ರುಚಿ ಗುಜ್ಜರ್ 
ಬಾಲಿವುಡ್

'So Long Valley' ಪ್ರೀಮಿಯರ್ ಶೋ: ನಿರ್ಮಾಪಕ ಕರಣ್ ಸಿಂಗ್ ಗೆ ಚಪ್ಪಲಿಯಿಂದ ಹೊಡೆದ ಮಾಡೆಲ್! ಕಾರಣವೇನು?

ರುಚಿ ಗುಜ್ಜರ್ ಅವರಿಗೆ ವಂಚನೆ ಆರೋಪದ ಮೇಲೆ ಕರಣ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ರೂ. 23 ಲಕ್ಷ ವಂಚನೆ ಆರೋಪದ ಮೇಲೆ ಬಾಲಿವುಡ್ ನಿರ್ಮಾಪಕ ಕರಣ್ ಸಿಂಗ್ ಗೆ ಮಾಡೆಲ್ ರುಚಿ ಗುಜ್ಜರ್ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ನಡೆದ 'So Long Valley' ಪ್ರೀಮಿಯರ್ ಶೋನಲ್ಲಿ ಕರಣ್ ಸಿಂಗ್‌ಗೆ ಗುಜ್ಜರ್ ಚಪ್ಪಲಿಯಿಂದ ಹೊಡೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರುಚಿ ಗುಜ್ಜರ್ ಅವರಿಗೆ ವಂಚನೆ ಆರೋಪದ ಮೇಲೆ ಕರಣ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ಗುಜ್ಜರ್ ಅವರು ನೀಡಿದ ದೂರಿನ ಮೇರೆಗೆ ಸಿಂಗ್ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಓಶಿವಾರಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಟೆಲಿವಿಷನ್ ಚಾನೆಲ್‌ಗಾಗಿ ಸಿನಿಮಾವೊಂದನ್ನು ಆರಂಭಿಸುವ ನೆಪದಲ್ಲಿ ಕರಣ್ ಸಿಂಗ್ ತನ್ನಿಂದ ಹಣ ಪಡೆದಿದ್ದು, ಬಂದಂತಹ ಲಾಭ ಮತ್ತು ಆನ್-ಸ್ಕ್ರೀನ್ ಕ್ರೆಡಿಟ್‌ನಲ್ಲಿ ತನಗೆ ಪಾಲು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಸಿನಿಮಾವೂ ಆರಂಭವಾಗಿಲ್ಲ. ಹಣ ಕೂಡಾ ಮತ್ತೆ ವಾಪಸ್ ನೀಡಿಲ್ಲ ಎಂದು ಮಾಡೆಲ್ ಆರೋಪಿಸಿದ್ದಾರೆ.

ನಟಿಯ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಸಿಂಗ್ ವಿರುದ್ಧ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗುವುದು ಎಂದು ಗುಜ್ಜರ್ ಪರ ವಕೀಲರು ತಿಳಿಸಿದ್ದಾರೆ. 'ಸೋ ಲಾಂಗ್ ವ್ಯಾಲಿ 'ಹಿಂದಿ ಭಾಷೆಯ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು ತ್ರಿಧಾ ಚೌಧರಿ ಮತ್ತು ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!