ ನಿಮ್ಮನ್ನು ವೈಲ್ಡ್ ಸವಾರಿಗೆ ಕರೆದೊಯ್ಯುವುದು ಖಚಿತ' ಎಂದು ಚಿತ್ರತಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕನ್ನಡ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದೆ.

ಈ ಹಿಂದೆ ಪಿಟಿಐಗೆ ನೀಡಿದ್ದ ಸಂದರ್ಶನದಲ್ಲಿ ರಣಬೀರ್ ಕಪೂರ್. 'ಅನಿಮಲ್' ತನಗೆ 'ಹೊಸ ಪ್ರದೇಶ' ಎಂದು ಕರೆದಿದ್ದರು.

'ಇದು ಕ್ರೈಮ್ ಡ್ರಾಮಾ ಆಗಿದ್ದು, ತಂದೆ-ಮಗನ ಕಥೆಯನ್ನು ಒಳಗೊಂಡಿದೆ. ಇದು ಪ್ರೇಕ್ಷಕರು ನಾನು ಮಾಡಬೇಕೆಂದು ನಿರೀಕ್ಷಿಸದ ವಿಷಯವಾಗಿದೆ. ಇದು ಬೂದು ಛಾಯೆಯನ್ನು ಹೊಂದಿದೆ. ನಾನು ನಾನಲ್ಲದ ಪಾತ್ರ ಇದಾಗಿದೆ. ಹಾಗಾಗಿ, ನಾನು ಇದನ್ನು ಎದುರು ನೋಡುತ್ತಿದ್ದೇನೆ' ಎಂದು ಹೇಳಿದ್ದರು.

ಚಿತ್ರದಲ್ಲಿ, ರಶ್ಮಿಕಾ ಮಂದಣ್ಣ ಅವರು ರಣಬೀರ್ ಕಪೂರ್ ಅವರ ಪತ್ನಿಯಾಗಿ ಕಾಣಿಸಿಕೊಂಡಿದ್ದು, ಬಾಬಿ ಡಿಯೋಲ್ ಅವರು ವಿಲನ್ ಆಗಿ ನಟಿಸಿದ್ದಾರೆ.

ತೃಪ್ತಿ ದಿಮ್ರಿ ಸಹ ನಟಿಸಿರುವ 'ಅನಿಮಲ್' ಸಿನಿಮಾ ಡಿಸೆಂಬರ್ 1 ರಂದು ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

ಚಿತ್ರವನ್ನು ಭೂಷಣ್ ಕುಮಾರ್ ಮತ್ತು ಕೃಷ್ಣ ಕುಮಾರ್ ಅವರ ಟಿ-ಸೀರೀಸ್, ಮುರಾದ್ ಖೇತಾನಿಯ ಸಿನಿ1 ಸ್ಟುಡಿಯೋಸ್ ಮತ್ತು ಪ್ರಣಯ ರೆಡ್ಡಿ ವಂಗಾ ಅವರ ಭದ್ರಕಾಳಿ ಪಿಕ್ಚರ್ಸ್ ನಿರ್ಮಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT