ಮುಂಬೈ: ನಿರ್ಮಾಪಕ-ನಿರ್ದೇಶಕ ರೋಹಿತ್ ಶೆಟ್ಟಿ ಅವರ ನಿವಾಸದ ಗುಂಡಿನ ದಾಳಿ ನಡೆದ ಘಟನೆಯ ಬೆನ್ನಲ್ಲೇ ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಕರೆಯೊಂದು ಬಂದಿದೆ.
ರಣವೀರ್ ಸಿಂಗ್ ಅವರಿಗೆ ವಾಟ್ಸಪ್ನಲ್ಲಿ ವಾಯ್ಸ್ ಮೆಸೇಜ್ ಕಳಿಹಿಸಿರುವ ದುಷ್ಕರ್ಮಿಗಳು, ಬೆದರಿಕೆ ಹಾಕಿ ಕೋಟ್ಯಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೆದರಿಕೆ ಬಂದ ನಂತರ ರಣವೀರ್ ಅವರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆದರಿಕೆ ಸಂದೇಶ ಕಳುಹಿಸಿರುವ ವ್ಯಕ್ತಿ ತಮ್ಮನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಎಂದು ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.
ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದು, ವಾಯ್ಸ್ ಮೆಸೇಜ್ನಲ್ಲಿರೋ ಧ್ವನಿ ಯಾರದ್ದೂ ಎಂದು ಪತ್ತೆಹಚ್ಚಲು ಮುಂದಾಗಿದ್ದಾರೆ.
ಬೆದರಿಕೆ ಬಂದ ನಂತರ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (Deepika Padukone) ದಂಪತಿ ವಾಸಿಸುವ ಹೌಸಿಂಗ್ ಸೊಸೈಟಿಯ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇದಲ್ಲದೆ, ಮನೆಯಸುತ್ತಮುತ್ತ ಖಾಸಗಿ ಭದ್ರತಾ ಸಿಬ್ಬಂದಿಯನ್ನೂ ದಂಪತಿಗಳು ನಿಯೋಜಿಸಿದ್ದು, ಶಸ್ತ್ರಾಸ್ತ್ರ ಹಿಡಿದ ಭದ್ರತಾ ಸಿಬ್ಬಂದಿ ಓಡಾಟ ಆರಂಭಿಸಿದ್ದಾರೆ. ಇದರಿಂದಾಗಿ ನೆರೆಹೊರೆಯವರಿಗೆ ಆತಂಕ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.