ಸೋಫಿಯಾ ಖುರೇಷಿ - ವ್ಯೋಮಿಕಾ ಸಿಂಗ್ - ಪ್ರೇರಣಾ ದಿಯೋಸ್ಥಲಿ 
ಬಾಲಿವುಡ್

KBC ವಿಶೇಷ ಸಂಚಿಕೆ: ಆಪರೇಷನ್ ಸಿಂಧೂರ ಅಗತ್ಯವಿತ್ತೇ? ಅಮಿತಾಬ್ ಪ್ರಶ್ನೆಗೆ ಕರ್ನಲ್ ಸೋಫಿಯಾ ಹೇಳಿದ್ದೇನು?

ಆಗಸ್ಟ್ 15 ರಂದು ರಾತ್ರಿ 9 ಗಂಟೆಗೆ ಚಾನೆಲ್‌ನಲ್ಲಿ ಪ್ರಸಾರವಾಗಲಿರುವ ವಿಶೇಷ ಸಂಚಿಕೆಯಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ 'ಕೌನ್ ಬನೇಗಾ ಕರೋಡ್‌ಪತಿ' 17ನೇ ಸೀಸನ್, ಆಗಸ್ಟ್ 11ರ ಸೋಮವಾರ ಮತ್ತೆ ಆರಂಭಗೊಂಡಿದೆ. ಆಗಸ್ಟ್ 15ರಂದು ಪ್ರಸಾರವಾಗಲಿರುವ ವಿಶೇಷ ಸಂಚಿಕೆಯಲ್ಲಿ ಆಪರೇಷನ್ ಸಿಂಧೂರ ಕುರಿತ ಸುದ್ದಿಗೋಷ್ಠಿಗಳಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಭಾರತೀಯ ಸಶಸ್ತ್ರ ಪಡೆಯ ಕರ್ನಲ್ ಸೋಫಿಯಾ ಖುರೇಷಿ ಸೇರಿದಂತೆ ಮೂವರು ಗೌರವಾನ್ವಿತರು ಪಾಲ್ಗೊಂಡಿದ್ದಾರೆ.

ಸೋನಿ ಟಿವಿ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ, ನಿರೂಪಕ ಅಮಿತಾಬ್ ಬಚ್ಚನ್ ಅವರು ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ, ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಕಮಾಂಡರ್ ಪ್ರೇರಣಾ ದಿಯೋಸ್ಥಲಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ಆಗಸ್ಟ್ 15 ರಂದು ರಾತ್ರಿ 9 ಗಂಟೆಗೆ ಚಾನೆಲ್‌ನಲ್ಲಿ ಪ್ರಸಾರವಾಗಲಿರುವ ವಿಶೇಷ ಸಂಚಿಕೆಯಲ್ಲಿ, ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಮೇ 7ರ ಬೆಳಿಗ್ಗೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಸಮಯ ಬಂದಿದ್ದು ಹೇಗೆ ಎಂಬ ಬಗ್ಗೆ ಕರ್ನಲ್ ಸೋಫಿಯಾ ಖುರೇಷಿ ಮಾತನಾಡಿದ್ದಾರೆ. 'ಪಾಕಿಸ್ತಾನವು ವರ್ಷಗಳಿಂದ ಇದನ್ನು ಮಾಡುತ್ತಿದೆ; ಪ್ರತ್ಯುತ್ತರ ನೀಡುವುದು ಮುಖ್ಯವಾಗಿತ್ತು, ಅದಕ್ಕಾಗಿಯೇ ಆಪರೇಷನ್ ಸಿಂಧೂರವನ್ನು ಯೋಜಿಸಲಾಗಿತ್ತು' ಎಂದು ಅವರು ಹೇಳಿದರು.

'ರಾತ್ರಿ 1.05 ರಿಂದ 1.30 ರ ನಡುವೆ, ನಾವು ಅವರ ಆಟವನ್ನು ಕೇವಲ 25 ನಿಮಿಷಗಳಲ್ಲಿ ಮುಗಿಸಿದ್ದೇವೆ' ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದರು.

'ಉಗ್ರ ನೆಲೆಗಳು ನಾಶವಾದವು ಮತ್ತು ಯಾವುದೇ ನಾಗರಿಕರಿಗೆ ಹಾನಿಯಾಗಿಲ್ಲ' ಎಂದು ಕಮಾಂಡರ್ ಪ್ರೇರಣಾ ದಿಯೋಸ್ಥಲಿ ಹೇಳಿದರು.

ನಂತರ ಕರ್ನಲ್ ಸೋಫಿಯಾ, 'ಇದು ಹೊಸ ಮನಸ್ಥಿತಿಯೊಂದಿಗೆ ಹೊಸ ಭಾರತ' ಎಂದು ಹೇಳಿದರು.

ಕೆಬಿಸಿ ನಿರೂಪಕ ಅಮಿತಾಬ್ ಬಚ್ಚನ್ ಮತ್ತು ಪ್ರೇಕ್ಷಕರು ಒಗ್ಗಟ್ಟಿನಿಂದ 'ಭಾರತ್ ಮಾತಾ ಕಿ ಜೈ' ಎಂದು ಘೋಷಣೆ ಕೂಗುವುದರೊಂದಿಗೆ ಕ್ಲಿಪ್ ಕೊನೆಗೊಂಡಿತು. ಸ್ವಾತಂತ್ರ್ಯ ದಿನದ ವಿಶೇಷ ಸಂಚಿಕೆ ಸೋನಿ ಎಲ್ಐವಿಯಲ್ಲಿಯೂ ಸ್ಟ್ರೀಮಿಂಗ್‌ಗೆ ಲಭ್ಯವಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT