ನಟ ಸೈಫ್ ಆಲಿಖಾನ್  
ಬಾಲಿವುಡ್

ಪತ್ನಿ-ಮಕ್ಕಳ ರಕ್ಷಣೆಗೆ ಹೋದಾಗ ನಟ ಸೈಫ್ ಮೇಲೆ ಹಲ್ಲೆ; ತಂದೆ ಆರೋಗ್ಯ ವಿಚಾರಿಸಿದ ಇಬ್ರಾಹಿಂ, ಸಾರಾ

ಅವರಿಗೆ ಆರು ಗಾಯಗಳಾಗಿದ್ದು, ಎರಡು ಸಣ್ಣಪುಟ್ಟ, ಎರಡು ಮಧ್ಯಮ ಮತ್ತು ಎರಡು ಆಳವಾದ ಗಾಯಗಳಾಗಿವೆ, ಅವುಗಳಲ್ಲಿ ಒಂದು ಬೆನ್ನಿನ ಮೇಲೆ ಬೆನ್ನುಮೂಳೆಯ ಹತ್ತಿರದಲ್ಲಿದೆ.

ಮುಂಬೈ: ತಮ್ಮ ನಿವಾಸದಲ್ಲಿ ಇಂದು ಗುರುವಾರ ನಸುಕಿನ ಜಾವ ದರೋಡೆಕೋರರಿಂದ ಚಾಕು ಇರಿತಕ್ಕೆ ಒಳಗಾಗಿ ಗಾಯಗೊಂಡ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ಬಾಂದ್ರಾದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಆಸ್ಪತ್ರೆ ವೈದ್ಯರ ಪ್ರಕಾರ ಆರು ಬಾರಿ ಸೈಫ್ ಆಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು, ಅವುಗಳಲ್ಲಿ ಎರಡು ಆಳವಾದ ಗಾಯಗಳಾಗಿವೆ.

ಶಸ್ತ್ರಚಿಕಿತ್ಸೆ ಇನ್ನೂ ನಡೆಯುತ್ತಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಸಣ್ಣಪುಟ್ಟ, ಎರಡು ಮಧ್ಯಮ ಮತ್ತು ಎರಡು ಆಳವಾದ ಗಾಯಗಳಾಗಿವೆ, ಅವುಗಳಲ್ಲಿ ಒಂದು ಬೆನ್ನಿನ ಮೇಲೆ ಬೆನ್ನುಮೂಳೆಯ ಹತ್ತಿರದಲ್ಲಿದೆ. ನರಶಸ್ತ್ರಚಿಕಿತ್ಸಕ ಶಸ್ತ್ರಚಿಕಿತ್ಸೆಯಲ್ಲಿ ಭಾಗಿಯಾಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆಯ ಸಿಒಒ ಡಾ. ನೀರಜ್ ಉತ್ತಮಣಿ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮಣಿಕಟ್ಟಿನ ಗಾಯವೂ ಆಳವಾಗಿದೆ. ಅದು ಎಡಗೈಯಲ್ಲಿದೆ. ಅದನ್ನು ಸರಿಪಡಿಸಲು ಪ್ಲಾಸ್ಟಿಕ್ ಸರ್ಜನ್ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.

ಇಂದು ಆಗಿದ್ದೇನು: ಇಂದು ಗುರುವಾರ ನಸುಕಿನ ಜಾವ 2.30 ರ ಸುಮಾರಿಗೆ ಘಟನೆ ನಡೆದಾಗ ಸೈಫ್ ಖಾನ್ ಅವರ ಪತ್ನಿ, ನಟಿ ಕರೀನಾ ಕಪೂರ್ ಖಾನ್ ಮತ್ತು ಅವರ ಪುತ್ರರಾದ ತೈಮೂರ್ ಅಲಿ ಖಾನ್ ಮತ್ತು ಜೆಹ್ ಅಲಿ ಖಾನ್ ಮನೆಯೊಳಗೆ ಇದ್ದರು. ಹಲವು ಮಾಧ್ಯಮ ವರದಿಗಳ ಪ್ರಕಾರ, ಸೈಫ್ ಆಲಿ ಖಾನ್ ತನ್ನ ಕುಟುಂಬವನ್ನು ರಕ್ಷಿಸಲು ಧಾವಿಸಿದಾಗ ಒಳನುಗ್ಗಿದ ವ್ಯಕ್ತಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅವರ ಮನೆಯಲ್ಲಿ ರಾತ್ರಿ ಕಳ್ಳತನಕ್ಕೆ ಯತ್ನಿಸಲಾಗಿತ್ತು. ಈ ವೇಳೆ ತಡೆಯಲು ಹೋದಾಗ ಸೈಫ್ ಅವರ ತೋಳಿನ ಮೇಲೆ ಗಾಯವಾಗಿದ್ದು, ಇದಕ್ಕಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಟುಂಬದ ಉಳಿದವರು ಚೆನ್ನಾಗಿದ್ದಾರೆ ಎಂದು ನಟಿ ಕರೀನಾ ಕಪೂರ್ ಖಾನ್ ಅವರ ತಂಡ ಹೇಳಿಕೆ ನೀಡಿದೆ.

ಮಾಧ್ಯಮಗಳು ಮತ್ತು ಅಭಿಮಾನಿಗಳು ತಾಳ್ಮೆಯಿಂದಿರಿ. ಹೆಚ್ಚಿನ ಊಹಾಪೋಹಗಳನ್ನು ಮಾಡಬೇಡಿ ಎಂದು ನಾವು ವಿನಂತಿಸುತ್ತೇವೆ. ಪೊಲೀಸರು ಈಗಾಗಲೇ ಸರಿಯಾದ ತನಿಖೆಗಳನ್ನು ನಡೆಸುತ್ತಿದ್ದಾರೆ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸೈಫ್ ಅಲಿ ಖಾನ್ ಅವರ ಸಾರ್ವಜನಿಕ ಸಂಪರ್ಕ ಪ್ರತಿನಿಧಿಯೂ ಹೇಳಿಕೆಯಲ್ಲಿ ಅವರ ನಿವಾಸದಲ್ಲಿ ಕಳ್ಳತನ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸೈಫ್ ಆಲಿಖಾನ್ ಮಾಜಿ ಪತ್ನಿ ಮಕ್ಕಳಾದ ಇಬ್ರಾಹಿಂ ಮತ್ತು ಸಾರಾ ಖಾನ್ ತಂದೆಯ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಧಾವಿಸಿದ್ದಾರೆ. ಸೈಫ್ ಆಲಿಖಾನ್ ಬಾಂದ್ರಾ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ ಖಾನ್ ಅವರ ಸೇವಕರಲ್ಲಿ ಒಬ್ಬರಿಗೆ ಪರಿಚಿತ ವ್ಯಕ್ತಿಯೇ ದಾಳಿ ಮಾಡಿರಬಹುದೇ ಎಂದು ತನಿಖೆ ನಡೆಸುತ್ತಿದ್ದಾರೆ.

ಸಹಾಯಕ ಅವರಿಗೆ ಪ್ರವೇಶ ನೀಡಲು ಅವಕಾಶ ನೀಡಿರಬೇಕು. ಯಾವುದೋ ಕಾರಣಕ್ಕಾಗಿ ಜಗಳ ನಡೆದಿರಬೇಕು. ಆರೋಪಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ಸ್ಥಳೀಯ ಪೊಲೀಸರು ಆಕೆಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಅವರನ್ನು ಪತ್ತೆಹಚ್ಚಲು ಏಳು ಸ್ಥಳೀಯ ಪೊಲೀಸ್ ತಂಡಗಳು ಕೆಲಸ ಮಾಡುತ್ತಿವೆ ಎಂದು ತನಿಖಾ ತಂಡದ ಅಧಿಕಾರಿಯೊಬ್ಬರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಪ್ರತಿನಿಧಿಗೆ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಮ್ ಕದಮ್, ಪೊಲೀಸರು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಸೈಫ್ ಅಲಿ ಖಾನ್ ಮೇಲಿನ ದಾಳಿಯು ಕಳವಳಕಾರಿ ವಿಷಯ ಏಕೆಂದರೆ ಭದ್ರತೆಯಿರುವ ಇಂತಹ ಉನ್ನತ ವ್ಯಕ್ತಿಗಳ ಮೇಲೆ ಅವರ ಮನೆಗಳಲ್ಲಿಯೇ ದಾಳಿ ನಡೆದರೆ, ಸಾಮಾನ್ಯ ನಾಗರಿಕರ ಗತಿ ಏನಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ದರೋಡೆಕೋರರು, ಅಪರಾಧ ಹಿನ್ನಲೆ ಇರುವವರಿಗೆ ಕಾನೂನಿನ ಭಯ ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಕರೀನಾ ಕಪೂರ್ ಖಾನ್ ಅವರ ಕುಟುಂಬದ ಸ್ನೇಹಿತೆ, ಎನ್‌ಸಿಪಿ (ಎಸ್‌ಪಿ) ಲೋಕಸಭಾ ಸದಸ್ಯೆ ಸುಪ್ರಿಯಾ ಸುಳೆ, ಈ ಘಟನೆ ಕಳವಳಕಾರಿ ಎಂದು ಹೇಳಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯದ ಬಗ್ಗೆ ಕಾಂಗ್ರೆಸ್ ವಕ್ತಾರ ಅತುಲ್ ಲೊಂಡೆ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT