ಸಿನಿಮಾ ಸುದ್ದಿ

ನನಗೆ ನಿಶ್ಚಿತಾರ್ಥವಾಗಿಲ್ಲ: ತ್ರೀಶಾ

ನಿರ್ಮಾಪಕ, ಉದ್ಯಮಿ ವರುಣ್ ಮನಿಯನ್ ಅವರೊಡನೆ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕ್ರಿಷ್ಣನ್...

ಚೆನ್ನೈ: ನಿರ್ಮಾಪಕ, ಉದ್ಯಮಿ ವರುಣ್ ಮನಿಯನ್ ಅವರೊಡನೆ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ನಿಶ್ಚಿತಾರ್ಥವಾಗಿದ್ದು, ತ್ರಿಶಾ ಶೀಘ್ರದಲ್ಲೇ ಹಸೆಮಣೆ ಏರುವ ಸಿದ್ಧತೆಯಲ್ಲಿದ್ದಾರೆ ಎಂಬ ಗಾಳಿ ಮಾತಿಗೆ ತ್ರಿಶಾ ಗರಂ ಆಗಿದ್ದಾರೆ.

ಕನ್ನಡದಲ್ಲಿ ಬಿಡುಗಡೆಯಾದ 'ಪವರ್‌' ಚಿತ್ರದ ಯಶಸ್ಸಿನ ನಂತರ ಮತ್ತೆ ನಟನೆಯಲ್ಲಿ ಬ್ಯುಸಿಯಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ತ್ರೀಶಾ ಅವರಿಗೆ ನಿಶ್ಚಿತಾರ್ಥವಾಗಿದೆ ಎಂಬ ಗಾಳಿ ಮಾತನ್ನು ತ್ರಿಶಾ ತಳ್ಳಿ ಹಾಕಿದ್ದಾರೆ.

ನನಗೆ ನಿಶ್ಚಿತಾರ್ಥವಾಗಿಲ್ಲ. ಇದೊಂದು ವದಂತಿ ಎಂದು ಹೇಳುವ ಮೂಲಕ ಗಾಳಿ ಮಾತಿಗೆ ಎಳ್ಳುನೀರು ಬಿಟ್ಟಿದ್ದಾರೆ.

ತೆಲುಗು ಚಿತ್ರದಲ್ಲಿ ನಟ ಬಾಲಕೃಷ್ಣ ಅವರ ಜೋಡಿಯಾಗಿ ನಟಿಸುತ್ತಿರುವ ತ್ರೀಶಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಚಿತ್ರರಂಗದಲ್ಲಿ ತ್ರಿಶಾಗೆ ನಿಶ್ಚಿತಾರ್ಥವಾಗಿದೆ ಎಂಬ ಗಾಳಿ ಮಾತು ಹಬ್ಬಿದೆ. ನಿನ್ನೆಯಷ್ಟೇ ಟ್ವಿಟರ್‌ನಲ್ಲಿ ತ್ರಿಶಾ ಮತ್ತು ಉದ್ಯಮಿ ವರಣ್ ಮನಿಯನ್ ಜೊತೆ ನಿಶ್ಚಿತಾರ್ಥವಾಗಿದೆ ಎಂದು ಟ್ವೀಟ್ ಮಾಡಲಾಗಿತ್ತು.

ಇದಕ್ಕೆ ಗರಂ ಆಗಿರುವ ತ್ರಿಶಾ ನನಗೆ ನಿಶ್ಚಿತಾರ್ಥವಾಗಿಲ್ಲ. ಇದೆಲ್ಲಾ ಗಾಳಿ ಮಾತು ಎಂದು ಸ್ಪಷ್ಟನೆ ನೀಡಿದ್ದಾರೆ.

ತೆಲುಗು ನಟ ರಾಣಾ ಮತ್ತು ತ್ರಿಶಾ ನಡುವೆ ಸಮ್‌ಥಿಂಗ್ ಸಮ್‌ಥಿಂಗ್ ನಡೆಯುತ್ತಿದೆ ಎಂದು ಇಡೀ ಟಾಲಿವುಡ್‌ಗೆ ಗೊತ್ತಿತ್ತು. ಇತ್ತೀಚೆಗಷ್ಟೇ ಇವರಿಬ್ಬರ ನಡುವೆ ನಟಿ ರಾಗಿಣಿ ಎಂಟ್ರಿಕೊಟ್ಟಿದ್ದಾರೆ ಎಂಬ ವಿಷಯ ಹಬ್ಬುತ್ತಿದ್ದಂತೆ, ಇತ್ತ ತ್ರಿಶಾಗೆ ನಿಶ್ಚಿತಾರ್ಥವಾಗಿದೆ ಎಂಬ ವದಂತಿ ಹರಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT