ಯಶ್‌ - ಅನುಪಮ್ ಖೇರ್ 
ಬಾಲಿವುಡ್

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಯಶ್ ಭೇಟಿ ಬಳಿಕ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅನುಪಮ್ ಖೇರ್ ಅವರು, ರಾಕಿಂಗ್ ಸ್ಟಾರ್ ಯಶ್ ಅವರ ಸಿನಿ ಪಯಣವನ್ನು ಹಾಡಿ ಹೊಗಳಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್'(Toxic: A Fairy Tale for Grown-Ups) ಚಿತ್ರ ಬಿಡುಗಡೆ ಸಿದ್ಧವಾಗಿದ್ದು, ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಅವರು ಯಶ್ ಅವರನ್ನು ಭೇಟಿಯಾಗಿ ʻಟಾಕ್ಸಿಕ್‌ʼ ಸಿನಿಮಾಗೆ ಶುಭ ಹಾರೈಸಿದ್ದಾರೆ.

ಯಶ್ ಭೇಟಿ ಬಳಿಕ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅನುಪಮ್ ಖೇರ್ ಅವರು, ರಾಕಿಂಗ್ ಸ್ಟಾರ್ ಯಶ್ ಅವರ ಸಿನಿ ಪಯಣವನ್ನು ಹಾಡಿ ಹೊಗಳಿದ್ದಾರೆ.

ಯಶ್ ಭೇಟಿಯಾಗಿದ್ದು ನನಗೆ ತುಂಬಿ ಖುಷಿ ಕೊಟ್ಟಿತು. ಅವರು ‘ಕೆಜಿಎಫ್’ ಸರಣಿಯ ಮೂಲಕ ರಾಕಿ ಭಾಯ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರ ಈ ಸಿನಿ ಪ್ರಯಾಣ ನನಗೆ ತುಂಬಾ ಇಷ್ಟವಾಗಿದೆ. ನಾವು ವಿಭಿನ್ನ ತಲೆಮಾರುಗಳಿಗೆ ಸೇರಿದವರಾಗಿರಬಹುದು, ಆದರೆ ನಮ್ಮ ಕನಸುಗಳು ಒಂದೇ ಭಾಷೆಯನ್ನು ಮಾತನಾಡುತ್ತವೆ ಎಂದು ಬಾಲಿವುಡ್ ನಟ ಹೇಳಿದ್ದಾರೆ.

ತೆರೆಮೇಲೆ ಸಕತ್‌ ಪವರ್‌ಫುಲ್ ಆಗಿ ಅಬ್ಬರಿಸುವ ಯಶ್ ನಿಜ ಜೀವನದಲ್ಲಿ ಅತ್ಯಂತ ವಿನಮ್ರ ವ್ಯಕ್ತಿಯಾಗಿದ್ದಾರೆ. ಅಲ್ಲದೇ ಇಂತಹ ಪ್ರತಿಭಾವಂತ ನಟರ ಉತ್ಸಾಹ ಮತ್ತು ಶ್ರಮ ತಮಗೂ ಹೊಸ ಶಕ್ತಿ ನೀಡುತ್ತದೆ ಎಂದು ಎಂದು ಹಾಡಿಹೊಗಳಿದ್ದಾರೆ.

ನಾವು ಇಬ್ಬರೂ ನಾವು ಒಂದು ಸ್ಟುಡಿಯೋದಲ್ಲಿ ಭೇಟಿಯಾಗಿ, ನಮ್ಮ ಸಿನಿಮಾ, ಜೀವನ, ಹೆತ್ತವರು, ಕುಟುಂಬ ಹಾಗೂ ಭವಿಷ್ಯದ ಕನಸುಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದೆವು. ಬಳಿಕ ಟಾಕ್ಸಿಕ್ ತನ್ನದೇ ಆದ ಛಾಪು ಮೂಡಿಸಲಿ, ಚಿತ್ರ ಯಶಸ್ಸನ್ನು ಪಡೆಯಲಿ ಎಂದು ಶುಭ ಹಾರೈಸಿರುವುದಾಗಿ ಅನುಪಮ್ ಖೇರ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್!

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್