ಸೈಫ್ ಅಲಿ ಖಾನ್ 
ಬಾಲಿವುಡ್

Saif Ali Khan: ಮಧ್ಯ ಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದ ಮುಂಬೈ ಪೊಲೀಸರು!

ಮುಂಬೈ ಪೊಲೀಸರು ಶಂಕಿತ ಆರೋಪಿಯನ್ನು ಬಂಧಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಿಂದಲೂ ಆತನ ಗುರುತು ಪತ್ತೆಯಾಗಿದೆ. ಈಗ ಈ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ.

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚೂರಿ ಇರಿತ ಪ್ರಕರಣ ಇತ್ತೀಚಿನ ದಿನಗಳಲ್ಲಿ ಚರ್ಚೆಯ ವಿಷಯವಾಗಿದೆ. ಜನವರಿ 17ರಂದು ಬಾಲಿವುಡ್ ನಟನ ಮುಂಬೈ ನಿವಾಸಕ್ಕೆ ನುಗ್ಗಿದ್ದ ದುಷ್ಕರ್ಮಿಯೊಬ್ಬ ನಟನಿಗೆ ಚೂರಿ ಇರಿದಿದ್ದನು. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವಾರು ಶಸ್ತ್ರಚಿಕಿತ್ಸೆಗಳಿಗೆ ಒಳಗಾದ ನಂತರ ನಟ ಪ್ರಸ್ತುತ ಐಸಿಯುನಲ್ಲಿದ್ದಾರೆ. ಮತ್ತೊಂದೆಡೆ, ಮುಂಬೈ ಪೊಲೀಸರು ಶಂಕಿತ ಆರೋಪಿಯನ್ನು ಬಂಧಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಿಂದಲೂ ಆತನ ಗುರುತು ಪತ್ತೆಯಾಗಿದೆ. ಈಗ ಈ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ.

ಮುಂಬೈ ಪೊಲೀಸರು ಮಧ್ಯಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದ್ದಾರೆ. ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣದಲ್ಲಿ ಆತನ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುಗುತ್ತದೆ. ಮತ್ತೊಂದೆಡೆ, ಸೈಫ್ ಅವರ ಬಾಂದ್ರಾ ನಿವಾಸ ಸತ್ಗುರು ಶರಣ್ ಅಪಾರ್ಟ್‌ಮೆಂಟ್‌ನ ಸಿಸಿಟಿವಿ ದೃಶ್ಯಾವಳಿಗಳು ಸಹ ವೈರಲ್ ಆಗಿವೆ. ಕ್ಲಿಪ್‌ನಲ್ಲಿ, ಶಂಕಿತ ಆರೋಪಿಯು ಮೆಟ್ಟಿಲುಗಳ ಮೂಲಕ ನಟನ ಮನೆಯಿಂದ ಹೊರಹೋಗುತ್ತಿರುವುದು ಕಾಣಬಹುದು. ಬಾಂದ್ರಾ ರೈಲು ನಿಲ್ದಾಣದ ಸಿಸಿಟಿವಿಯಲ್ಲೂ ಅವನು ಕಾಣಿಸಿಕೊಂಡಿದ್ದು ಪ್ರಸ್ತುತ, ಮುಂಬೈ ಪೊಲೀಸರು ಆತನ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ಸೈಫ್ ಅವರ ಪತ್ನಿ ಮತ್ತು ನಟಿ ಕರೀನಾ ಕಪೂರ್ ಖಾನ್ ಶುಕ್ರವಾರ ರಾತ್ರಿ ಅವರ ಹೇಳಿಕೆಯನ್ನು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ಅವರ ಸಿಬ್ಬಂದಿ ಮತ್ತು ಮನೆ ಸಹಾಯಕಿ ಸೇರಿದಂತೆ 15 ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದ್ದಾರೆ.

ಮುಂಬೈ ಆಸ್ಪತ್ರೆಯ ವೈದ್ಯರು, ನಟನಿಗೆ ನಿರಂತರವಾಗಿ ಹಲವಾರು ಬಾರಿ ಇರಿತ ಉಂಟಾಗಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ಸೈಫ್ ಅವರ ದೇಹದ ಹಲವು ಭಾಗಗಳಲ್ಲಿ ಆಳವಾದ ಗಾಯಗಳಾಗಿವೆ. ಅಲ್ಲದೆ, ಚಾಕುವಿನ ಮುರಿದ ಭಾಗವು ಸೈಫ್ ದೇಹದಲ್ಲಿ ಸಿಲುಕಿಕೊಂಡಿದ್ದು, ಶಸ್ತ್ರಚಿಕಿತ್ಸೆಯ ನಂತರ ಅದನ್ನು ಹೊರತೆಗೆಯಲಾಯಿತು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT