ಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಸ್ 
ಬಾಲಿವುಡ್

ಮಗಳು ಮಾಲ್ತಿಯೊಂದಿಗೆ ಅಯೋಧ್ಯೆ ರಾಮ ಮಂದಿರಕ್ಕೆ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಭೇಟಿ

ನಟಿ ಪ್ರಿಯಾಂಕಾ ಚೋಪ್ರಾ ಜೊನಸ್ ಮತ್ತು ಅವರ ಪತಿ ಅಮೆರಿಕದ ಗಾಯಕ ನಿಕ್ ಜೋನಸ್ ಬುಧವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದಂಪತಿ ತಮ್ಮ ಎರಡು ವರ್ಷದ ಮಗಳು ಮಾಲ್ತಿ ಮೇರಿ ಜೋನಸ್ ಅನ್ನು ಕರೆತಂದಿದ್ದರು.

ಅಯೋಧ್ಯೆ: ನಟಿ ಪ್ರಿಯಾಂಕಾ ಚೋಪ್ರಾ ಜೊನಸ್ ಮತ್ತು ಅವರ ಪತಿ ಅಮೆರಿಕದ ಗಾಯಕ ನಿಕ್ ಜೋನಸ್ ಬುಧವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದಂಪತಿ ತಮ್ಮ ಎರಡು ವರ್ಷದ ಮಗಳು ಮಾಲ್ತಿ ಮೇರಿ ಜೋನಸ್ ಅನ್ನು ಕರೆತಂದಿದ್ದರು.

ಹಳದಿ ಸೀರೆಯುಟ್ಟಿದ್ದ ಪ್ರಿಯಾಂಕಾ ಮತ್ತು ಕುರ್ತಾ ಸೆಟ್ ಧರಿಸಿದ್ದ ನಿಕ್ ಅವರು ಪೂಜೆ ಸಲ್ಲಿಸಿದ ನಂತರ ದೇವಾಲಯದಲ್ಲಿ ಫೋಟೊಗೆ ಪೋಸ್ ನೀಡಿದರು. ಪೀಚ್ ಬಣ್ಣದ ಉಡುಪನ್ನು ಧರಿಸಿದ್ದ ಮಾಲ್ತಿಯನ್ನು ನಟಿ ಪ್ರಿಯಾಂಕಾ ತಮ್ಮ ಕಂಕುಳಲ್ಲಿ ಎತ್ತಿಕೊಂಡಿದ್ದರು.

ದೇವಾಲಯದ ಅರ್ಚಕರು ಮತ್ತು ಅವರ ಭದ್ರತಾ ಸಿಬ್ಬಂದಿ ಪ್ರಿಯಾಂಕಾ ಮತ್ತು ಅವರ ಪತಿ ಹಾಗೂ ಮಗಳೊಂದಿಗೆ ಫೋಟೊ ತೆಗೆಸಿಕೊಂಡರು.

ಇದಕ್ಕೂ ಮುನ್ನ, ಪ್ರಿಯಾಂಕಾ ಮತ್ತು ನಿಕ್ ತಮ್ಮ ಮಗಳೊಂದಿಗೆ ಅಯೋಧ್ಯೆ ವಿಮಾನ ನಿಲ್ದಾಣದಿಂದ ಕಾರನ್ನೇರಿ ಹೊರಟಿದ್ದರು. ಜನವರಿಯಲ್ಲಿ ನಡೆದ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ನಂತರ ಇದು ಅವರ ಮೊದಲ ಭೇಟಿಯಾಗಿದೆ.

ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್, ರಜನಿಕಾಂತ್, ಆಲಿಯಾ ಭಟ್-ರಣಬೀರ್ ಕಪೂರ್, ವಿಕ್ಕಿ ಕೌಶಲ್-ಕತ್ರಿನಾ ಕೈಫ್ ಮತ್ತು ರಿಷಬ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಉಪಸ್ಥಿತರಿದ್ದರು.

ಪ್ರಿಯಾಂಕಾ ಮಂಗಳವಾರ ಮುಂಬೈನಲ್ಲಿ ನಡೆದ ಪ್ರೈಮ್ ವಿಡಿಯೋ ಪ್ರೆಸೆಂಟ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಲ್ಲಿ ಅವರು ತಮ್ಮ ಮುಂಬರುವ ನಿರ್ಮಾಣದ 'ವುಮೆನ್ ಆಫ್ ಮೈ ಬಿಲಿಯನ್' ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT