'ಕೇಸರಿ ಚಾಪ್ಟರ್ 2' ಚಿತ್ರದಲ್ಲಿ ನಟ ಅಕ್ಷಯ್ ಕುಮಾರ್ 
ಬಾಲಿವುಡ್

'ಕೇಸರಿ ಚಾಪ್ಟರ್ 2' ಚಿತ್ರ ನೋಡುವಾಗ ಪ್ರೇಕ್ಷಕರು ಫೋನ್ ಪರಿಶೀಲಿಸಿದರೆ...; ಅಕ್ಷಯ್ ಕುಮಾರ್ ಹೇಳಿದ್ದೇನು?

'ಕೇಸರಿ ಚಾಪ್ಟರ್ 2' ಚಿತ್ರದಲ್ಲಿ, ಅಕ್ಷಯ್ ಕುಮಾರ್ 1919ರಲ್ಲಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಬಗ್ಗೆ ಸತ್ಯವನ್ನು ಬಹಿರಂಗಪಡಿಸಲು ಬ್ರಿಟಿಷರ ವಿರುದ್ಧ ಹೋರಾಡಿದ ವಕೀಲ ಸಿ ಶಂಕರನ್ ನಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅಕ್ಷಯ್ ಕುಮಾರ್ ಸದ್ಯ ತಮ್ಮ ಮುಂಬರುವ ಚಿತ್ರ 'ಕೇಸರಿ ಚಾಪ್ಟರ್ 2' ರ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಏಪ್ರಿಲ್ 15 ರಂದು, ನಟ ದೆಹಲಿಯಲ್ಲಿ ನಡೆದ ಚಿತ್ರದ ವಿಶೇಷ ಪ್ರಥಮ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಮಾಧ್ಯಮಗಳೊಂದಿಗಿನ ಸಂವಾದದ ಸಂದರ್ಭದಲ್ಲಿ, ಅಕ್ಷಯ್ ಚಿತ್ರ ಬಿಡುಗಡೆಗೆ ಮುನ್ನ ಅಭಿಮಾನಿಗಳಿಗೆ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಎಲ್ಲ ಭಾರತೀಯರು ಚಿತ್ರವನ್ನು ವೀಕ್ಷಿಸಿ ಮತ್ತು ದೇಶದ ಗತಕಾಲದ ಎಲ್ಲಿಯೂ ಹೇಳಿಲ್ಲದ ಅಧ್ಯಾಯದ ಬಗ್ಗೆ ತಿಳಿದುಕೊಳ್ಳಬೇಕು. 'ದಯವಿಟ್ಟು ನಿಮ್ಮ ಫೋನ್‌ಗಳನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳಿ ಮತ್ತು ಈ ಚಿತ್ರದ ಪ್ರತಿಯೊಂದು ಸಂಭಾಷಣೆಯನ್ನು ಆಲಿಸಿ ಎಂದು ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ವಿನಂತಿಸುತ್ತೇನೆ. ಇದು ಬಹಳಷ್ಟು ಅರ್ಥಪೂರ್ಣವಾಗಿರುತ್ತದೆ. ನೀವು ಸಿನಿಮಾ ನೋಡುವ ವೇಳೆ ನಿಮ್ಮ ಇನ್‌ಸ್ಟಾಗ್ರಾಂ ಅನ್ನು ಪರಿಶೀಲಿಸಲು ಪ್ರಯತ್ನಿಸಿದರೆ, ಅದು ಚಿತ್ರಕ್ಕೆ ಮಾಡಿದ ಅವಮಾನವಾಗುತ್ತದೆ. ಆದ್ದರಿಂದ ಎಲ್ಲರೂ ತಮ್ಮ ಫೋನ್‌ಗಳನ್ನು ದೂರವಿಡಬೇಕೆಂದು ನಾನು ವಿನಂತಿಸುತ್ತೇನೆ' ಎಂದು ಅವರು ಹೇಳಿದರು.

'ಕೇಸರಿ ಚಾಪ್ಟರ್ 2' ಚಿತ್ರದಲ್ಲಿ, ಅಕ್ಷಯ್ ಕುಮಾರ್ 1919ರಲ್ಲಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಬಗ್ಗೆ ಸತ್ಯವನ್ನು ಬಹಿರಂಗಪಡಿಸಲು ಬ್ರಿಟಿಷರ ವಿರುದ್ಧ ಹೋರಾಡಿದ ವಕೀಲ ಸಿ ಶಂಕರನ್ ನಾಯರ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಚಿತ್ರವು ಅಕ್ಷಯ್ ಅವರ 2019ರ ಹಿಟ್ ಚಿತ್ರ 'ಕೇಸರಿ'ಯ ಸೀಕ್ವೆಲ್ ಆಗಿದ್ದು, ರಘು ಪಾಲಟ್ ಮತ್ತು ಪುಷ್ಪಾ ಪಾಲಟ್ ಅವರ "ದಿ ಕೇಸ್ ದಟ್ ಶುಕ್ ದಿ ಎಂಪೈರ್" ಪುಸ್ತಕವನ್ನು ಆಧರಿಸಿದೆ.

ಚಿತ್ರದಲ್ಲಿ ಅಡ್ವೊಕೇಟ್ ನೆವಿಲ್ಲೆ ಮೆಕಿನ್ಲೆ ಪಾತ್ರದಲ್ಲಿ ಆರ್. ಮಾಧವನ್, ದಿಲ್ರೀತ್ ಗಿಲ್ ಪಾತ್ರದಲ್ಲಿ ಅನನ್ಯಾ ಪಾಂಡೆ, ರೆಜಿನಾ ಕ್ಯಾಸಂದ್ರ, ಸೈಮನ್ ಪೈಸ್ಲೆ ಡೇ ಮತ್ತು ಅಲೆಕ್ಸ್ ಒ'ನೆಲ್ ನಟಿಸಿದ್ದಾರೆ. ವಿಶಾಕ್ ನಾಯರ್, ಅಮಿತ್ ಸಿಯಾಲ್ ಮತ್ತು ಮನೋಜ್ ಪಹ್ವಾ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಬೆಂಬಲದೊಂದಿಗೆ ಮತ್ತು ಕರಣ್ ಸಿಂಗ್ ತ್ಯಾಗಿ ನಿರ್ದೇಶಿಸಿದ ಈ ಚಿತ್ರವು ಏಪ್ರಿಲ್ 18 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT