ಜಾರ್ಜಿಯಾ ಆಂಡ್ರಿಯಾನಿ 
ಬಾಲಿವುಡ್

'Get Out Of Here': ತನ್ನ ಹುಟ್ಟುಹಬ್ಬದ ಆಚರಣೆ ವೇಳೆ ಅರ್ಬಾಜ್ ಖಾನ್ ಮಾಜಿ ಗೆಳತಿ ಜಾರ್ಜಿಯಾ ಆಕ್ರೋಶ? Video

ಬಾಲಿವುಡ್ ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್ ಖಾನ್ ಅವರ ಮಾಜಿ ಗೆಳತಿ ಜಾರ್ಜಿಯಾ ಆಂಡ್ರಿಯಾನಿ ನಿನ್ನೆ ರಾತ್ರಿ ಮುಂಬೈನಲ್ಲಿ ಆಪ್ತ ಸ್ನೇಹಿತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಬಾಲಿವುಡ್ ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್ ಖಾನ್ ಅವರ ಮಾಜಿ ಗೆಳತಿ ಜಾರ್ಜಿಯಾ ಆಂಡ್ರಿಯಾನಿ ನಿನ್ನೆ ರಾತ್ರಿ ಮುಂಬೈನಲ್ಲಿ ಆಪ್ತ ಸ್ನೇಹಿತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಮುಂಬೈ ರೆಸ್ಟೋರೆಂಟ್‌ನಲ್ಲಿ ನಡೆದ ಪಾರ್ಟಿ, ಪಾರ್ಟಿಯ ವೀಡಿಯೊಗಳು ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾಗಿದೆ. ಪಾರ್ಟಿಯ ವೀಡಿಯೊ ತುಣುಕುಗಳು ವೇಗವಾಗಿ ವೈರಲ್ ಆಗುತ್ತಿವೆ. ಒಂದು ಕ್ಲಿಪ್‌ನಲ್ಲಿ, ಜಾರ್ಜಿಯಾ ತನ್ನ ಹುಟ್ಟುಹಬ್ಬದ ಕೇಕ್ ಕತ್ತರಿಸಿ, ಪಾಪರಾಜಿಗಳಿಗೆ ಪೋಸ್ ನೀಡುತ್ತಾ, ಅಲ್ಲಿರುವ ಪಾಪ್‌ಗಳೊಂದಿಗೆ ಮಾತನಾಡುತ್ತಿರುವುದು ಕಂಡುಬರುತ್ತದೆ.

ಇದೇ ವೇಳೆ, ರೆಸ್ಟೋರೆಂಟ್ ಮ್ಯಾನೇಜರ್ ತಡವಾಗುತ್ತಿದೆ ಪಾರ್ಟಿಯನ್ನು ಬೇಗ ಮುಗಿಸುವಂತೆ ಒತ್ತಾಯಿಸಿದ್ದು ಆಚರಣೆಯ ವಾತಾವರಣ ಇದ್ದಕ್ಕಿದ್ದಂತೆ ಬದಲಾಯಿತು. ಈ ವೇಳೆ ಜಾರ್ಜಿಯಾ ತಾಳ್ಮೆ ಕಳೆದುಕೊಂಡಳು. ನೀನು ಯಾರು ಎಂದು ಆತನನ್ನು ಜಾರ್ಜಿಯಾ ಪ್ರಶ್ನಿಸಿದರು. ನೀನು ನಿಜವಾದ ಮ್ಯಾನೇಜರ್ ಅಲ್ಲ ಎಂದು ಹೇಳುತ್ತಿರುವುದು ಕೇಳಿಬಂದಿದೆ. ಇಲ್ಲಿಂದ ಹೊರಟು ಹೋಗು. ನಾನು ನನ್ನ ಆಪ್ತರೊಂದಿಗೆ ಸಂಭ್ರಮಿಸುತ್ತಿದ್ದೇನೆ ಎಂದು ಆಕೆ ಹೇಳುತ್ತಿರುವುದು ಸಹ ಕೇಳಿಬಂದಿದೆ. ವೈರಲ್ ಆಗಿರುವ ಘಟನೆಯ ಬಗ್ಗೆ ಜಾರ್ಜಿಯಾ ಆಂಡ್ರಿಯಾನಿ ಅಥವಾ ರೆಸ್ಟೋರೆಂಟ್ ಮಂಡಳಿ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಗಳು ಸೂಚಿಸುತ್ತವೆ.

ಮಾಹಿತಿಗಾಗಿ, ಜಾರ್ಜಿಯಾ ಆಂಡ್ರಿಯಾನಿ ಮತ್ತು ಅರ್ಬಾಜ್ ಖಾನ್ ನಾಲ್ಕು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. 2023ರಲ್ಲಿ ಅವರು ದೂರವಾಗಿದ್ದರು. ನಂತರ ಅದೇ ವರ್ಷ ಅರ್ಬಾಜ್ ಖಾನ್ ಮುಂಬೈನಲ್ಲಿರುವ ಅವರ ಸಹೋದರಿ ಅರ್ಪಿತಾ ಖಾನ್ ಶರ್ಮಾ ಅವರ ಮನೆಯಲ್ಲಿ ಶುರಾ ಖಾನ್ ಅವರನ್ನು ವಿವಾಹವಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

India vs Afghanistan: KL Rahul, ನಾಯಕ ಶುಭ್ ಮನ್ ಗಿಲ್ ಭರ್ಜರಿ ಶತಕ; ಬೃಹತ್ ಮೊತ್ತದತ್ತ ಭಾರತ, ದಿನದಾಟ ಅಂತ್ಯಕ್ಕೆ 368/3

ಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಕೇಸ್: BJP ಶಾಸಕ ಶರಣು ಸಲಗರ್‌ಗೆ ಬಂಧನ ಭೀತಿ!

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ

SCROLL FOR NEXT