ನರ್ಗಿಸ್ ಫಕ್ರಿ 
ಬಾಲಿವುಡ್

'ಆತಂಕ, ಭಯದಿಂದಾಗಿ ನಿದ್ದೆಯೇ ಬರುತ್ತಿಲ್ಲ': ದುಬೈ ಹೋಟೆಲ್‌ನಲ್ಲಿ ಸಿಲುಕಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಪೋಸ್ಟ್!

ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಅಲ್ಲಿನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಇದರ ಬೆನ್ನಲ್ಲೇ ದುಬೈನಿಂದ ವಿಮಾನ ಸೇವೆಗಳನ್ನು ಬಂದ್ ಮಾಡಲಾಗಿದೆ.

ಮುಂಬೈ: ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಬಾಲಿವುಡ್ ನಟಿ ನರ್ಗಿಸ್ ಫಕ್ರಿ ದುಬೈನಲ್ಲಿ ಸಿಲುಕಿಕೊಂಡಿದ್ದು, ಈ ಬಗ್ಗೆ ಆತಂಕ ಮತ್ತು ನಿದ್ರಾಹೀನತೆಯಿಂದ ಬಳಲುತ್ತಿರುವ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ನರ್ಗಿಸ್ ತಮ್ಮ ಟೌನ್‌ಟೌನ್‌ ದುಬೈನಲ್ಲಿರುವ ಹೋಟೆಲ್‌ನ ಬಾಲ್ಕನಿಯಿಂದ ತೆಗೆದ ಫೋಟೊವನ್ನು ತಮ್ಮ ಇನ್‌ಸ್ಟಾಗ್ರಾಂ ಸ್ಟೋರೀಸ್‌ನಲ್ಲಿ ಹಂಚಿಕೊಂಡಿದ್ದು, 'ಮುಂದೆ ಏನಾಗಲಿದೆ' ಎಂಬುದು ತಿಳಿಯದಿರುವುದು ನನ್ನನ್ನು ತೀವ್ರ ದುಃಖಕ್ಕೆ ದೂಡಿದೆ ಎಂದು ಹೇಳಿದ್ದಾರೆ.

'ಏನೇ ಇರಲಿ, ಮುಂದೆ ಏನಾಗುತ್ತದೆ ಎಂದು ನಿಮಗೆ ತಿಳಿದಿಲ್ಲದ ಕಾರಣ ಈ ಆತಂಕ ಮತ್ತು ಭಯದ ಭಾವನೆ ಮುಂದುವರಿಯುತ್ತ. ಇಷ್ಟು ತಡವಾಗಿದ್ದರೂ, ನಿದ್ರೆ ಕೂಡ ಬರುತ್ತಿಲ್ಲ, ನನ್ನ ಮೆದುಳು ತುಂಬಾ ಎಚ್ಚರವಾಗಿದೆ. ತುಂಬಾ ತಡವಾಗಿದೆ ಮತ್ತು ನಾನು ಪೂರ್ಣ ಎಚ್ಚರದಿಂದಿದ್ದೇನೆ' ಎಂದು ಅವರು ಬರೆದಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಅಲ್ಲಿನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದ್ದು, ವಿಮಾನ ನಿಲ್ದಾಣ ಸೇರಿದಂತೆ ಯುಎಇಯ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಶನಿವಾರ ದಾಳಿ ನಡೆಸಿದೆ. ಹೀಗಾಗಿ, ಸದ್ಯ ದುಬೈ ಏರ್‌ಪೋರ್ಟ್ ಅನ್ನು ಬಂದ್ ಮಾಡಲಾಗಿದೆ.

ಏರ್ ಇಂಡಿಯಾ ಮತ್ತು ಇಂಡಿಗೋ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿವೆ, ಬೆಳವಣಿಗೆಗಳನ್ನು ಮೇಲ್ವಿಚಾರಣೆ ಮಾಡುತ್ತಿವೆ ಮತ್ತು ಅಧಿಕೃತ ನವೀಕರಣಗಳನ್ನು ಪರಿಶೀಲಿಸಲು ಪ್ರಯಾಣಿಕರಿಗೆ ಸಲಹೆ ನೀಡುತ್ತಿವೆ. ಸುರಕ್ಷಿತ ಮಾರ್ಗಗಳು ಮತ್ತೆ ತೆರೆದ ನಂತರ ವಿಮಾನಗಳು ಪುನರಾರಂಭಗೊಳ್ಳುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್

‘ಇದು ಒಂಟೆ ಕನಸಿನಂತಿದೆ’..: ಟ್ರಂಪ್ ಶಾಂತಿ ಒಪ್ಪಂದ ಹೇಳಿಕೆಗೆ ಇರಾನ್ ವ್ಯಂಗ್ಯ

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

SCROLL FOR NEXT