ಕಂಗನಾ ರಣಾವತ್ 
ಬಾಲಿವುಡ್

ನಾನು ಎಲ್ಲರ ಮೆಚ್ಚಿನ ಟಾರ್ಗೆಟ್ ಆಗಿದ್ದೇನೆ: ಕಂಗನಾ ಕಿಡಿ

ಎಮರ್ಜೆನ್ಸಿ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್(CBFC)ಗೆ ನಿರ್ದೇಶನ ನೀಡುವಂತೆ ಕೋರಿ ಕಂಗನಾ ಬಾಂಬೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಆದೇಶ ನೀಡಲು ನಿರಾಕರಿಸಿದೆ.

ನವದೆಹಲಿ: "ಇಂದು ನಾನು ಎಲ್ಲರ ನೆಚ್ಚಿನ ಟಾರ್ಗೆಟ್ ಆಗಿದ್ದೇನೆ. ನಿದ್ರಿಸುತ್ತಿರುವ ದೇಶವನ್ನು ಎಬ್ಬಿಸಿದ್ದಕ್ಕೆ ಬೆಲೆ ತೆರುತ್ತಿದ್ದೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು, ತಾವು ಅಭಿನಯಿಸಿದ ಎಮರ್ಜೆನ್ಸಿ ಚಿತ್ರಕ್ಕೆ CBFC ಪ್ರಮಾಣಪತ್ರ ಸಿಗದಿರುವ ಬಗ್ಗೆ ಕಿಡಿ ಕಾರಿದ್ದಾರೆ.

ಎಮರ್ಜೆನ್ಸಿ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್(CBFC)ಗೆ ನಿರ್ದೇಶನ ನೀಡುವಂತೆ ಕೋರಿ ಕಂಗನಾ ಬಾಂಬೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಆದೇಶ ನೀಡಲು ನಿರಾಕರಿಸಿದೆ. ಇದರ ಬೆನ್ನಲ್ಲೇ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಸಂಸದೆ, ನಾನು ಎಲ್ಲರ ಟಾರ್ಗೆಟ್ ಆಗಿದ್ದೇನೆ ಎಂದಿದ್ದಾರೆ.

ನಾನು ಏನು ಮಾತನಾಡುತ್ತಿದ್ದೇನೆಂದು ಅವರಿಗೆ ತಿಳಿದಿಲ್ಲ. ನಾನು ಏಕೆ ತುಂಬಾ ಕಾಳಜಿ ವಹಿಸುತ್ತೇನೆ ಎಂದು ಅವರಿಗೆ ಗೊತ್ತಿಲ್ಲ. ಏಕೆಂದರೆ ಅವರು ಶಾಂತಿಯನ್ನು ಬಯಸುತ್ತಾರೆ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಅವರು ಬಯಸುವುದಿಲ್ಲ. ಆದರೆ ಗಡಿಯಲ್ಲಿರುವ ಆ ಬಡ ಸೈನಿಕನಿಗೂ ಸುಮ್ಮನಿರುವ ಅದೇ ಸವಲತ್ತು ಸಿಗಲಿ ಎಂದು ಹಾರೈಸುತ್ತೇನೆ. ಅವರು ಪಾಕಿಸ್ತಾನಿ ಅಥವಾ ಚೀನಿಯರನ್ನು ಶತ್ರುಗಳೆಂದು ಪರಿಗಣಿಸುವ ಅಗತ್ಯವಿಲ್ಲ ಎಂದೆನ್ನಿಸುತ್ತಿದೆ ಎಂದು ಬಾಲಿವುಡ್ ನಟಿ ಪೋಸ್ಟ್ ಹಾಕಿದ್ದಾರೆ.

ಕಂಗನಾ ರಣಾವತ್ ಅವರ ‘ಎಮರ್ಜೆನ್ಸಿ’ಚಿತ್ರ ಬಿಡುಗಡೆಗೆ ಸಿಖ್ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ ವಿವಾದದಲ್ಲಿ ಸಿಲುಕಿಕೊಂಡಿದೆ. ಚಿತ್ರದ ನಿರ್ಮಾಪಕರು ಸಿಖ್ ಸಮುದಾಯವನ್ನು ತಪ್ಪಾಗಿ ಪ್ರತಿನಿಧಿಸುತ್ತಿದ್ದಾರೆ ಮತ್ತು ಐತಿಹಾಸಿಕ ಸಂಗತಿಗಳನ್ನು ತಿರುಚಿದ್ದಾರೆ ಎಂದು ಆರೋಪಿಸಿದ್ದಾರೆ.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಸದಸ್ಯರಿಗೆ ಜೀವ ಬೆದರಿಕೆಯ ನಂತರ ಚಲನಚಿತ್ರಕ್ಕೆ ಅನುಮತಿಯನ್ನು ತಡೆಹಿಡಿದಿದೆ ಎಂದು ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT