ಕತ್ರೀನಾ ಕೈಫ್ - ವಿಕ್ಕಿ ಕೌಶಲ್ 
ಬಾಲಿವುಡ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ಸ್ಟಾರ್ ಕಪಲ್ ಕತ್ರೀನಾ ಕೈಫ್, ವಿಕ್ಕಿ ಕೌಶಲ್?

ಕತ್ರಿನಾ ಈ ಸುದ್ದಿಯಿಂದ ದೂರ ಉಳಿದಿದ್ದಾರೆ. ಮಗು ಜನಿಸಿದ ನಂತರ ಅವರು ಸುದೀರ್ಘ ವಿರಾಮ ತೆಗೆದುಕೊಳ್ಳಲಿದ್ದಾರೆ. ತಾವೇ ಪ್ರಾಯೋಗಿಕ ತಾಯಿಯಾಗಲು ಬಯಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಬಾಲಿವುಡ್ ಸ್ಟಾರ್ ದಂಪತಿ ಕತ್ರಿನಾ ಕೈಫ್ ಮತ್ತು ವಿಕಿ ಕೌಶಲ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ದಂಪತಿ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲವಾದರೂ, ಮೂಲಗಳು NDTVಗೆ ಕತ್ರಿನಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಮತ್ತು ಅಕ್ಟೋಬರ್-ನವೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೃಢಪಡಿಸಿವೆ.

ಕತ್ರಿನಾ ಗರ್ಭಧಾರಣೆಯ ಬಗ್ಗೆ ತಿಂಗಳುಗಳಿಂದ ಊಹಾಪೋಹಗಳು ಹರಡಿವೆ. ಆದಾಗ್ಯೂ, ದಂಪತಿ ಮೌನವಾಗಿದ್ದಾರೆ.

ವದಂತಿಗಳ ನಂತರ, ಕತ್ರಿನಾ ಈ ಸುದ್ದಿಯಿಂದ ದೂರ ಉಳಿದಿದ್ದಾರೆ. ಮಗು ಜನಿಸಿದ ನಂತರ ಅವರು ಸುದೀರ್ಘ ವಿರಾಮ ತೆಗೆದುಕೊಳ್ಳಲಿದ್ದಾರೆ. ತಾವೇ ಪ್ರಾಯೋಗಿಕ ತಾಯಿಯಾಗಲು ಬಯಸುತ್ತಾರೆ ಎಂದು ಮೂಲಗಳು NDTVಗೆ ತಿಳಿಸಿವೆ.

ಬ್ಯಾಡ್ ನ್ಯೂಜ್‌ನ ಟ್ರೇಲರ್ ಬಿಡುಗಡೆ ಸಮಯದಲ್ಲಿ, ಕತ್ರಿನಾ ಕೈಫ್ ಸುತ್ತ ಎದ್ದಿರುವ ವದಂತಿಗಳ ಬಗ್ಗೆ ವಿಕ್ಕಿ ಕೌಶಲ್ ಅವರನ್ನು ಪ್ರಶ್ನಿಸಲಾಯಿತು.

'ಗರ್ಭಿಣಿಯಾಗಿರುವ ಬಗ್ಗೆ ಒಳ್ಳೆಯ ಸುದ್ದಿ ಬಂದರೆ, ನಾವು ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬಾ ಸಂತೋಷಪಡುತ್ತೇವೆ. ಆದರೆ, ಸದ್ಯಕ್ಕೆ ಹರಡಿರುವ ಊಹಾಪೋಹಗಳಲ್ಲಿ ಯಾವುದೇ ಸತ್ಯವಿಲ್ಲ. ಅಲ್ಲಿಯವರೆಗೆ ಬ್ಯಾಡ್ ನ್ಯೂಜ್ ಚಿತ್ರವನ್ನು ಆನಂದಿಸಿ ಮತ್ತು ಒಳ್ಳೆಯ ಸುದ್ದಿ ಬಂದಾಗ, ಅದನ್ನು ನಾವು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇವೆ' ಎಂದು ವಿಕ್ಕಿ ಹೇಳಿದ್ದರು.

ಕತ್ರಿನಾ ಕೈಫ್ ಮತ್ತು ವಿಕಿ ಕೌಶಲ್ 2021 ರಲ್ಲಿ ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಬರ್ವಾರಾ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ವಿವಾಹವಾದರು. ಕತ್ರಿನಾ-ವಿಕ್ಕಿ ಅವರ ವಿವಾಹದಲ್ಲಿ ಅವರ ಆಪ್ತರು ಹಾಜರಿದ್ದರು.

ವಿಕ್ಕಿ ಕೌಶಲ್ ಕೊನೆಯ ಬಾರಿಗೆ 'ಛಾವಾ' ಚಿತ್ರದಲ್ಲಿ ಕಾಣಿಸಿಕೊಂಡರು. ಕತ್ರಿನಾ ಕೈಫ್ ಕೊನೆಯ ಬಾರಿಗೆ ವಿಜಯ್ ಸೇತುಪತಿ ಜೊತೆ 'ಮೆರ್ರಿ ಕ್ರಿಸ್‌ಮಸ್' ಚಿತ್ರದಲ್ಲಿ ಕಾಣಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನಾರಚನೆ: ಆತುರದ ನಿರ್ಧಾರ ಕೈಗೊಳ್ಳದೆ, ಕಾದು ನೋಡುವ ತಂತ್ರ ಅಳವಡಿಸಿಕೊಂಡ 'ಕೈ' ಕಮಾಂಡ್

ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಆಡಳಿತ ವಿರೋಧಿ ಅಲೆ ಸಹಾಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ನ.18ರಿಂದ Bengaluru Tech Summit 2025: ‘ಡೀಪ್‌ಟೆಕ್ ದಶಕ’ಕ್ಕೆ 600 ಕೋಟಿ ರೂ. ಹೂಡಿಕೆ; ಸಚಿವ ಪ್ರಿಯಾಂಕ್ ಖರ್ಗೆ

ನಗರದ ಘನತೆ, ಸಂಸ್ಕೃತಿಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ರಚನೆ: ನನಗೂ ಅರಸುಗೂ ಹೋಲಿಕೆ ಬೇಡ; ಸಿಎಂ ಗರಂ!

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

SCROLL FOR NEXT