ಛಾವಾ ಚಿತ್ರದ ಸ್ಟಿಲ್ 
ಬಾಲಿವುಡ್

ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ನಟನೆಯ 'ಛಾವಾ' ನೆಟ್‌ಫ್ಲಿಕ್ಸ್‌ ನಾಳೆ ಬಿಡುಗಡೆ!

ಸಂಭಾಜಿ ಪಾತ್ರದಲ್ಲಿ ನಟ ವಿಕ್ಕಿ ಕೌಶಲ್ ಕಾಣಿಸಿಕೊಂಡಿದ್ದು, ಸಂಭಾಜಿ ಪತ್ನಿ ಯಶುಬಾಯಿ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

ಮುಂಬೈ: ಫೆಬ್ರುವರಿ 14 ರಂದು ಬಿಡುಗಡೆಯಾಗಿ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡ ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ, ಲಕ್ಷ್ಮಣ್ ಉಟೇಕರ್ ನಿರ್ದೇಶನದ 'ಛಾವಾ' ಇದೀಗ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಮ್ಯಾಡಾಕ್ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ದಿನೇಶ್ ವಿಜನ್ ನಿರ್ಮಿಸಿದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಛತ್ರಪತಿ ಸಂಭಾಜಿ ಮಹಾರಾಜ್ ಅವರ ಅಸಾಧಾರಣ, ಸ್ಪೂರ್ತಿದಾಯಕ ಕಥೆಯನ್ನು ಚಿತ್ರವು ಒಳಗೊಂಡಿದೆ. ಈ ಚಿತ್ರ ಏಪ್ರಿಲ್ 11 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗಲಿದೆ.

ಸಂಭಾಜಿ ಪಾತ್ರದಲ್ಲಿ ನಟ ವಿಕ್ಕಿ ಕೌಶಲ್ ಕಾಣಿಸಿಕೊಂಡಿದ್ದು, ಸಂಭಾಜಿ ಪತ್ನಿ ಯಶುಬಾಯಿ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಜೊತೆಗೆ ಅಕ್ಷಯ್ ಖನ್ನಾ, ದಿವ್ಯಾ ದತ್ತ, ವಿನೀತ್ ಕುಮಾರ್ ಸಿಂಗ್, ಅಶುತೋಷ್ ರಾಣಾ, ನೀಲ್ ಭೂಪಾಲಂ ಮತ್ತು ಡಯಾನಾ ಪೆಂಟಿ ಕೂಡ ನಟಿಸಿದ್ದಾರೆ.

'ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ನಟಿಸುವುದು ಪದಗಳಿಗೆ ಮೀರಿದ ಗೌರವ ಮತ್ತು ನನ್ನ ವೃತ್ತಿಜೀವನದ ಅತ್ಯಂತ ತೃಪ್ತಿಕರ ಅನುಭವಗಳಲ್ಲಿ ಒಂದಾಗಿದೆ. ಅವರ ಧೈರ್ಯ ಮತ್ತು ಪರಂಪರೆ ಪ್ರಪಂಚದ ಪ್ರತಿಯೊಂದು ಮೂಲೆಯನ್ನೂ ತಲುಪಬೇಕಾದ ವಿಷಯವಾಗಿದೆ. ಇದೀಗ ಅವರ ಕಥೆಯು ನೆಟ್‌ಫ್ಲಿಕ್ಸ್‌ ಮೂಲಕ ಭಾರತದ ಮೂಲೆ ಮೂಲೆಗೂ ತಲುಪಲು ಸಿದ್ಧವಾಗಿದೆ' ಎಂದು ವಿಕ್ಕಿ ಕೌಶಲ್ ಹೇಳಿದ್ದಾರೆ.

ಚಿತ್ರದ ಹಾಡುಗಳಿಗೆ ಇರ್ಷಾದ್ ಕಾಮಿಲ್ ಸಾಹಿತ್ಯ ಬರೆದಿದ್ದು, ಎಆರ್ ರೆಹಮಾನ್ ಧ್ವನಿ ನೀಡಿದ್ದಾರೆ.

'ಛಾವಾ' ಚಿತ್ರವು ನಮ್ಮೆಲ್ಲರಿಗೂ ಪ್ರೀತಿಯ ಶ್ರಮ ಮತ್ತು ಭಾವನಾತ್ಮಕ ಪ್ರಯಾಣವಾಗಿದೆ' ಎಂದು ನಿರ್ಮಾಪಕ ದಿನೇಶ್ ವಿಜನ್ ಹೇಳುತ್ತಾರೆ.

ಮ್ಯಾಡಾಕ್ ಫಿಲ್ಮ್ಸ್‌ ಅಡಿಯಲ್ಲಿ, ನಾವು ಮುಖ್ಯವಾದ ಕಥೆಗಳನ್ನು ಹೇಳುವುದರಲ್ಲಿ ಉತ್ಸುಕರಾಗಿದ್ದೇವೆ. ಛಾವಾ ಕೇವಲ ಧೈರ್ಯದ ಕಥೆಯಲ್ಲ; ಇದು ಪರಂಪರೆ, ಸ್ಥಿತಿಸ್ಥಾಪಕತ್ವ ಮತ್ತು ತ್ಯಾಗದ ಆಚರಣೆಯಾಗಿದೆ. ಚಿತ್ರಮಂದಿರಗಳಲ್ಲಿ ಅದ್ಭುತ ಪ್ರದರ್ಶನದ ನಂತರ, ನೆಟ್‌ಫ್ಲಿಕ್ಸ್‌ನಲ್ಲಿ ಜಾಗತಿಕ ಪ್ರೇಕ್ಷಕರಿಗೆ ಅದನ್ನು ತರಲು ನಾವು ಉತ್ಸುಕರಾಗಿದ್ದೇವೆ. ಅಲ್ಲಿ ಕಥೆಯು ಜೀವಂತವಾಗಿರುತ್ತದೆ ಮತ್ತು ಪ್ರಪಂಚದಾದ್ಯಂತದ ವೀಕ್ಷಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತದೆ' ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT