ಸಿಕಂದರ್ ಚಿತ್ರದ ಸ್ಟಿಲ್ 
ಬಾಲಿವುಡ್

ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ 'ಸಿಕಂದರ್' ಬಿಡುಗಡೆಗೆ ದಿನಾಂಕ ನಿಗದಿ

ಈ ಚಿತ್ರವನ್ನು ಗಜನಿ ಮತ್ತು ತುಪ್ಪಕ್ಕಿಯಂತಹ ತಮಿಳು ಮತ್ತು ಹಿಂದಿ ಬ್ಲಾಕ್‌ಬಸ್ಟರ್‌ಗಳಿಗೆ ಹೆಸರುವಾಸಿಯಾದ ಎಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.

ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ತಮ್ಮ ಮುಂಬರುವ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸಲ್ಮಾನ್ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಸಿಕಂದರ್ ಚಿತ್ರ ಮಾರ್ಚ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಸಿಕಂದರ್ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಸಲ್ಮಾನ್, 'ಮಾರ್ಚ್ 30 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಭೇಟಿಯಾಗೋಣ! ಎಆರ್ ಮುರುಗದಾಸ್ ನಿರ್ದೇಶನದ ಸಿಕಂದರ್ ಚಿತ್ರ ಬಿಡುಗಡೆಯಾಗಲಿದೆ' ಎಂದು ಬರೆದಿದ್ದಾರೆ. ಸಿಕಂದರ್ ಚಿತ್ರವು ಗುಡಿ ಪಾಡ್ವಾ ಮತ್ತು ಯುಗಾದಿಯಂತಹ ಹಬ್ಬಗಳ ಸಮಯದಲ್ಲಿ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಲು ಸಿದ್ಧವಾಗಿದೆ.

ಈ ಚಿತ್ರವನ್ನು ಗಜನಿ ಮತ್ತು ತುಪ್ಪಕ್ಕಿಯಂತಹ ತಮಿಳು ಮತ್ತು ಹಿಂದಿ ಬ್ಲಾಕ್‌ಬಸ್ಟರ್‌ಗಳಿಗೆ ಹೆಸರುವಾಸಿಯಾದ ಎಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.

ಪಿಂಕ್‌ವಿಲ್ಲಾ ಜೊತೆ ಮಾತನಾಡಿದ ಮುರುಗದಾಸ್, 'ಸಿಕಂದರ್‌ನ ಮೊದಲಾರ್ಧ ಸುಮಾರು 1 ಗಂಟೆ 15 ನಿಮಿಷವಿದೆ ಮತ್ತು ದ್ವಿತೀಯಾರ್ಧ ಸುಮಾರು 1 ಗಂಟೆ 5 ನಿಮಿಷವಿದೆ. ಒಟ್ಟಾರೆ ರನ್‌ಟೈಮ್ ಸುಮಾರು 2 ಗಂಟೆ 20 ನಿಮಿಷ' ಎಂದು ಹೇಳಿದರು.

ಚಿತ್ರದಲ್ಲಿ ಕಾಜಲ್ ಅಗರ್ವಾಲ್, ಸತ್ಯರಾಜ್, ಶರ್ಮಾನ್ ಜೋಶಿ, ಪ್ರತೀಕ್ ಬಬ್ಬರ್, ಅಂಜಿನಿ ಧವನ್ ಮತ್ತು ಜತಿನ್ ಸರ್ನಾ ಕೂಡ ನಟಿಸಿದ್ದಾರೆ. ಸಿಕಂದರ್ ಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಂಬೈನಲ್ಲಿ ನಡೆಯಿತು. ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ಹಲವು ಸ್ಥಳಗಳಲ್ಲಿ 90 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. 2014ರ ಬ್ಲಾಕ್‌ಬಸ್ಟರ್ 'ಕಿಕ್' ನಂತರ ಸಲ್ಮಾನ್ ಅವರೊಂದಿಗೆ ಮತ್ತೆ ಒಂದಾಗುತ್ತಿರುವ ಸಾಜಿದ್ ನಾಡಿಯಾಡ್‌ವಾಲಾ ಚಿತ್ರವನ್ನು ನಿರ್ಮಿಸಿದ್ದಾರೆ.

ಕಳೆದ ತಿಂಗಳು, ಸಲ್ಮಾನ್ ತಮ್ಮ ಚಿತ್ರದ ಕುತೂಹಲಕಾರಿ ಟೀಸರ್ ಅನ್ನು ಹಂಚಿಕೊಂಡಿದ್ದರು. ಒಂದು ನಿಮಿಷ ಮತ್ತು 21 ಸೆಕೆಂಡುಗಳ ಟೀಸರ್ ಸಲ್ಮಾನ್ ಅವರ ಅಜ್ಜಿ ಪ್ರೀತಿಯಿಂದ ಸಿಕಂದರ್ ಎಂದು ಕರೆಯುವ ಸಂಜಯ್ ಎಂಬ ಪಾತ್ರವನ್ನು ಪರಿಚಯಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT