ರೋಹಿತ್ ಬಾಸ್ಫೋರ್ 
ಬಾಲಿವುಡ್

ಗುವಾಹಟಿ: 'ಫ್ಯಾಮಿಲಿ ಮ್ಯಾನ್ 3' ಚಿತ್ರದ ನಟ ರೋಹಿತ್ ಬಾಸ್ಫೋರ್ ಶವವಾಗಿ ಪತ್ತೆ!

ರೋಹಿತ್ ತನ್ನ ಸ್ನೇಹಿತರೊಂದಿಗೆ ಪಿಕ್ನಿಕ್‌ಗೆ ಹೋಗಿದ್ದಾಗ ಜಲಪಾತಕ್ಕೆ ಬಿದ್ದಿರಬಹುದು ಎಂದು ವರದಿಯಾಗಿದೆ.

ಗುವಾಹಟಿ: ಮುಂಬರುವ ಸರಣಿ 'ಫ್ಯಾಮಿಲಿ ಮ್ಯಾನ್ 3' ನಲ್ಲಿ ನಟಿಸಿದ್ದ ರೋಹಿತ್ ಬಾಸ್ಫೋರ್ ಭಾನುವಾರ (ಏಪ್ರಿಲ್ 27) ಮಧ್ಯಾಹ್ನ ಗರ್ಭಂಗ ಜಲಪಾತದ ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ರೋಹಿತ್ ತನ್ನ ಒಂಬತ್ತು ಸ್ನೇಹಿತರೊಂದಿಗೆ ಪಿಕ್ನಿಕ್‌ಗೆ ಹೋಗಿದ್ದಾಗ ಜಲಪಾತಕ್ಕೆ ಬಿದ್ದಿರಬಹುದು ಎಂದು ವರದಿಯಾಗಿದೆ. ರಾಣಿ ಪೊಲೀಸ್ ಔಟ್‌ಪೋಸ್ಟ್ ಅಧಿಕಾರಿಗಳು ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

'ನಾವು ಸಂಜೆ 4 ಗಂಟೆ ಸುಮಾರಿಗೆ ಈ ಬಗ್ಗೆ ಮಾಹಿತಿ ಪಡೆದೆವು ಮತ್ತು 4.30ರ ಹೊತ್ತಿಗೆ ಸ್ಥಳಕ್ಕೆ ತಲುಪಿದ್ದೇವೆ. ನಂತರ SDRF ತಂಡವು ಸಂಜೆ 6.30ರ ಸುಮಾರಿಗೆ ಶವವನ್ನು ವಶಪಡಿಸಿಕೊಂಡಿದೆ' ಎಂದು ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ರೋಹಿತ್ ಆಕಸ್ಮಿಕವಾಗಿ ಜಲಪಾತಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ವರದಿ ಪ್ರಕಾರ, ಇಲ್ಲಿಯವರೆಗೆ ಯಾವುದೇ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷದಿಂದ, ರೋಹಿತ್ ಫ್ಯಾಮಿಲಿ ಮ್ಯಾನ್ ಸೆಟ್‌ಗಳ ಚಿತ್ರಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಜೈದೀಪ್ ಅಹ್ಲಾವತ್ ಮತ್ತು ದಲೀಪ್ ತಹಿಲ್ ಅವರೊಂದಿಗೆ ಫೋಟೋಗಳನ್ನು ಹಂಚಿಕೊಂಡ ಅವರು, 'ಇಷ್ಟು ಉತ್ತಮ ಅನುಭವವನ್ನು ಪಡೆದಿರುವ ನಾನು ಅದೃಷ್ಟಶಾಲಿ' ಎಂದು ಬರೆದಿದ್ದಾರೆ.

ಈ ವರ್ಷದ ಆರಂಭದಲ್ಲಿ, ತಮ್ಮ ಸಹೋದ್ಯೋಗಿಗಳೊಂದಿಗೆ ಚಿತ್ರಗಳನ್ನು ಪೋಸ್ಟ್ ಮಾಡಿದ್ದು, 'ಫ್ಯಾಮಿಲಿ ಮ್ಯಾನ್ 3 ಸೆಟ್‌ಗಳಲ್ಲಿ. ಇದು ಒಂದು ಉತ್ತಮ ಅನುಭವವಾಗಿತ್ತು ಮತ್ತು ನಾನು ಯಾವಾಗಲೂ ಹೊಸ ವಿಷಯಗಳನ್ನು ಕಲಿಯಲು ಇಷ್ಟಪಡುತ್ತೇನೆ' ಎಂದು ಬರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT