ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ  
ಬಾಲಿವುಡ್

ನಟಿ ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ; ಮನೆಯಲ್ಲಿ ಸಂಭ್ರಮ

ನಟಿಗೆ ಆಗಸ್ಟ್‌ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಟಿ ಕಿಯಾರಾ ಅಡ್ವಾಣಿ ಹಾಗೂ ಪತಿ ಸಿದ್ದಾರ್ಥ್ ಮಲ್ಹೋತ್ರಾ ಮನೆಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಈ ದಂಪತಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆಬಾಲಿವುಡ್ ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಹೆಣ್ಣು ಮಗುವಿಗೆ ತಂದೆ-ತಾಯಿಯಾಗಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ನಟಿಗೆ ಆಗಸ್ಟ್‌ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ವಾರ, ಸಿದ್ಧಾರ್ಥ್ ಮತ್ತು ಕಿಯಾರಾ ಮುಂಬೈನ ಕ್ಲಿನಿಕ್ ಒಂದರಲ್ಲಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್ ಅವರ ತಾಯಿ ರಿಮ್ಮಾ ಮಲ್ಹೋತ್ರಾ ಮತ್ತು ಕಿಯಾರಾ ಅವರ ಪೋಷಕರು ಜೆನೆವೀವ್ ಮತ್ತು ಜಗದೀಪ್ ಅಡ್ವಾಣಿ ಅವರೊಂದಿಗೆ ಆಸ್ಪತ್ರೆಯಲ್ಲಿದ್ದಾರೆ.

ಕಿಯಾರಾ ಅವರು ಕನ್ನಡದ ‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​ ದಾಸ್ ನಿರ್ದೇಶನ ಇದೆ. ಅವರು ಈ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಪ್ರೆಗ್ನೆನ್ಸಿಗೆ ಪ್ಲ್ಯಾನ್ ಮಾಡಿದ್ದರು. ಅವರು ತಮ್ಮ ಭಾಗದ ಶೂಟಿಂಗ್ ಮುಗಿಸಿಕೊಟ್ಟಿದ್ದಾರೆ. 2023ರ ಫೆಬ್ರವರಿ ತಿಂಗಳಲ್ಲಿ ಇವರು ವಿವಾಹ ಆಗಿದ್ದರು. ಮದುವೆಯಾದ ಸುಮಾರು ಎರಡೂವರೆ ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದಾರೆ.

ಕಿಯಾರಾ ಅಡ್ವಾಣಿ ಅವರಿಗೆ ಚಿತ್ರರಂಗದಲ್ಲಿ ಈಗಲೂ ಬೇಡಿಕೆ ಇದೆ. ಸದ್ಯ ಅವರು ಮಗು ಜನಿಸಿದ ಬಳಿಕ ಒಂದು ಗ್ಯಾಪ್ ಪಡೆಯಲಿದ್ದಾರೆ. ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್ 2’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರ ಆಗಸ್ಟ್​ 14ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಬೇಡಿದ ಪಾಕ್ ಮಹಿಳೆ!

'ಜನ ಸಾಮಾನ್ಯರಿಗಾಗಿ ಸುಪ್ರೀಂಕೋರ್ಟ್' : ಬಲವಾದ ಸಂದೇಶ ರವಾನಿಸಿದ CJI ಸೂರ್ಯಕಾಂತ್!

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ: 2-1 ಅಂತರದಲ್ಲಿ ಸರಣಿ ಕೈ ವಶ!

Puri Jagannath Temple: ಒಡಿಶಾ ಅಲ್ಲದೇ ಇತರ ಆರು ರಾಜ್ಯಗಳಲ್ಲಿ ಎಕರೆಗಟ್ಟಲೇ ಜಮೀನು! ಒಟ್ಟು ಎಷ್ಟಿದೆ ಗೊತ್ತಾ?

SCROLL FOR NEXT