ಉತ್ತಮ ವಿಲನ್ ಚಿತ್ರದಲ್ಲಿ ಕಮಲ ಹಾಸನ್ 
ಸಿನಿಮಾ ಸುದ್ದಿ

'ಉತ್ತಮ ವಿಲನ್' ನಿಷೇಧಕ್ಕೆ ವಿ ಎಚ್ ಪಿ ಕರೆ

ನಟ ನಿರ್ದೇಶಕ ಕಮಲಹಾಸನ್ ನಟನೆಯ 'ಉತ್ತಮ ವಿಲನ್' ಚಲನಚಿತ್ರ ಹಿಂದುಗಳ ಭಾವನೆಯನ್ನು ಘಾಸಿಗೊಳಿಸುತ್ತದೆ ಎಂದು ದೂರಿ ಚಲನಚಿತ್ರವನ್ನು

ಚೆನ್ನೈ: ನಟ ನಿರ್ದೇಶಕ ಕಮಲ ಹಾಸನ್ ನಟನೆಯ 'ಉತ್ತಮ ವಿಲನ್' ಚಲನಚಿತ್ರ ಹಿಂದುಗಳ ಭಾವನೆಯನ್ನು ಘಾಸಿಗೊಳಿಸುತ್ತದೆ ಎಂದು ದೂರಿ ಚಲನಚಿತ್ರವನ್ನು ನಿಷೇಧಿಸುವಂತೆ ಹಿಂದು ಸಂಘಟನೆ ವಿಶ್ವ ಹಿಂದು ಪರಿಷತ್ ನ ಸದಸ್ಯರು ಕರೆ ಕೊಟ್ಟಿದ್ದಾರೆ.

ಸೋಮವಾರ ಪೊಲೀಸ್ ಮಹಾನಿರ್ದೇಶಕರಿಗೆ ನೀಡಿರುವ ಹೇಳಿಕೆಯಲ್ಲಿ ಚಲನಚಿತ್ರದ ಹಾಡೊಂದಾದ "ಇರಾನಿಯನ್ ನಾಡಗಮ್" ನಲ್ಲಿ ಪ್ರಹ್ಲಾದ ಮತ್ತು ಹಿರಣ್ಯಕಶಿಪುವಿನ ನಡುವಿನ ಸಂಭಾಷಣೆಯನ್ನು ಬಹಳ ಲಘುವಾಗಿ ಪ್ರತಿನಿಧಿಸಿರುವುದು ಹಿಂದುಗಳ ಭಾವನೆಗೆ ಧಕ್ಕೆ ಉಂಟುಮಾಡುತ್ತದೆ ಎಂದು ದೂರಿದ್ದಾರೆ.

"ಈ ಹಾಡಿನ ಸಾಹಿತ್ಯ ವಿಷ್ಣು ಭಕ್ತರಿಗೆ ನೋವುಂಟು ಮಾಡುತ್ತದೆ. ಪ್ರಹ್ಲಾದ ಮತ್ತು ಹಿರಣ್ಯಕಶಿಪುವಿನ ನಡುವಿನ ಸಂಭಾಷಣೆಯನ್ನು ಬಹಳ ಲಘುವಾಗಿ ಪರಿಗಣಿಸುತ್ತದೆ. ಆದುದರಿಂದ ಚಲನಚಿತ್ರವನ್ನಿ ನಿಷೇಧಿಸಬೇಕೆಂದು" ವಿ ಎಚ್ ಪಿ ಸದಸ್ಯ ಕೆ ಎಲ್ ಸತ್ಯಮೂರ್ತಿ ಆಗ್ರಹಿಸಿದ್ದಾರೆ.

ಕನ್ನಡಿಗ ರಮೇಶ್ ಅರವಿಂದ ನಿರ್ದೇಶನದ ಈ ಚಲನಚಿತ್ರ ೮ನೆ ಶತಮಾನದ ರಂಗಭೂಮಿ ನಟ ಮತ್ತು ಆಧುನಿಕ ಯುಗದ ಸೂಪರ್ಸ್ಟಾರ್ ಬಗೆಗಿನ ಕಥೆ ಉಳ್ಳದ್ದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT