ಜಾಲಿ ಎಲ್ ಎಲ್ ಬಿ 3 ಚಿತ್ರದ ಪೋಸ್ಟರ್ 
ಬಾಲಿವುಡ್

Jolly LLB 3: ವಿಚಾರಣೆಗೆ ಖುದ್ದು ಹಾಜರಾಗುವಂತೆ Akshay Kumar, Arshad Warsi ಗೆ ಪುಣೆ ಕೋರ್ಟ್ ಸಮನ್ಸ್!

ಪುಣೆಯ ಸಿವಿಲ್ ನ್ಯಾಯಾಲಯವು ನಟರಾದ ಅಕ್ಷಯ್ ಕುಮಾರ್, ಅರ್ಷದ್ ವಾರ್ಸಿ ಮತ್ತು ನಿರ್ದೇಶಕ ಸುಭಾಷ್ ಕಪೂರ್ ಅವರಿಗೆ ಅವರ ಮುಂಬರುವ ಚಿತ್ರ ಜಾಲಿ ಎಲ್ ಎಲ್ ಬಿ 3 ಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿದೆ.

ಪುಣೆ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಅರ್ಶದ್ ವಾರ್ಸಿ ಅಭಿನಯದ ಜಾಲಿ ಎಲ್ಎಲ್ ಬಿ 3 ಚಿತ್ರ ಬಿಡುಗಡೆಗೂ ಮುನ್ನವೇ ಸಂಕಷ್ಟ ಎದುರಾಗಿದ್ದು, ಇಬ್ಬರೂ ನಟರಿಗೆ ಪುಣೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ವಕೀಲ ವಾಜೇದ್ ರಹೀಮ್ ಖಾನ್ ಸಲ್ಲಿಸಿದ ಅರ್ಜಿಯ ಮೇರೆಗೆ ಪುಣೆಯ ಸಿವಿಲ್ ನ್ಯಾಯಾಲಯವು ನಟರಾದ ಅಕ್ಷಯ್ ಕುಮಾರ್, ಅರ್ಷದ್ ವಾರ್ಸಿ ಮತ್ತು ನಿರ್ದೇಶಕ ಸುಭಾಷ್ ಕಪೂರ್ ಅವರಿಗೆ ಅವರ ಮುಂಬರುವ ಚಿತ್ರ ಜಾಲಿ ಎಲ್ ಎಲ್ ಬಿ 3 ಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿದೆ. ನ್ಯಾಯಾಲಯವು ಮೂವರು ನಟರು ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಖುದ್ದಾಗಿ ಹಾಜರಾಗುವಂತೆ ನಿರ್ದೇಶಿಸಿದೆ.

ವಕೀಲ ವಾಜೇದ್ ರಹೀಮ್ ಖಾನ್ ಅವರ ಪ್ರಕಾರ, ಜಾಲಿ LLB 3 ಚಿತ್ರವು ಕಾನೂನು ವ್ಯವಸ್ಥೆಯನ್ನು ಅಪಹಾಸ್ಯ ಮಾಡುತ್ತದೆ ಮತ್ತು ನ್ಯಾಯಾಲಯದ ಕಲಾಪಗಳನ್ನು ಅಗೌರವಿಸುತ್ತದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಂತರ ಈ ಕ್ರಮ ಕೈಗೊಂಡಿದೆ.

'ನ್ಯಾಯಾಧೀಶರ 'ಮಾಮಾ' ಎಂದು ಕರೆಯಲಾಗಿದೆ'

ಇನ್ನು ಅರ್ಜಿಯಲ್ಲಿ, ಚಿತ್ರತಂಡ ಕಾನೂನು ವೃತ್ತಿಯನ್ನು ನಕಾರಾತ್ಮಕ ಬೆಳಕಿನಲ್ಲಿ ಚಿತ್ರಿಸುವುದನ್ನು ಆಕ್ಷೇಪಿಸಿದ್ದಾರೆ. ನ್ಯಾಯಾಧೀಶರನ್ನು "ಮಾಮಾ" ಎಂದು ಕರೆಯುವ ದೃಶ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ ಜೊತೆ ಮಾತನಾಡಿದ ವಕೀಲ ರಹೀಂ ಖಾನ್ ಅವರು, "ವಕೀಲರ ಬಗ್ಗೆ ಗೌರವ ಇರಬೇಕು. ಅದಕ್ಕಾಗಿಯೇ ನಾನು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ವಕೀಲರು ಮತ್ತು ನ್ಯಾಯಾಧೀಶರ ಬಗ್ಗೆ ಅವರು ತೋರಿಸಿರುವ ಎಲ್ಲವೂ ತಪ್ಪು... ನಾನು ಪುಣೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಮತ್ತು ನ್ಯಾಯಾಲಯವು ಅಕ್ಷಯ್ ಕುಮಾರ್, ಅರ್ಷದ್ ವಾರ್ಸಿ ಮತ್ತು ನಿರ್ದೇಶಕರು ಹಾಜರಿರಬೇಕು ಎಂದು ಕೇಳಿದೆ ಎಂದು ಹೇಳಿದ್ದಾರೆ.

ಅಂದಹಾಗೆ ಈ ದೂರು ಮೂಲತಃ 2024 ರಲ್ಲಿ ಚಿತ್ರದ ಮೊದಲ ಟೀಸರ್ ಬಿಡುಗಡೆಯಾದ ನಂತರ ದಾಖಲಾಗಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT