ಜಾಕೀರ್ ಹುಸೇನ್ PTI
ಬಾಲಿವುಡ್

ಹೃದಯ ಸಂಬಂಧಿ ಕಾಯಿಲೆ: ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಗೆ ಐಸಿಯುನಲ್ಲಿ ಚಿಕಿತ್ಸೆ!

ಹೃದಯ ಸಂಬಂಧಿ ಸಮಸ್ಯೆಯಿಂದ ಕಳೆದ ಒಂದು ವಾರದಿಂದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಾಗಿದ್ದರು. ಉಸ್ತಾದ್ ಜಾಕಿರ್ ಹುಸೇನ್ ಅವರ ತಂದೆ ಅಲ್ಲಾ ರಖಾ ಕೂಡ ಪ್ರಸಿದ್ಧ ತಬಲಾ ವಾದಕರಾಗಿದ್ದರು.

ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಜಾಕಿರ್ ಸ್ನೇಹಿತ ಹಾಗೂ ಕೊಳಲು ವಾದಕ ರಾಕೇಶ್ ಚೌರಾಸಿಯಾ ಮಾಹಿತಿ ನೀಡಿದ್ದಾರೆ.

ಅವರು ಅಸ್ವಸ್ಥರಾಗಿದ್ದು, ಪ್ರಸ್ತುತ ಐಸಿಯುನಲ್ಲಿ ದಾಖಲಾಗಿದ್ದಾರೆ ಎಂದು ರಾಕೇಶ್ ಚೌರಾಸಿಯಾ ತಿಳಿಸಿದ್ದಾರೆ. ಅವರ ಸ್ಥಿತಿಯ ಬಗ್ಗೆ ನಾವೆಲ್ಲರೂ ಚಿಂತಾಕ್ರಾಂತರಾಗಿದ್ದೇವೆ ಎಂದು ಹೇಳಿದರು. 73 ವರ್ಷದ ಅಮೆರಿಕನ್ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಉಸ್ತಾದ್ ಜಾಕಿರ್ ಹುಸೇನ್ ಅವರ ಆಪ್ತ ಮೂಲಗಳು ತಿಳಿಸಿವೆ.

ಹೃದಯ ಸಂಬಂಧಿ ಸಮಸ್ಯೆಯಿಂದ ಕಳೆದ ಒಂದು ವಾರದಿಂದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಾಗಿದ್ದರು. ಉಸ್ತಾದ್ ಜಾಕಿರ್ ಹುಸೇನ್ ಅವರ ತಂದೆ ಅಲ್ಲಾ ರಖಾ ಕೂಡ ಪ್ರಸಿದ್ಧ ತಬಲಾ ವಾದಕರಾಗಿದ್ದರು. ಪ್ರಸಿದ್ಧ ತಬಲಾ ವಾದಕ ಜಾಕೀರ್ ಹುಸೇನ್ ಅವರು ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅಷ್ಟೇ ಅಲ್ಲ, ಆಲ್-ಸ್ಟಾರ್ ಗ್ಲೋಬಲ್ ಕನ್ಸರ್ಟ್‌ನಲ್ಲಿ ಭಾಗವಹಿಸಲು ಮಾಜಿ ಅಧ್ಯಕ್ಷ ಬರಾಕ್ ಒಬಾಮರಿಂದ ಆಹ್ವಾನ ಪಡೆದ ಮೊದಲ ಭಾರತೀಯ ತಬಲಾ ವಾದಕ ಜಾಕಿರ್ ಹುಸೇನ್ ಆಗಿದ್ದಾರೆ.

ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ 1951ರಲ್ಲಿ ಜನಿಸಿದ ಜಾಕೀರ್ ಹುಸೇನ್ ಕೇವಲ 3 ವರ್ಷ ವಯಸ್ಸಿನಲ್ಲೇ ತಬಲಾವನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, 7ನೇ ವಯಸ್ಸಿಗೆ ಪರಿಣತೆ ಪಡೆದಿದ್ದು 11ನೇ ವಯಸ್ಸಿನಲ್ಲಿ ಜಾಕಿರ್ ಹುಸೇನ್ ವಿವಿಧ ಸ್ಥಳಗಳಲ್ಲಿ ತಮ್ಮ ಕಾರ್ಯಕ್ರಮಗಳನ್ನು ನೀಡಲು ಪ್ರಾರಂಭಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT