ಶಿಲ್ಪಾ ಶಿರೋಧ್ಕರ್‌ 
ಬಾಲಿವುಡ್

ಮತ್ತೆ ಕೊರೊನಾವೈರಸ್ ಆತಂಕ; ಬಾಲಿವುಡ್ ನಟಿ ಶಿಲ್ಪಾ ಶಿರೋಧ್ಕರ್‌ಗೆ ಕೋವಿಡ್ ಪಾಸಿಟಿವ್!

ಸಿಂಗಾಪುರ ಮತ್ತು ಹಾಂಗ್ ಕಾಂಗ್ ಸೇರಿದಂತೆ ಹಲವಾರು ಏಷ್ಯಾದ ದೇಶಗಳಲ್ಲಿ ಇತ್ತೀಚಿನ ವಾರಗಳಲ್ಲಿ COVID-19 ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ.

ಮುಂಬೈ: ನಟಿ ಶಿಲ್ಪಾ ಶಿರೋಧ್ಕರ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ತಮಗೆ ಕೋವಿಡ್-19 ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಂ ಖಾತೆಯಲ್ಲಿ, 'ನಮಸ್ಕಾರ ಜನರೇ! ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ಸುರಕ್ಷಿತವಾಗಿರಿ ಮತ್ತು ನೀವು ಮಾಸ್ಕ್ ಧರಿಸಿ!' ಶಿಲ್ಪಾ ಶಿರೋಧ್ಕರ್' ಎಂದು ಬರೆದಿರುವ ಟಿಪ್ಪಣಿಯನ್ನು ಹಂಚಿಕೊಂಡಿದ್ದಾರೆ. "ಸುರಕ್ಷಿತರಾಗಿರಿ" ಎಂದು ಶೀರ್ಷಿಕೆ ನೀಡಿದ್ದಾರೆ.

ಶಿಲ್ಪಾ ಶಿರೋಧ್ಕರ್ ಅವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ಅಭಿಮಾನಿಗಳು, ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಜಾಗೃತಿ ಮೂಡಿಸಿದ್ದಕ್ಕಾಗಿ ಅನೇಕರು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಇತರರು ತಮ್ಮ ದೈನಂದಿನ ಜೀವನದಲ್ಲಿ ಜಾಗರೂಕರಾಗಿರಲು ತಿಳಿಸಿದ್ದಾರೆ.

ಸಿಂಗಾಪುರ ಮತ್ತು ಹಾಂಗ್ ಕಾಂಗ್ ಸೇರಿದಂತೆ ಹಲವಾರು ಏಷ್ಯಾದ ದೇಶಗಳಲ್ಲಿ ಇತ್ತೀಚಿನ ವಾರಗಳಲ್ಲಿ COVID-19 ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಜನರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುವುದು ಮತ್ತು ಕಡಿಮೆ ಸಂಖ್ಯೆಯ ವೃದ್ಧರು ಬೂಸ್ಟರ್ ಡೋಸ್ ತೆಗೆದುಕೊಂಡಿರುವುದೇ ಈ ಏರಿಕೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ಅಧಿಕಾರಿಗಳು ಸೂಚಿಸುತ್ತಾರೆ.

ವರದಿ ಪ್ರಕಾರ, ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಕಂಡುಬಂದಿದ್ದು, ಮೇ 3ರ ವೇಳೆಗೆ ಸುಮಾರು 14,200 ಪ್ರಕರಣಗಳು ದಾಖಲಾಗಿವೆ. ಹಿಂದಿನ ವರ್ಷ ಇದೇ ಅವಧಿಗೆ ಹೋಲಿಸಿದರೆ ಇದು ಶೇ 28 ರಷ್ಟು ಹೆಚ್ಚಳವಾಗಿದೆ. ಚೀನಾದಲ್ಲಿ, ಕಳೆದ ಬೇಸಿಗೆಯಲ್ಲಿ ಸೋಂಕಿನ ಸಂಖ್ಯೆಗಳು ಕಡಿಮೆಯಾಗಿದ್ದು, ಏಪ್ರಿಲ್‌ನಲ್ಲಿ ಸಾಂಗ್‌ಕ್ರಾನ್ ಹಬ್ಬದ ನಂತರ ಥೈಲ್ಯಾಂಡ್‌ನಲ್ಲಿ ಸೋಂಕು ಪ್ರಕರಣಗಳು ಏರಿಕೆಯಾಗಿವೆ.

ಶಿಲ್ಪಾ ಶಿರೋಧ್ಕರ್ ತಮ್ಮ ಮುಂದಿನ ಯೋಜನೆ 'ಜಟಾಧರ' ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಇದು ಸೋನಾಕ್ಷಿ ಸಿನ್ಹಾ ಅವರ ಚೊಚ್ಚಲ ತೆಲುಗು ಚಿತ್ರವಾಗಲಿದ್ದು, ಚಿತ್ರದಲ್ಲಿ ಸುಧೀರ್ ಬಾಬು, ರವಿ ಪ್ರಕಾಶ್, ದಿವ್ಯಾ ವಿಜ್ ಮತ್ತು ರೈನ್ ಅಂಜಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

'ಜಟಾಧರ' ಚಿತ್ರದ ಬಗ್ಗೆ ಮಾತನಾಡಿದ ಶಿಲ್ಪಾ, 'ಜಟಾಧರ ನನಗೆ ಒಂದು ಅವಾಸ್ತವಿಕ ಅನುಭವ. ನನ್ನ ಅನುಭವ ನಂಬಲಾಗದಷ್ಟು ಸಕಾರಾತ್ಮಕವಾಗಿದೆ ಮತ್ತು ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿ ತುಂಬಾ ಆತ್ಮೀಯರಾಗಿದ್ದಾರೆ. ಕ್ಯಾಮೆರಾ ಮುಂದೆ ನಿಂತು ಇಂತಹ ವಿಶಿಷ್ಟ ಪಾತ್ರವನ್ನು ನಿರ್ವಹಿಸುವುದು ನಿಜಕ್ಕೂ ಅದ್ಭುತವೆನಿಸುತ್ತದೆ' ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT