ಸಿನಿಮಾ ಲೇಖನ

ನಿರ್ಮಾಣದತ್ತ ಪುನೀತ್ ಒಲವು!

ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್ ಅವರು ಇದೀಗ ಚಿತ್ರ ನಿರ್ಮಾಣದತ್ತ ಮುಖ ಮಾಡಿದ್ದಾರೆ ಎನ್ನುತ್ತಿದೆ ಮೂಲಗಳು!

ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್ ಅವರು ಇದೀಗ ಚಿತ್ರ ನಿರ್ಮಾಣದತ್ತ ಮುಖ ಮಾಡಿದ್ದಾರೆ ಎನ್ನುತ್ತಿದೆ ಮೂಲಗಳು!

ತಮ್ಮ ಕಂಠ ಸಿರಿಯ ಮೂಲಕ ಇತರ ನಾಯಕ ನಟರ ಚಿತ್ರಗಳಿಗೆ ಹಾಡಿದ್ದ ಪುನೀತ್, ಇದೀಗ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಅದು ಅವರು ಅಭಿನಯದ ಚಿತ್ರಗಳ ನಿರ್ಮಾಣದ ಬದಲು ಹೊಸ ಪ್ರತಿಭೆಗಳಿಗೆ ಉತ್ತಮ ಅವಕಾಶ ನೀಡಲು ಚಿಂತನೆ ನಡೆಸಿದ್ದಾರೆ. ಇದಕ್ಕಾಗಿ ಹೊಸದೊಂದು ನಿರ್ಮಾಣ ಸಂಸ್ಥೆಯನ್ನು ಪುನೀತ್ ಆರಂಭಿಸುತ್ತಿಲ್ಲ. ತಮ್ಮದೇ ಹೋಂ ಬ್ಯಾನರ್ ಆದ ವಜ್ರೇಶ್ವರಿ ಕಂಬೈನ್ಸ್‌ನ್ನೇ ಬಳಸಿಕೊಳ್ಳುತ್ತಿದ್ದಾರೆ.

ಇಲ್ಲಿಯವರೆಗೂ ವಜ್ರೇಶ್ವರಿ ಕಂಬೈನ್ಸ್‌ನಲ್ಲಿ ಡಾ. ರಾಜ್ ಕುಟುಂಬದವರ ಚಿತ್ರಗಳನ್ನು ಮಾತ್ರ ನಿರ್ಮಿಸಲಾಗುತ್ತಿತ್ತು. ಆದರೆ ಹೊಸ ಪ್ರತಿಭೆಗಳೊಂದಿಗೆ ಕನ್ನಡ ಚಿತ್ರರಂಗದ ಇತರ ನಾಯಕರಿಗೂ ಪುನೀತ್ ನಟನೆಯ ಅವಕಾಶ ನೀಡಲಿದ್ದಾರೆ. ವಜ್ರೇಶ್ವರಿ ಕಂಬೈನ್ಸ್‌ನಲ್ಲಿ ರಾಜ್ ಕುಟುಂಬದವರನ್ನು ಹೊರತು ಪಡಿಸಿ ಇನ್ನುಳಿದ ಯಾವ ನಾಯಕ ನಟನಿಗೆ ಅಭಿನಯಿಸುವ ಅವಕಾಶ ಸಿಗಲಿದೆಯೇ ಕಾದು ನೋಡಬೇಕಿದೆ. 2015ರಲ್ಲಿ ಹೊಸ ಚಿತ್ರ ಸೆಟ್ಟೇರುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT