ಸೂರಜ್ ಪಾಂಚೋಲಿ 
ಬಾಲಿವುಡ್

ಸಿನಿಮಾ ಚಿತ್ರೀಕರಣದ ವೇಳೆ ಸೂರಜ್ ಪಾಂಚೋಲಿಗೆ ಸುಟ್ಟ ಗಾಯ, ಆಸ್ಪತ್ರೆಗೆ ದಾಖಲು

ಮುಂಬೈನ ಫಿಲ್ಮ್ ಸಿಟಿಯಲ್ಲಿ ಕೇಸರಿ ವೀರ್: ಲೆಜೆಂಡ್ ಆಫ್ ಸೋಮನಾಥ್ ಎಂಬ ಚಿತ್ರದ ಸಾಹಸ ಚಿತ್ರೀಕರಣದ ಸಮಯದಲ್ಲಿ ಸೂರಜ್ ಪಾಂಚೋಲಿಗೆ "ಗಂಭೀರ ಸುಟ್ಟಗಾಯಗಳಾಗಿವೆ" ಎಂದು ವರದಿಯಾಗಿದೆ.

ಮುಂಬೈ: ಸೂರಜ್ ಪಾಂಚೋಲಿ ಅವರಿಗೆ ಮಂಗಳವಾರ ತಮ್ಮ ಮುಂಬರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಸುಟ್ಟಗಾಯಗಳಾಗಿದ್ದು, ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ತಂದೆ ಮತ್ತು ನಟ ಆದಿತ್ಯ ಪಾಂಚೋಲಿ ಅವರು ತಿಳಿಸಿದ್ದಾರೆ.

ಮುಂಬೈನ ಫಿಲ್ಮ್ ಸಿಟಿಯಲ್ಲಿ ಕೇಸರಿ ವೀರ್: ಲೆಜೆಂಡ್ ಆಫ್ ಸೋಮನಾಥ್ ಎಂಬ ಚಿತ್ರದ ಸಾಹಸ ಚಿತ್ರೀಕರಣದ ಸಮಯದಲ್ಲಿ ಸೂರಜ್ ಪಾಂಚೋಲಿಗೆ "ಗಂಭೀರ ಸುಟ್ಟಗಾಯಗಳಾಗಿವೆ" ಎಂದು ವರದಿಯಾಗಿದೆ.

"ಬೆಂಕಿಯ ಬಳಕೆಯನ್ನು ಒಳಗೊಂಡ ಚಿತ್ರದ ಕೆಲವು ಪ್ಯಾಚ್‌ವರ್ಕ್" ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ನಿರ್ಮಾಪಕರು ಹೇಳಿರುವುದಾಗಿ ಆದಿತ್ಯ ಪಾಂಚೋಲಿ ತಿಳಿಸಿದ್ದಾರೆ.

"ಇದು ಸ್ವಲ್ಪ ನಿಯಂತ್ರಣ ತಪ್ಪಿದೆ. ಅವರಿಗೆ(ಸೂರಜ್ ಪಾಂಚೋಲಿ) ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಉಳಿದಂತೆ ಎಲ್ಲವೂ ಸರಿಯಾಗಿದೆ" ಎಂದು ಸೂರತ್‌ನಿಂದ ಆದಿತ್ಯ ಪಾಂಚೋಲಿ ಪಿಟಿಐಗೆ ತಿಳಿಸಿದ್ದಾರೆ.

ಕೇಸರಿ ವೀರ್: ಲೆಜೆಂಡ್ ಆಫ್ ಸೋಮನಾಥ್ ಚಿತ್ರವನ್ನು ಪ್ರಿನ್ಸ್ ಧಿಮಾನ್ ಅವರು ನಿರ್ದೇಶಿಸುತ್ತಿದ್ದು, ಕಾನು ಚೌಹಾಣ್ ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT