ಅಲ್ಕಾ ಯಾಗ್ನಿಕ್‌ 
ಬಾಲಿವುಡ್

ಬಾಲಿವುಡ್ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್‌ಗೆ ಹಠಾತ್‌ ಕಿವುಡುತನ; ಅಪರೂಪದ ಶ್ರವಣ ದೋಷ

ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರು ಹಠಾತ್‌ ಕಿವುಡುತನಕ್ಕೆ ಒಳಗಾಗಿದ್ದು, ತಾವು ಅಪರೂಪದ ಶ್ರವಣ ದೋಷದಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಮುಂಬೈ: ಸಂಗೀತವನ್ನೇ ಉಸಿರಾಗಿಸಿಕೊಂಡಿರುವ ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರು ಹಠಾತ್‌ ಕಿವುಡುತನಕ್ಕೆ ಒಳಗಾಗಿದ್ದು, ತಾವು ಅಪರೂಪದ ಶ್ರವಣ ದೋಷದಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಕುರಿತು ಸೋಮವಾರ ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಲ್ಕಾ ಅವರು, ಇತ್ತೀಚೆಗೆ ಯಾಕೆ ನಾನು ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂದು ಕೇಳುತ್ತಿದ್ದ ಸ್ನೇಹಿತರು ಮತ್ತು ಹಿತೈಷಿಗಳಿಗಾಗಿ ಈ ವಿಷಯ ಹೇಳುತ್ತಿದ್ದೇನೆ. ನನ್ನೆಲ್ಲ ಅಭಿಮಾನಿಗಳು, ಸ್ನೇಹಿತರು, ಫಾಲೋವರ್ಸ್​ ಮತ್ತು ಹಿತೈಷಿಗಳಿಗೆ ಈ ವಿಷಯ ತಿಳಿಸುತ್ತಿದ್ದೇನೆ. ಕೆಲವು ವಾರಗಳ ಹಿಂದೆ ನಾನು ವಿಮಾನದಿಂದ ಹೊರಬಂದಾಗ ನನಗೆ ಏನೂ ಕೇಳಿಸುತ್ತಿಲ್ಲ ಎಂಬುದು ತಿಳಿಯಿತು. ಬಳಿಕ ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ವೈರಾಣು ಸೋಂಕಿನಿಂದ ಕಿವಿಯಲ್ಲಿರುವ ನರಕೋಶಗಳಿಗೆ ತೊಂದರೆಯಾಗಿ ಇದ್ದಕ್ಕಿದ್ದಂತೆ ಕಿವುಡುತನ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ನನಗೆ ತಿಳಿಯದಂತೆಯೇ ಈ ರೀತಿ ಆಗಿದೆ. ನಾನು ಇದರಿಂದ ಗುಣಮುಖವಾಗಲು ಪ್ರಯತ್ನಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ನೀವು ನನಗಾಗಿ ಪ್ರಾರ್ಥಿಸಿ. ಹೆಡ್​ಫೋನ್​ ಅಥವಾ ಇತರೆ ಸಾಧನಗಳ ಬಳಕೆ ಮತ್ತು ಜೋರಾದ ಶಬ್ದಗಳಿಂದ ದೂರವಿರಿ ಎಂದು ನನ್ನ ಅಭಿಮಾನಿಗಳು ಮತ್ತು ಯುವಜನರನ್ನು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ನನ್ನ ವೃತ್ತಿ ಜೀವನದಲ್ಲಾದ ಆರೋಗ್ಯ ಸಮಸ್ಯೆಗಳನ್ನು ಮುಂದೊಂದು ದಿನ ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ನಿಮ್ಮೆಲ್ಲರ ಪ್ರೀತಿ, ಬೆಂಬಲದಿಂದ ಗುಣಮುಖವಾಗಿ ಮತ್ತೆ ಬರುತ್ತೇನೆ ಎಂಬ ನಂಬಿಕೆ ನನಗಿದೆ. ಈ ಕಷ್ಟದ ಸಂದರ್ಭದಲ್ಲಿ ನನ್ನನ್ನು ಅರ್ಥ ಮಾಡಿಕೊಳ್ಳುವ ನೀವು ಮತ್ತು ನಿಮ್ಮ ಬೆಂಬಲ ನನಗೆ ಅತಿ ಮುಖ್ಯ’ ಎಂದು ಅಲ್ಕಾ ಯಾಗ್ನಿಕ್​ ಅವರು ಇನ್‌ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

58 ವರ್ಷದ ಅಲ್ಕಾ ಯಾಗ್ನಿಕ್ ಅವರು ಎರಡು ಬಾರಿ ರಾಷ್ಟ್ರ ಪ್ರಶಸ್ತಿ, 7 ಬಾರಿ ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳಿಗೆ ಪಾತ್ರರಾಗಿದ್ದಾರೆ. ಕೋಟ್ಯಂತರ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ