ಹಿರಿಯ ಛಾಯಾಗ್ರಾಹಕ ಜಾನಕಿರಾಮ್ (ಚಿತ್ರಕೃಪೆ: ಚಿತ್ರಲೋಕ.ಕಾಮ್) 
ಸಿನಿಮಾ ಸುದ್ದಿ

ಹಿರಿಯ ಛಾಯಾಗ್ರಾಹಕ ಜಾನಕಿರಾಮ್ ನಿಧನ

ಹಿರಿಯ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕ ಜಾನಿಕಿರಾಮ್ (89 ವರ್ಷ)ಅವರು ಬುಧವಾರ ನಿಧನರಾಗಿದ್ದು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಹೈದರಾಬಾದ್: ಹಿರಿಯ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕ ಜಾನಿಕಿರಾಮ್ (89 ವರ್ಷ)ಅವರು ಬುಧವಾರ ನಿಧನರಾಗಿದ್ದು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಜಾನಿಕಿರಾಮ್ ಅವರನ್ನು ಇದೇ ಡಿಸೆಂಬರ್ 5ರಂದು ಹೈದರಾಬಾದಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿಯೇ ಪ್ರಜ್ಞೆ ಕಳೆದುಕೊಂಡಿದ್ದ ಜಾನಕಿರಾಮ್ ಅವರನ್ನು ವೈದ್ಯರು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡುತ್ತಿದ್ದರು. ಮತ್ತೊಂದು ಮೂಲಗಳ ಪ್ರಕಾರ ಜಾನಕಿರಾಮ್ ಅವರು ಆಸ್ಪತ್ರೆಗೆ ದಾಖಲಾದ ಬಳಿಕ ಕೋಮಾ ಸ್ಥಿತಿಯಲ್ಲಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಜಾನಕಿರಾಮ್ ಅವರು ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕನ್ನಡ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ ನಿರ್ಮಾಣ ಮಾಡಿದ್ದ ಜಾನಕಿರಾಮ್ ಅವರು, ಮಾನವ ದಾನವ, ಹಿಮಘಟ್ಟ, ಪೋಲಿ ಹುಡುಗ, ಕಾಸಿದ್ರೆ ಕೈಲಾಸ, ಅಜ್ಞಾತವಾಸ, ಬಲು ಅಪರೂಪ ನಮ್ ಜೋಡಿ ಹಾಗೂ ಸೆಂಟ್ರಲ್ ಜೈಲ್‌ನಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದರು. 80ರ ದಶಕದ ಯಶಸ್ವಿ ಛಾಯಾಗ್ರಾಹಕರ ಪಟ್ಟಿಯಲ್ಲಿ ಪ್ರಮುಖ ಸ್ಥಾನದಲ್ಲಿ ನಿಲ್ಲುವ ಜಾನಕಿರಾಮ್ ಅವರ ನಿಧನದಿಂದಾಗಿ ಚಿತ್ರರಂಗ ಆಘಾತಕ್ಕೊಳಗಾಗಿದ್ದು, ಚಿತ್ರರಂಗದ ವಿವಿಧ ಗಣ್ಯರು ಅವರ ಆತ್ಮಕ್ಕೆ ಶಾಂತಿಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT