ಜಾರ್ಜಿಯಾ ಆಂಡ್ರಿಯಾನಿ 
ಬಾಲಿವುಡ್

'Get Out Of Here': ತನ್ನ ಹುಟ್ಟುಹಬ್ಬದ ಆಚರಣೆ ವೇಳೆ ಅರ್ಬಾಜ್ ಖಾನ್ ಮಾಜಿ ಗೆಳತಿ ಜಾರ್ಜಿಯಾ ಆಕ್ರೋಶ? Video

ಬಾಲಿವುಡ್ ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್ ಖಾನ್ ಅವರ ಮಾಜಿ ಗೆಳತಿ ಜಾರ್ಜಿಯಾ ಆಂಡ್ರಿಯಾನಿ ನಿನ್ನೆ ರಾತ್ರಿ ಮುಂಬೈನಲ್ಲಿ ಆಪ್ತ ಸ್ನೇಹಿತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಬಾಲಿವುಡ್ ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್ ಖಾನ್ ಅವರ ಮಾಜಿ ಗೆಳತಿ ಜಾರ್ಜಿಯಾ ಆಂಡ್ರಿಯಾನಿ ನಿನ್ನೆ ರಾತ್ರಿ ಮುಂಬೈನಲ್ಲಿ ಆಪ್ತ ಸ್ನೇಹಿತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಮುಂಬೈ ರೆಸ್ಟೋರೆಂಟ್‌ನಲ್ಲಿ ನಡೆದ ಪಾರ್ಟಿ, ಪಾರ್ಟಿಯ ವೀಡಿಯೊಗಳು ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾಗಿದೆ. ಪಾರ್ಟಿಯ ವೀಡಿಯೊ ತುಣುಕುಗಳು ವೇಗವಾಗಿ ವೈರಲ್ ಆಗುತ್ತಿವೆ. ಒಂದು ಕ್ಲಿಪ್‌ನಲ್ಲಿ, ಜಾರ್ಜಿಯಾ ತನ್ನ ಹುಟ್ಟುಹಬ್ಬದ ಕೇಕ್ ಕತ್ತರಿಸಿ, ಪಾಪರಾಜಿಗಳಿಗೆ ಪೋಸ್ ನೀಡುತ್ತಾ, ಅಲ್ಲಿರುವ ಪಾಪ್‌ಗಳೊಂದಿಗೆ ಮಾತನಾಡುತ್ತಿರುವುದು ಕಂಡುಬರುತ್ತದೆ.

ಇದೇ ವೇಳೆ, ರೆಸ್ಟೋರೆಂಟ್ ಮ್ಯಾನೇಜರ್ ತಡವಾಗುತ್ತಿದೆ ಪಾರ್ಟಿಯನ್ನು ಬೇಗ ಮುಗಿಸುವಂತೆ ಒತ್ತಾಯಿಸಿದ್ದು ಆಚರಣೆಯ ವಾತಾವರಣ ಇದ್ದಕ್ಕಿದ್ದಂತೆ ಬದಲಾಯಿತು. ಈ ವೇಳೆ ಜಾರ್ಜಿಯಾ ತಾಳ್ಮೆ ಕಳೆದುಕೊಂಡಳು. ನೀನು ಯಾರು ಎಂದು ಆತನನ್ನು ಜಾರ್ಜಿಯಾ ಪ್ರಶ್ನಿಸಿದರು. ನೀನು ನಿಜವಾದ ಮ್ಯಾನೇಜರ್ ಅಲ್ಲ ಎಂದು ಹೇಳುತ್ತಿರುವುದು ಕೇಳಿಬಂದಿದೆ. ಇಲ್ಲಿಂದ ಹೊರಟು ಹೋಗು. ನಾನು ನನ್ನ ಆಪ್ತರೊಂದಿಗೆ ಸಂಭ್ರಮಿಸುತ್ತಿದ್ದೇನೆ ಎಂದು ಆಕೆ ಹೇಳುತ್ತಿರುವುದು ಸಹ ಕೇಳಿಬಂದಿದೆ. ವೈರಲ್ ಆಗಿರುವ ಘಟನೆಯ ಬಗ್ಗೆ ಜಾರ್ಜಿಯಾ ಆಂಡ್ರಿಯಾನಿ ಅಥವಾ ರೆಸ್ಟೋರೆಂಟ್ ಮಂಡಳಿ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಗಳು ಸೂಚಿಸುತ್ತವೆ.

ಮಾಹಿತಿಗಾಗಿ, ಜಾರ್ಜಿಯಾ ಆಂಡ್ರಿಯಾನಿ ಮತ್ತು ಅರ್ಬಾಜ್ ಖಾನ್ ನಾಲ್ಕು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. 2023ರಲ್ಲಿ ಅವರು ದೂರವಾಗಿದ್ದರು. ನಂತರ ಅದೇ ವರ್ಷ ಅರ್ಬಾಜ್ ಖಾನ್ ಮುಂಬೈನಲ್ಲಿರುವ ಅವರ ಸಹೋದರಿ ಅರ್ಪಿತಾ ಖಾನ್ ಶರ್ಮಾ ಅವರ ಮನೆಯಲ್ಲಿ ಶುರಾ ಖಾನ್ ಅವರನ್ನು ವಿವಾಹವಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ