ರಂಜನಾ ನಾರಾಯಣ್ ಝಾ-ಉದಿತ್ ನಾರಾಯಣ್ 
ಬಾಲಿವುಡ್

ನನ್ನ ಅನುಮತಿ ಪಡೆಯದೇ ಗರ್ಭಕೋಶ ತೆಗೆಸಿದ್ದಾರೆ: ಗಾಯಕ ಉದಿತ್ ನಾರಾಯಣ್ ವಿರುದ್ಧ ಮೊದಲ ಪತ್ನಿ ದೂರು!

ಬಾಲಿವುಡ್ ನ ಖ್ಯಾತ ಗಾಯಕ ಉದಿತ್ ನಾರಾಯಣ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿವೆ.

ಬಾಲಿವುಡ್ ನ ಖ್ಯಾತ ಗಾಯಕ ಉದಿತ್ ನಾರಾಯಣ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿವೆ. ಉದಿತ್ ನಾರಾಯಣ್ ಅವರ ಮೊದಲ ಪತ್ನಿ ರಂಜನಾ ನಾರಾಯಣ್ ಝಾ ಅವರು ಸುಪೌಲ್‌ನಲ್ಲಿರುವ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ.

ಚಿಕಿತ್ಸೆಯ ನೆಪದಲ್ಲಿ ತಮ್ಮ ಗರ್ಭಕೋಶವನ್ನು ವಂಚನೆಯಿಂದ ತೆಗೆದಿದ್ದಾರೆ ಎಂದು ಉದಿತ್ ನಾರಾಯಣ್ ಅವರ ಪತ್ನಿ ರಂಜನಾ ನಾರಾಯಣ್ ಆರೋಪಿಸಿದ್ದಾರೆ. ಗರ್ಭಕೋಶ ತೆಗೆಸುವ ವಿಚಾರ ನನಗೆ ತಿಳಿದಿರಲಿಲ್ಲ. ಚಿಕಿತ್ಸೆಯ ನೆಪದಲ್ಲಿ ತಮ್ಮ ವಿರುದ್ಧ ಪಿತೂರಿ ನಡೆಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಉದಿತ್ ನಾರಾಯಣ್ ಮತ್ತು ರಂಜನಾ 1984ರ ಡಿಸೆಂಬರ್ 7ರಂದು ವಿವಾಹವಾಗಿದ್ದರು. ಆದರೆ ರಂಜನಾ ಈಗ ಉದಿತ್ ನಾರಾಯಣ್ ವಿರುದ್ಧ ಕಿರುಕುಳ ಮತ್ತು ಭರವಸೆ ಉಲ್ಲಂಘನೆ ಸೇರಿದಂತೆ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಅವರು ಪ್ರಸ್ತುತ ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು ನ್ಯಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ. ಮದುವೆಯಾದ ಸ್ವಲ್ಪ ಸಮಯದ ನಂತರ ಉದಿತ್ ಮುಂಬೈಗೆ ವೃತ್ತಿಜೀವನ ಮುಂದುವರಿಸಲು ತೆರಳಿದರು. ಇದು ಅವರ ಮತ್ತು ರಂಜನಾ ನಡುವಿನ ಅಂತರವನ್ನು ಹೆಚ್ಚಿಸಲು ಕಾರಣವಾಯಿತು ಎಂದು ಅವರು ಹೇಳಿದ್ದಾರೆ.

ನಂತರ ಉದಿತ್ ನಾರಾಯಣ್ ಮುಂಬೈನಲ್ಲಿ ಮರುಮದುವೆಯಾದರು. ಮಾಧ್ಯಮಗಳ ಮೂಲಕ ಈ ಬಗ್ಗೆ ತಿಳಿದುಕೊಂಡೆ, ಈ ಬಗ್ಗೆ ಪತಿಯನ್ನು ಪ್ರಶ್ನಿಸಿದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ರಂಜನಾ ತಮ್ಮ ದೂರಿನಲ್ಲಿ ಉದಿತ್ ವಿರುದ್ಧ ಅತ್ಯಂತ ಗಂಭೀರ ಆರೋಪ ಮಾಡಿದ್ದಾರೆ. 1996ರಲ್ಲಿ ತಮ್ಮನ್ನು ತೀವ್ರವಾಗಿ ವಂಚಿಸಲಾಯಿತು ಎಂದು ರಂಜನಾ ಹೇಳಿದ್ದಾರೆ. ಚಿಕಿತ್ಸೆಯ ನೆಪದಲ್ಲಿ ದೆಹಲಿಯ ಪ್ರಮುಖ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ತಮ್ಮ ಅನುಮತಿಯಿಲ್ಲದೆ ಗರ್ಭಕೋಶವನ್ನು ತೆಗೆದುಹಾಕಲಾಯಿದೆ. ಮತ್ತೊಂದು ಕಾಯಿಲೆಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಹೋದಾಗ ಈ ಬಗ್ಗೆ ತಿಳಿದುಕೊಂಡೆ ಎಂದು ರಂಜನಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು‌ ಅರ್ಜಿ ವಜಾ

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಕೆಕೆ ಮಿಶ್ರಾ ಪುತ್ರನ ಬಂಧನ

'ಆ ದಿನದ ಒಪ್ಪಂದ ಮರೆತು ಬಿಟ್ರಾ'? ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು ಅಲ್ವಾ? ಆಗುತ್ತೋ ಇಲ್ವೋ ಕ್ಲಿಯರ್​ ಮಾಡಿ; ಡಿಕೆ ಬ್ರದರ್ಸ್ ದುಂಬಾಲು!

ಜಾರ್ಖಂಡ್: ಶಾಲೆಯಲ್ಲಿ ಸರಸ್ವತಿ ಪೂಜೆಗೆ ಹಣ ನೀಡದ ವಿದ್ಯಾರ್ಥಿಗಳಿಗೆ 100 ಸಿಟ್ ಅಪ್ಸ್ ಶಿಕ್ಷೆ, ಊಟ ನಿರಾಕರಣೆ!

ಬಾಂಗ್ಲಾದೇಶ ಐತಿಹಾಸಿಕ ಸಂಸತ್ ಚುನಾವಣೆ: ಮತದಾನ ಪ್ರಗತಿಯಲ್ಲಿ, 50 ಲಕ್ಷ ಯುವ ಮತದಾರರು-Video

SCROLL FOR NEXT