ತನುಶ್ರಿ ದತ್ತಾ 
ಬಾಲಿವುಡ್

Tanushree Dutta: ''ಕೇವಲ ಒಂದು ಶೋಗಾಗಿ ಬೆಡ್ ಮೇಲೆ ಪುರುಷನೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ''; 1.65 ಕೋಟಿ ರೂ BiggBoss ಆಫರ್ ತಿರಸ್ಕರಿಸಿದ್ದೇನೆ!

ಈ ಬಾರಿ ಬಿಗ್‌ಬಾಸ್‌ಗಾಗಿ ರೂ. 1.65 ಕೋಟಿ ಆಫರ್ ಅನ್ನು ತಿರಸ್ಕರಿಸಿರುವುದಾಗಿ ಬಹಿರಂಗಪಡಿಸಿದ್ದಾರೆ.

ನವದೆಹಲಿ: ಎರಡು ತಿಂಗಳ ಹಿಂದೆ ಅಳುವ ವಿಡಿಯೋ ಮೂಲಕ ಸುದ್ದಿಯಾಗಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ, ಕಳೆದ 11 ವರ್ಷಗಳಿಂದಲೂ ನನಗೆ ಬಿಗ್ ಬಾಸ್ ಆಫರ್ ಬಂದಿದೆ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಈ ಬಾರಿ ಬಿಗ್‌ಬಾಸ್‌ಗಾಗಿ ರೂ. 1.65 ಕೋಟಿ ಆಫರ್ ಅನ್ನು ತಿರಸ್ಕರಿಸಿರುವುದಾಗಿ ಬಹಿರಂಗಪಡಿಸಿದ್ದಾರೆ. ಈ ನಿರಾಕರಣೆಗೆ ಕಾರಣ ತಿಳಿಸಿರುವ ತನುಶ್ರೀ, ಕೇವಲ ಒಂದು ರಿಯಾಲಿಟಿ ಶೋಗಾಗಿ ಒಂದೇ ಹಾಸಿಗೆ ಮೇಲೆ ವ್ಯಕ್ತಿಯೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ ಎಂದಿದ್ದಾರೆ.

ಏನಾಗುತ್ತಿದೆ?

ಬಾಲಿವುಡ್ ಥಿಕನಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತನುಶ್ರೀ ದತ್ತಾ, "ನಾನು ಅಂತಹ ರಿಯಾಲಿಟಿ ಶೋಗೆ ಹೋಗುತ್ತೇನೆ ಎಂದು ನೀವು ಭಾವಿಸುತ್ತೀರಾ? ನಾನು ಅಂತಹ ಸ್ಥಳದಲ್ಲಿ ಉಳಿಯಲು ಸಾಧ್ಯವಿಲ್ಲ, ನಾನು ನನ್ನ ಸ್ವಂತ ಕುಟುಂಬದೊಂದಿಗೂ ಇಲ್ಲ ಎಂದರು.

ನನಗೆ ಬಿಗ್ ಬಾಸ್ ಬಗ್ಗೆ ಆಸಕ್ತಿ ಇಲ್ಲ. ಎಂದಿಗೂ ಇರಲ್ಲ. ಅವರು ನನಗೆ ಶೋನಲ್ಲಿ ಭಾಗವಹಿಸಲು ₹ 1.65 ಕೋಟಿ ಆಫರ್ ಮಾಡಿದ್ದಾರೆ. ನನ್ನ ಮಟ್ಟದ ಮತ್ತೋರ್ವ ಬಾಲಿವುಡ್ ಸೆಲೆಬ್ರಿಟಿಗೆ ಅಷ್ಟೇ ಹಣ ನೀಡಿದ್ದಾರೆ. ಬಿಗ್ ಬಾಸ್ ಸ್ಟೈಲಿಸ್ಟ್ ಕೂಡ ನನಗೆ ಕರೆ ಮಾಡಿ, ಕೇಳಿಕೊಂಡರು. ನನ್ನ ಡಯಟ್ ಬಗ್ಗೆ ಆರೈಕೆ ಮಾಡುತ್ತೇವೆ ಎಂದು ಹೇಳಿದ್ದರು. ಅವರು ನನಗೆ ನೆಮ್ಮದಿಂದ ಕೆಲಸ ಮಾಡಲು ಅವಕಾಶ ನೀಡಿದರೆ ನಾನು ಅದಕ್ಕಿಂತ ಹೆಚ್ಚಿನದನ್ನು ಗಳಿಸಬಹುದು ಎಂದು ನನಗೆ ತಿಳಿದಿದೆ ಎಂದರು.

ಪ್ರಸ್ತುತ ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್‌ನ 19 ನೇ ಸೀಸನ್‌ನೊಂದಿಗೆ ಸಲ್ಮಾನ್ ಖಾನ್ ಮರಳಿದ್ದಾರೆ. ಸ್ಟ್ರೀಮಿಂಗ್ ಆದ ಒಂದೂವರೆ ಗಂಟೆಗಳ ನಂತರ ಕಲರ್ಸ್‌ನಲ್ಲಿ ಈ ಶೋ ಪ್ರಸಾರವಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ