ನಟ ರಾಜಪಾಲ್ ಯಾದವ್ ಶರಣಾಗತಿ 
ಬಾಲಿವುಡ್

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ತಿಹಾರ್ ಜೈಲಿಗೆ ಶರಣು!

ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಕಾರಣ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ಮುಂಬೈ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಕಾರಣ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ. ಮುರಳಿ ಪ್ರಾಜೆಕ್ಟ್ಸ್ ಸಲ್ಲಿಸಿದ್ದ ದೂರಿನ ಪ್ರಕಾರ ನಟ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು.

ಪ್ರಕರಣದ ಇತಿಹಾಸವನ್ನು ಪರಿಗಣಿಸಿ, ನ್ಯಾಯಾಲಯವು ಮತ್ತಷ್ಟು ಅವಕಾಶ ನೀಡಲು ನಿರಾಕರಿಸಿದೆ. ಯಾವುದೇ ವ್ಯಕ್ತಿಯು ಹಿನ್ನೆಲೆಯ ಕಾರಣಕ್ಕೆ ವಿಶೇಷ ಪರಿಗಣನೆ ನಿರೀಕ್ಷಿಸಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ರಾಜ್ ಪಾಲ್ ಯಾದವ್ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದು, ಗುರುವಾರ (ಜನವರಿ 5) ನಾಲ್ಕು ಗಂಟೆಗೆ ಅವರು ಜೈಲಿಗೆ ಆಗಮಿಸಿದರು. ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ ಕೇಸ್ ದಾಖಲಿಸಿತ್ತು. ನಟ ಹಾಗೂ ಅವನ ಪತ್ನಿ ಕೊಟ್ಟ ಚೆಕ್ ಬೌನ್ಸ್ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2018ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್​ ಪಾಲ್ ಯಾದವ್ ಹಾಗೂ ಆತನ ಪತ್ನಿ ಅಪರಾಧಿ ಎಂದು ಘೋಷಣೆ ಮಾಡಿತ್ತು. 2019ರಲ್ಲಿ ಸೆಷನ್ ಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿಯಿತು.

2019ರಲ್ಲಿ ಈ ಪ್ರಕರಣವನ್ನು ದೆಹಲಿ ಕೋರ್ಟ್​​ ಅಲ್ಲಿ ರಾಜ್​​ಪಾಲ್ ಯಾದವ್ ಪ್ರಶ್ನೆ ಮಾಡಿದರು. ಸೆಟಲ್​​ಮೆಂಟ್​ಗೆ ದಾರಿ ಹುಡುಕುತ್ತಿದ್ದೇವೆ ಎಂದು ಹೇಳಿದ ಕಾರಣದಿಂದ 2024ರಲ್ಲಿ ಹೈಕೋರ್ಟ್ ನಟನಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಆದರೆ, ಈವರೆಗೆ ನಟ ಹಣವನ್ನು ಹಿಂದಿರುಗಿಸಿಲ್ಲ.

ಹೀಗಾಗಿ, ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ. ಹೆಚ್ಚುವರಿಯಾಗಿ ಕೆಲ ವಾರ ಅವಕಾಶ ಕೊಟ್ಟರೆ ಹಣ ಹೊಂದಿಸಲು ಪ್ರಯತ್ನಿಸೋದಾಗಿ ರಾಜ್​​ಪಾಲ್ ಪರ ವಕೀಲರು ಹೇಳಿದ್ದರು. ಆದರೆ, ಇದಕ್ಕೆ ಹೈಕೋರ್ಟ್ ನಿರಾಕರಿಸಿತ್ತು. ಬುಧವಾರ ನಾಲ್ಕು ಗಂಟೆ ಒಳಗೆ ಸರೆಂಡರ್ ಆಗಲು ಕೋರ್ಟ್ ಸೂಚನೆ ನೀಡಿತ್ತು.

ಅಂತೆಯೇ ‘ಯಾವುದೇ ವ್ಯಕ್ತಿ ನಿರ್ದಿಷ್ಟ ಹಿನ್ನೆಲೆ ಅಥವಾ ಉದ್ಯಮಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ಈ ನ್ಯಾಯಾಲಯವು ಅವರಿಗೆ ವಿಶೇಷ ಅವಕಾಶ ನೀಡುತ್ತದೆ ಎಂದು ನಿರೀಕ್ಷಿಸಬೇಡಿ. ನಿರಂತರವಾಗಿ ಅದೇ ತಪ್ಪು ಆಗುತ್ತಿದ್ದರೆ ಅದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಹೇಳಿತ್ತು. ದೂರುದಾರ ಕಂಪನಿಗೆ ಇತ್ಯರ್ಥ ಮೊತ್ತವನ್ನು ಪಾವತಿಸುವ ಕುರಿತು ಯಾದವ್ ನೀಡಿದ ಒಪ್ಪಂದಗಳನ್ನು ಪದೇ ಪದೇ ಉಲ್ಲಂಘಿಸಿದ ನಂತರ ನಿರ್ದೇಶನವು ಬಂದಿದೆ ಎಂದು ನ್ಯಾಯಾಲಯ ಗಮನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!