ಅರ್ಬಾಜ್ ಖಾನ್, ಸಲ್ಮಾನ್ ಖಾನ್ 
ಬಾಲಿವುಡ್

ಸನ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ; ಆತಂಕಕಾರಿ ಘಟನೆಯಿಂದ ಕುಟುಂಬಕ್ಕೆ ಆಘಾತ: ಅರ್ಬಾಜ್ ಖಾನ್

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಸಹೋದರ ಅರ್ಬಾಜ್ ಖಾನ್ ಸೋಮವಾರ ಹೇಳಿಕೆ ನೀಡಿದ್ದು, ಇದು "ಗೊಂದಲ ಮತ್ತು ಆತಂಕಕಾರಿ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಅವರು ಪೊಲೀಸರೊಂದಿಗೆ ಸಹಕರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಸಹೋದರ ಅರ್ಬಾಜ್ ಖಾನ್ ಸೋಮವಾರ ಹೇಳಿಕೆ ನೀಡಿದ್ದು, ಇದು "ಗೊಂದಲ ಮತ್ತು ಆತಂಕಕಾರಿ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಅವರು ಪೊಲೀಸರೊಂದಿಗೆ ಸಹಕರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಭಾನುವಾರ ಮುಂಜಾನೆ 5 ಗಂಟೆ ವೇಳೆಯಲ್ಲಿ ಸಲ್ಮಾನ್ ಖಾನ್ ಮನೆಯ ಹೊರಗೆ ಮೋಟಾರ್‌ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

"ಸಲೀಂ ಖಾನ್ ಕುಟುಂಬದ ನಿವಾಸದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಮೋಟಾರ್‌ಸೈಕಲ್‌ನಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಘಟನೆಯು ತುಂಬಾ ಗೊಂದಲ ಮತ್ತು ಆತಂಕಕಾರಿಯಾಗಿದೆ. ಈ ಆಘಾತಕಾರಿ ಘಟನೆಯಿಂದ ನಮ್ಮ ಕುಟುಂಬವು ಆಘಾತಕ್ಕೊಳಗಾಗಿದೆ ಎಂದು ಇನ್ಸ್ಟಾಗ್ರಾಮ್ ನಲ್ಲಿ ಅವರು ಹಂಚಿಕೊಂಡಿದ್ದಾರೆ.

ಕುಟುಂಬಕ್ಕೆ ಆತ್ಮೀಯರು ಎಂದು ಹೇಳಿಕೊಳ್ಳುವ ಕೆಲವರು "ಮಾಧ್ಯಮಗಳಿಗೆ ಇಲ್ಲ ಸಲ್ಲದ ಹೇಳಿಕೆನೀಡುತ್ತಿದ್ದಾರೆ ಮತ್ತು ಘಟನೆಯನ್ನು "ಪ್ರಚಾರದ ಸ್ಟಂಟ್" ಎಂದು ಕರೆಯುತ್ತಿದ್ದಾರೆ. ಅದು ಸತ್ಯವಲ್ಲ."ಈ ಸಮಯದಲ್ಲಿ, ಈ ಅಹಿತಕರ ಘಟನೆಯ ತನಿಖೆಯಲ್ಲಿ ಕುಟುಂಬವು ಪೊಲೀಸರಿಗೆ ಸಹಾಯ ಮತ್ತು ಸಹಕಾರ ನೀಡುತ್ತಿದೆ. ನಮಗೆ ಮುಂಬೈ ಪೊಲೀಸರ ಮೇಲೆ ನಂಬಿಕೆ ಇದೆ ಮತ್ತು ನಮ್ಮ ಕುಟುಂಬವನ್ನು ರಕ್ಷಿಸಲು ಮತ್ತು ಸುರಕ್ಷಿತವಾಗಿರಿಸಲು ಅವರು ತಮ್ಮ ಸಾಮರ್ಥ್ಯದಲ್ಲಿ ಎಲ್ಲವನ್ನೂ ಮಾಡುತ್ತಾರೆ ಎಂದು ನಮಗೆ ಭರವಸೆ ನೀಡಲಾಗಿದೆ. ಎಲ್ಲರ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಫೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT