ಸಿನಿಮಾ ಲೇಖನ

ನಿರ್ಮಾಣದತ್ತ ಪುನೀತ್ ಒಲವು!

ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್ ಅವರು ಇದೀಗ ಚಿತ್ರ ನಿರ್ಮಾಣದತ್ತ ಮುಖ ಮಾಡಿದ್ದಾರೆ ಎನ್ನುತ್ತಿದೆ ಮೂಲಗಳು!

ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್ ಅವರು ಇದೀಗ ಚಿತ್ರ ನಿರ್ಮಾಣದತ್ತ ಮುಖ ಮಾಡಿದ್ದಾರೆ ಎನ್ನುತ್ತಿದೆ ಮೂಲಗಳು!

ತಮ್ಮ ಕಂಠ ಸಿರಿಯ ಮೂಲಕ ಇತರ ನಾಯಕ ನಟರ ಚಿತ್ರಗಳಿಗೆ ಹಾಡಿದ್ದ ಪುನೀತ್, ಇದೀಗ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಅದು ಅವರು ಅಭಿನಯದ ಚಿತ್ರಗಳ ನಿರ್ಮಾಣದ ಬದಲು ಹೊಸ ಪ್ರತಿಭೆಗಳಿಗೆ ಉತ್ತಮ ಅವಕಾಶ ನೀಡಲು ಚಿಂತನೆ ನಡೆಸಿದ್ದಾರೆ. ಇದಕ್ಕಾಗಿ ಹೊಸದೊಂದು ನಿರ್ಮಾಣ ಸಂಸ್ಥೆಯನ್ನು ಪುನೀತ್ ಆರಂಭಿಸುತ್ತಿಲ್ಲ. ತಮ್ಮದೇ ಹೋಂ ಬ್ಯಾನರ್ ಆದ ವಜ್ರೇಶ್ವರಿ ಕಂಬೈನ್ಸ್‌ನ್ನೇ ಬಳಸಿಕೊಳ್ಳುತ್ತಿದ್ದಾರೆ.

ಇಲ್ಲಿಯವರೆಗೂ ವಜ್ರೇಶ್ವರಿ ಕಂಬೈನ್ಸ್‌ನಲ್ಲಿ ಡಾ. ರಾಜ್ ಕುಟುಂಬದವರ ಚಿತ್ರಗಳನ್ನು ಮಾತ್ರ ನಿರ್ಮಿಸಲಾಗುತ್ತಿತ್ತು. ಆದರೆ ಹೊಸ ಪ್ರತಿಭೆಗಳೊಂದಿಗೆ ಕನ್ನಡ ಚಿತ್ರರಂಗದ ಇತರ ನಾಯಕರಿಗೂ ಪುನೀತ್ ನಟನೆಯ ಅವಕಾಶ ನೀಡಲಿದ್ದಾರೆ. ವಜ್ರೇಶ್ವರಿ ಕಂಬೈನ್ಸ್‌ನಲ್ಲಿ ರಾಜ್ ಕುಟುಂಬದವರನ್ನು ಹೊರತು ಪಡಿಸಿ ಇನ್ನುಳಿದ ಯಾವ ನಾಯಕ ನಟನಿಗೆ ಅಭಿನಯಿಸುವ ಅವಕಾಶ ಸಿಗಲಿದೆಯೇ ಕಾದು ನೋಡಬೇಕಿದೆ. 2015ರಲ್ಲಿ ಹೊಸ ಚಿತ್ರ ಸೆಟ್ಟೇರುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ