ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ  
ಬಾಲಿವುಡ್

ನಟಿ ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ; ಮನೆಯಲ್ಲಿ ಸಂಭ್ರಮ

ನಟಿಗೆ ಆಗಸ್ಟ್‌ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಟಿ ಕಿಯಾರಾ ಅಡ್ವಾಣಿ ಹಾಗೂ ಪತಿ ಸಿದ್ದಾರ್ಥ್ ಮಲ್ಹೋತ್ರಾ ಮನೆಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಈ ದಂಪತಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆಬಾಲಿವುಡ್ ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಹೆಣ್ಣು ಮಗುವಿಗೆ ತಂದೆ-ತಾಯಿಯಾಗಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ನಟಿಗೆ ಆಗಸ್ಟ್‌ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ವಾರ, ಸಿದ್ಧಾರ್ಥ್ ಮತ್ತು ಕಿಯಾರಾ ಮುಂಬೈನ ಕ್ಲಿನಿಕ್ ಒಂದರಲ್ಲಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್ ಅವರ ತಾಯಿ ರಿಮ್ಮಾ ಮಲ್ಹೋತ್ರಾ ಮತ್ತು ಕಿಯಾರಾ ಅವರ ಪೋಷಕರು ಜೆನೆವೀವ್ ಮತ್ತು ಜಗದೀಪ್ ಅಡ್ವಾಣಿ ಅವರೊಂದಿಗೆ ಆಸ್ಪತ್ರೆಯಲ್ಲಿದ್ದಾರೆ.

ಕಿಯಾರಾ ಅವರು ಕನ್ನಡದ ‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​ ದಾಸ್ ನಿರ್ದೇಶನ ಇದೆ. ಅವರು ಈ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಪ್ರೆಗ್ನೆನ್ಸಿಗೆ ಪ್ಲ್ಯಾನ್ ಮಾಡಿದ್ದರು. ಅವರು ತಮ್ಮ ಭಾಗದ ಶೂಟಿಂಗ್ ಮುಗಿಸಿಕೊಟ್ಟಿದ್ದಾರೆ. 2023ರ ಫೆಬ್ರವರಿ ತಿಂಗಳಲ್ಲಿ ಇವರು ವಿವಾಹ ಆಗಿದ್ದರು. ಮದುವೆಯಾದ ಸುಮಾರು ಎರಡೂವರೆ ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದಾರೆ.

ಕಿಯಾರಾ ಅಡ್ವಾಣಿ ಅವರಿಗೆ ಚಿತ್ರರಂಗದಲ್ಲಿ ಈಗಲೂ ಬೇಡಿಕೆ ಇದೆ. ಸದ್ಯ ಅವರು ಮಗು ಜನಿಸಿದ ಬಳಿಕ ಒಂದು ಗ್ಯಾಪ್ ಪಡೆಯಲಿದ್ದಾರೆ. ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್ 2’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರ ಆಗಸ್ಟ್​ 14ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ: ಕರ್ನಾಟಕದ 3 ಸಾಧಕರಿಗೆ ಗೌರವ

CCL 2026: ಭೋಜ್‌ಪುರಿ ದಬಾಂಗ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ಗೆ 18 ರನ್‌ಗಳ ರೋಚಕ ಜಯ, ಸೆಮಿಫೈನಲ್‌ಗೆ ಎಂಟ್ರಿ!

ನಮಗೂ 'ಟೈಮ್' ಬರುತ್ತೆ: ದೇವೇಗೌಡರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು!

'ಬೆಂಗಳೂರಿನ ಮೂಲಕ ಜಗತ್ತು ನೋಡುತ್ತಿದೆ.. ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡುವುದಿಲ್ಲ': ಡಿಸಿಎಂ ಡಿಕೆ ಶಿವಕುಮಾರ್

ಕೇವಲ ಮುಂಬೈ ಮಾತ್ರವಲ್ಲ, ಇಡೀ ದೇಶವೇ ಹಸಿರು ಬಣ್ಣಕ್ಕೆ ತಿರುಗುತ್ತದೆ: ಪಕ್ಷದ ಕಾರ್ಪೋರೇಟರ್ ಹೇಳಿಕೆ ಸಮರ್ಥಿಸಿಕೊಂಡ AIMIM

SCROLL FOR NEXT