ಮೈತ್ರಿ ಸಿನೆಮಾ ಭಿತ್ತಿ ಚಿತ್ರ 
ಸಿನಿಮಾ ಸುದ್ದಿ

ಜನವರಿ ಬಿಡುಗಡೆಗೆ ೨೦ಕ್ಕೂ ಹೆಚ್ಚು ಸಿನೆಮಾಗಳ ಕಾದಾಟ

ಸುಮಾರು ೨೦ ಕನ್ನಡ ಸಿನೆಮಾಗಳು

ಬೆಂಗಳೂರು: ಸುಮಾರು ೨೦ ಕನ್ನಡ ಸಿನೆಮಾಗಳು ಜನವರಿಯಲ್ಲೇ ಬಿಡುಗಡೆ ಕಾಣಲು ಸ್ಪರ್ಧೆಯಲ್ಲಿವೆ. ಏಕೆಂದರೆ ಫೆಬ್ರವರಿಯಲ್ಲಿ ಕ್ರಿಕೆಟ್ ವಿಶ್ವಕಪ್ ಸರಣಿ ಪ್ರಾರಂಭವಾಗಲಿದ್ದು, ಏಪ್ರಿಲ್ ನಲ್ಲಿ ಪರೀಕ್ಷೆಗಳು ಮತ್ತು ಐ ಪಿ ಎಲ್ ಸರಣಿ ಪ್ರಾರಂಭವಾಗುತ್ತದೆ.

ಸದ್ಯಕ್ಕೆ ಬಿಡುಗಡೆ ಕಾಯಂ ಆಗಿರುವ ಚಿತ್ರಗಳು ಇಂತಿವೆ. ಜನವರಿ ೧ ಮತ್ತು ೨ ರಂದು ಕ್ರಮವಾಗಿ ಗಣೇಶ್ ವರ 'ಖುಷಿ ಖುಷಿಯಾಗಿ' ಹಾಗು ಉಪೇಂದ್ರ ಅಭಿನಯದ 'ಶಿವಂ'. ಜನವರಿ ೯ ರಂದು 'ಪೈಪೋಟಿ' ಹಾಗೂ ಜನವರಿ ೧೪ ರಂದು ಜಾಕ್ಸನ್ ಬಿಡುಗಡೆಯನ್ನು ದೃಢೀಕರಿಸಿವೆ.

ಜನವರಿ ೨೩ ಕ್ಕೆ ಸಿದ್ಧಾರ್ಥ, ವಾಸ್ತು ಪ್ರಕಾರ ಹಾಗೂ ಕೃಷ್ಣಾ ಲೀಲಾ ಬಿಡುಗಡೆಯಾಗಲಿವೆ ಎಂಬ ಸುದ್ದಿ ಇದ್ದು ಇನ್ನೂ ಅಧಿಕೃತವಾಗಿ ಘೋಷಣೆಯಾಗಬೇಕಿದೆ.

ಇವಲ್ಲದೆ ಚಿತ್ರಮಂದಿರಗಳ ಮೇಲೆ ಕಣ್ಣಿಟ್ಟಿರುವ ಚಿತ್ರಗಳೆಂದರೆ ಅಭಿನೇತ್ರಿ, ರನ್ನ, ಮೈತ್ರಿ, ಮಳೆ, ಆರ್ ಎಕ್ಸ್ ಸೂರಿ ಮತ್ತು ರುದ್ರಾವತಾರ. ಸದ್ಯದ ವರದಿ ಪ್ರಕಾರ ಸುದೀಪ್ ಅವರ ರನ್ನ ಫೆಬ್ರವರಿಯಲ್ಲಿ ಹಾಗೂ ರಣ ವಿಕ್ರಮ ಮಾರ್ಚ್ ನಲ್ಲಿ ಬಿಡುಗಡೆ ಕಾಣಲಿವೆ.

ಕ್ರಿಕೆಟ್ ವರ್ಲ್ಡ್ ಕಪ್, ಪರೀಕ್ಷೆಗಳು ಕನ್ನಡ ಸಿನೆಮಾಗಳಿಗೆ ಅಡ್ಡಿಪಡಿಸುವುದನ್ನು ಹೊರತು ಪಡಿಸಿ ಪರಭಾಷಾ ಸಿನೆಮಾಗಳು ಕೂಡ ಕನ್ನಡ ಸಿನೆಮಾಗಳ ಪ್ರದರ್ಶನಕ್ಕೆ ತೊಡಕಾಗುತ್ತಿರುವುದು ದುರದೃಷ್ಟಕರ. ಶಂಕರ್ ನಿರ್ದೇಶನ ವಿಕ್ರಮ್ ಅಭಿನಯದ ದೊಡ್ಡ ಬಜೆಟ್ ಚಿತ್ರ "ಐ" ಕೂಡ ಜನವರಿ ೧೫ ಕ್ಕೆ ಬಿಡುಗಡೆಯಾಗುತ್ತಿದ್ದು ಇದು ಕೂಡ ಕನ್ನಡ ಸಿನೆಮಾಗಳಿಗೆ ಪೆಟ್ಟು ಕೊಡಲಿದೆ ಎಂಬುದು ಸಿನೆಮಾ ಪಂಡಿತರ ಅಭಿಪ್ರಾಯ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT