ನಾಯಕ ನಟ ಅಜೇಯ್ ರಾವ್ 
ಸಿನಿಮಾ ಸುದ್ದಿ

ಅಜೇಯ್ ರಾವ್ ಗಿಂದು ಕಂಕಣಭಾಗ್ಯ

ಸಾಂಡಲ್ವುಡ್ ನಾಯಕ ನಟ ಅಜೇಯ್ ರಾವ್ ಅವರ ಮದುವೆ ಕೊಪ್ಪಳ ತಾಲೂಕಿನ...

ಕೊಪ್ಪಳ: ಸಾಂಡಲ್ ವುಡ್ ನಾಯಕ ನಟ ಅಜೇಯ್ ರಾವ್ ಅವರ ಮದುವೆ ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಹುಲಿಗೆಮ್ಮ ದೇವಸ್ಥಾನದಲ್ಲಿ ಇಂದು ಸರಳವಾಗಿ ನಡೆಯಲಿದೆ.

ಮದುವೆಯನ್ನು ಅತ್ಯಂತ ಗೌಪ್ಯವಾಗಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ ಪೊಲೀಸ್ ಬಂದೋಬಸ್ತ್ ನೆರವು ಪಡೆಯಲಾಗಿದೆ. ಪ್ರೀತಿಸಿ ಕುಟುಂಬದ ಸಮ್ಮತಿ ಪಡೆದು ಮದುವೆಯಾಗುತ್ತಿರುವುದು ವಿಶೇಷ. ಹುಲಿಗೆಮ್ಮ ದೇವಸ್ಥಾನದಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬೆಳಿಗ್ಗೆ 10 ರಿಂದ 10.30ರ ಮುಹೂರ್ತದಲ್ಲಿ ಮದುವೆ ನಡೆಯಲಿದೆ.

ವಧುವಿನ ಹೆಸರನ್ನು ಗೌಪ್ಯವಾಗಿ ಇಡಲಾಗಿದ್ದು, ಹೊಸಪೇಟೆ ಮೂಲದ ಎಂಜಿನಿಯರ್ ಒಬ್ಬರ ಮಗಳು ಎಂದು ಹೇಳಲಾಗುತ್ತಿದೆ. ಡಿ.20 ರಂದು ಬೆಂಗಳೂರಿನಲ್ಲಿ ಆರತಕ್ಷತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಅವರೇ ನಟಿಸಿರುವ ಜೈ ಬಜರಂಗ ಬಲಿ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಸಮಾರಂಭ ನಡೆಯಲಿದೆ. ಅಜೇಯ್ ಹೊಸಪೇಟೆಯವರು.

ಈ ಕುರಿತಂತೆ ದೇವಸ್ಥಾನ ಆಡಳಿತ ಮಂಡಳಿ ಪ್ರತಿನಿಧಿಯೊಬ್ಬರು ಮಾಹಿತಿ ನೀಡಿದ್ದು, ಮುನಿರಾಬಾದ್ ನಲ್ಲಿ ಈಗಾಗಲೇ ಒಂದು ಕೆಎಸ್ಆರ್ ಪಿ ತುಕಡಿ ಹಾಗೂ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT