ರಾಜಕುಮಾರ್ ಹಿರಾನಿ 
ಬಾಲಿವುಡ್

ರಾಜ್‌ಕುಮಾರ್ ಹಿರಾನಿಗೆ ಮಧ್ಯ ಪ್ರದೇಶ ಸರ್ಕಾರದ ಕಿಶೋರ್ ಕುಮಾರ್ ಪ್ರಶಸ್ತಿ ಪ್ರದಾನ

ಖ್ಯಾತ ಗಾಯಕ ಕಿಶೋರ್ ಕುಮಾರ್ ಅವರ ಜನ್ಮಸ್ಥಳವಾದ ಖಾಂಡ್ವಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ವಿಜಯ್ ಶಾ ಅವರು ಹಿರಾನಿ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಿದರು.

ಭೋಪಾಲ್: ಖ್ಯಾತ ಬಾಲಿವುಡ್ ನಿರ್ದೇಶಕ, ಚಿತ್ರಕಥೆಗಾರ ಮತ್ತು ನಿರ್ಮಾಪಕ ರಾಜ್‌ಕುಮಾರ್ ಹಿರಾನಿ ಅವರಿಗೆ ಮಧ್ಯಪ್ರದೇಶ ಸರ್ಕಾರದ 2023ನೇ ಸಾಲಿನ ರಾಷ್ಟ್ರೀಯ ಕಿಶೋರ್ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಖ್ಯಾತ ಗಾಯಕ ಕಿಶೋರ್ ಕುಮಾರ್ ಅವರ ಜನ್ಮಸ್ಥಳವಾದ ಖಾಂಡ್ವಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಧ್ಯ ಪ್ರದೇಶ ಬುಡಕಟ್ಟು ವ್ಯವಹಾರಗಳು ಮತ್ತು ಭೋಪಾಲ್ ಅನಿಲ ದುರಂತ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ಶಾ ಅವರು ಹಿರಾನಿ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಾನಿ, ಕಿಶೋರ್ ಕುಮಾರ್ ಅವರು ತಮ್ಮ ಅಚ್ಚುಮೆಚ್ಚಿನ ಗಾಯಕರಾಗಿದ್ದು, ಅಂತಹ ಮಹೋನ್ನತ ವ್ಯಕ್ತಿತ್ವದ ಹೆಸರಿನ ಪ್ರಶಸ್ತಿಯನ್ನು ನೀಡಿರುವುದು ಸಂತಸ ತಂದಿದೆ ಎಂದರು.

ರಾಜ್ಯ ಸರ್ಕಾರದ ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಹೊಂದಿದ್ದು, ಚಿತ್ರಕಥೆ, ನಿರ್ದೇಶನ ಮತ್ತು ಹಿನ್ನೆಲೆ ಗಾಯನಕ್ಕಾಗಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ನಿರ್ದೇಶಕ(ಸಂಸ್ಕೃತಿ) ಎನ್‌ಪಿ ನಾಮದೇವ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಮುನ್ನಾಭಾಯ್ ಎಂಬಿಬಿಎಸ್(2003), ಲಗೇ ರಹೋ ಮುನ್ನಾಭಾಯ್(2006) ಮತ್ತು ತ್ರೀ ಈಡಿಯಟ್ಸ್ (2009) ನಂತಹ ಬ್ಲಾಕ್‌ಬಸ್ಟರ್‌ಗಳನ್ನು ಹಿರಾನಿ ದೇಶದ ಅತ್ಯಂತ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT