ಶಾರೂಖ್ ಖಾನ್ 
ಬಾಲಿವುಡ್

ಮೂರು ದಶಕಗಳ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರಶಸ್ತಿ: ನಟ ಶಾರೂಖ್ ಖಾನ್ ಹೇಳಿದ್ದೇನು?

2023ನೇ ಸಾಲಿನ ರಾಷ್ಟ್ರೀಯ ಪುರಸ್ಕೃತರ ಪಟ್ಟಿಯನ್ನು ತೀರ್ಪುಗಾರರ ಮಂಡಳಿ ಅಧ್ಯಕ್ಷ ಅಶುತೋಷ್ ಗೋವಾರಿಕ್ ಘೋಷಿಸಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ವಿಕ್ರಾಂತ್ ಮ್ಯಾಸಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಮೂರು ದಶಕಗಳ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ರಾಷ್ಟ್ರೀಯ ಪ್ರಶಸ್ತಿ ಸಂದಿದೆ. ಪ್ರತಿಷ್ಠಿತ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದ್ದು, 'ಜವಾನ್' ಚಿತ್ರದ ಅತ್ಯುತ್ತಮ ನಟನೆಗಾಗಿ ಪ್ರಶಸ್ತಿಯನ್ನು ಶಾರೂಖ್ ಖಾನ್ ಗೆದ್ದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾರೂಖ್ ಖಾನ್, ಕೃತಜ್ಞತೆ, ಹೆಮ್ಮೆ ಮತ್ತು ನಮ್ರತೆಯಿಂದ ಮುಳುಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನನ್ನ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದ್ದು, ಈ ಹಾದಿಯಲ್ಲಿ ಮತ್ತಷ್ಟು ಮುಂದುವರೆಲು, ಶ್ರಮ ವಹಿಸಿ ಸಿನಿಮಾ ಮಾಡಲು ಮತ್ತು ಸಿನಿಮಾ ಕ್ಷೇತ್ರದಲ್ಲಿ ಮುಂದುವರೆಯಲು ಪ್ರೋತ್ಸಾಹಿಸಿದೆ ಎಂದು ತಮ್ಮ ಇನ್ಸಾಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಸಂದೇಶದಲ್ಲಿ ಪ್ರತಿಕ್ರಿಯಿದ್ದಾರೆ.

ಶಾರೂಕ್ ಖಾನ್ ಬಲಗೈಗೆ ಗಾಯವಾಗಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅವರ ಮುಂದಿನ ಕಿಂಗ್ ಚಿತ್ರದ ಚಿತ್ರೀಕರಣದ ವೇಳೆಯಲ್ಲಿ ಆದ ಗಾಯ ಇದಾಗಿದೆ. ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿರುವುದು ಕೇವಲ ಸಾಧನೆಗಾಗಿ ಅಲ್ಲ. ನಾನು ಏನು ಮಾಡ್ತೇನೆ ಎಂಬುದನ್ನು ನೆನಪಿಸುತ್ತದೆ. ಚಿತ್ರರಂಗದಲ್ಲಿ ಮತ್ತಷ್ಟು ಶ್ರಮಪಟ್ಟು ಕೆಲಸ ಮಾಡುವಂತೆ ಪ್ರೋತ್ಸಾಹಿಸಿದೆ. ನಟನೆ ಕೇವಲ ಕೆಲಸ ಮಾತ್ರವಲ್ಲ ಜವಾಬ್ದಾರಿ ಎಂಬುದು ತಿಳಿಸಿಕೊಟ್ಟಿದೆ. ನನ್ನ ಮೇಲಿನ ಪ್ರೀತಿಗಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

2023ನೇ ಸಾಲಿನ ರಾಷ್ಟ್ರೀಯ ಪುರಸ್ಕೃತರ ಪಟ್ಟಿಯನ್ನು ತೀರ್ಪುಗಾರರ ಮಂಡಳಿ ಅಧ್ಯಕ್ಷ ಅಶುತೋಷ್ ಗೋವಾರಿಕ್ ಘೋಷಿಸಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ವಿಕ್ರಾಂತ್ ಮ್ಯಾಸಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

Mark ಚಿತ್ರದ 'ಸೈಕೋ ಸೈತಾನ್' ಚಿತ್ರದ ಹಾಡು ಸಖತ್ ಟ್ರೋಲ್; Darshan ಫ್ಯಾನ್ಸ್ ಟಾಂಗ್, Youtube ವಿಡಿಯೋ ಡಿಲೀಟ್!

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

ಡಿಕೆಶಿಯ 'ಸುರಂಗದ ಹುಚ್ಚಿ'ನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ- ಆರ್. ಅಶೋಕ್

SCROLL FOR NEXT