ಸೈರಾ ಬಾನು - ಎಆರ್ ರೆಹಮಾನ್  online desk
ಬಾಲಿವುಡ್

ಆಸ್ಪತ್ರೆಯಿಂದ ಎಆರ್ ರೆಹಮಾನ್ ಬಿಡುಗಡೆ: 'ಮಾಜಿ ಪತ್ನಿ' ಎಂದು ಕರೆಯಬೇಡಿ, ನಾವಿನ್ನು ಗಂಡ-ಹೆಂಡತಿ; ಸೈರಾ ಬಾನು

ನಾವು ಇನ್ನೂ ಅಧಿಕೃತವಾಗಿ ವಿಚ್ಛೇದನ ಪಡೆದಿಲ್ಲ. ನಾವಿನ್ನೂ ಗಂಡ ಹೆಂಡತಿ ಎಂದು ನಾನು ನಿಮ್ಮೆಲ್ಲರಿಗೂ ಹೇಳಲು ಬಯಸುತ್ತೇನೆ.

ಮುಂಬೈ: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಸ್ಕರ್ ಮತ್ತು ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎಆರ್ ರೆಹಮಾನ್ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ, ಅವರಿಂದ ವಿಚ್ಛೇದನ ಪಡೆದಿರುವ ಸೈರಾ ಬಾನು ತಮ್ಮ ಗೌಪ್ಯತೆ ಕಾಪಾಡುವಂತೆ ಮತ್ತು ತಮ್ಮನ್ನು 'ಮಾಜಿ ಪತ್ನಿ' ಎಂದು ಕರೆಯಬೇಡಿ ಎಂದು ಒತ್ತಾಯಿಸಿದ್ದಾರೆ.

ಭಾನುವಾರ, ಧ್ವನಿ ನೋಟ್ ಹಂಚಿಕೊಂಡಿರುವ ಸೈರಾ, 'ಅಸ್ಸಲಾಮ್‌ವಾಲೇಕುಮ್‌. ನಾನು ಅವರಿಗೆ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಂಜಿಯೋಗ್ರಫಿ ಮಾಡಲಾಗಿದೆ ಎಂಬ ಸುದ್ದಿ ನನಗೆ ತಿಳಿಯಿತು. ಅಲ್ಲಾಹನ ದಯೆಯಿಂದ ಅವರು ಈಗ ಚೆನ್ನಾಗಿದ್ದಾರೆ, ಅವರಿಗೆ ಏನೂ ಸಮಸ್ಯೆ ಇಲ್ಲ' ಎಂದಿದ್ದಾರೆ.

'ನಾವು ಇನ್ನೂ ಅಧಿಕೃತವಾಗಿ ವಿಚ್ಛೇದನ ಪಡೆದಿಲ್ಲ. ನಾವಿನ್ನೂ ಗಂಡ ಹೆಂಡತಿ ಎಂದು ನಾನು ನಿಮ್ಮೆಲ್ಲರಿಗೂ ಹೇಳಲು ಬಯಸುತ್ತೇನೆ. ಕಳೆದ ಎರಡು ವರ್ಷಗಳಿಂದ ನಮ್ಮಿಬ್ಬರಿಗೂ ಸರಿಹೊಂದದ ಕಾರಣ ನಾವು ಬೇರೆಯಾಗಿದ್ದೇವೆ. ನಾನು ಅವರ ಮೇಲೆ ಹೆಚ್ಚು ಒತ್ತಡ ಹೇರಲು ಬಯಸಲಿಲ್ಲ. ಆದರೆ, ದಯವಿಟ್ಟು 'ಮಾಜಿ ಪತ್ನಿ' ಎಂದು ಹೇಳಬೇಡಿ. ನಾವು ಕೇವಲ ಬೇರೆಯಾಗಿದ್ದೇವೆ ಅಷ್ಟೆ. ಆದರೆ, ನನ್ನ ಪ್ರಾರ್ಥನೆಗಳು ಯಾವಾಗಲೂ ಅವರೊಂದಿಗೆ ಇರುತ್ತವೆ. ನಾನು ಎಲ್ಲರಿಗೂ, ವಿಶೇಷವಾಗಿ ಅವರ ಕುಟುಂಬಕ್ಕೆ ಒಂದು ವಿಷಯ ಹೇಳಲು ಬಯಸುತ್ತೇನೆ. ದಯವಿಟ್ಟು ಅವರ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಮತ್ತು ಅವರನ್ನು ಚೆನ್ನಾಗಿ ನೋಡಿಕೊಳ್ಳಿ. ಧನ್ಯವಾದಗಳು, ಅಲ್ಲಾ ಹಫೀಜ್' ಎಂದಿದ್ದಾರೆ.

ಇದಕ್ಕೂ ಮುನ್ನ, ಶನಿವಾರ ರಾತ್ರಿ 'ನಿರ್ಜಲೀಕರಣ'ದಿಂದಾಗಿ ರೆಹಮಾನ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಲಂಡನ್‌ನಿಂದ ಹಿಂತಿರುಗಿದಾಗ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ನಿಗದಿತ ಆರೋಗ್ಯ ತಪಾಸಣೆ ಮಾಡಿ ಕೆಲ ಹೊತ್ತಿನಲ್ಲಿ ಆಸ್ಪತ್ರೆಯಿಂದ ಮನೆಗೆ ಹಿಂತಿರುಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ